Homeಮುಖಪುಟಪಠ್ಯಪುಸ್ತಕಗಳಲ್ಲಿ 'INDIA ಬದಲಿಗೆ ಭಾರತ' ಸೇರಿಸಲು NCERT ಶಿಫಾರಸು

ಪಠ್ಯಪುಸ್ತಕಗಳಲ್ಲಿ ‘INDIA ಬದಲಿಗೆ ಭಾರತ’ ಸೇರಿಸಲು NCERT ಶಿಫಾರಸು

- Advertisement -
- Advertisement -

ಎಲ್ಲಾ ತರಗತಿಗಳ ಶಾಲಾ ಪಠ್ಯಪುಸ್ತಕಗಳಲ್ಲಿ ‘INDIA’ ಬದಲಿಗೆ ‘ಭಾರತ’ ಎಂದು ಸೇರಿಸಬೇಕು, ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರಚಿಸಿರುವ ಸಮಾಜ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಗೆ ಶಿಫಾರಸು ಮಾಡಲಾಗಿದೆ.

ಸಮಿತಿಯ ಅಧ್ಯಕ್ಷ ಸಿ ಐ ಐಸಾಕ್ ಪ್ರಕಾರ, ಸಮಿತಿಯು ಪಠ್ಯಪುಸ್ತಕಗಳಲ್ಲಿ ‘INDIA’ ಹೆಸರನ್ನು ‘ಭಾರತ್’ ಎಂದು ಬದಲಿಸಲು ಸಲಹೆ ನೀಡಿದೆ, ಪಠ್ಯಕ್ರಮದಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ ಮತ್ತು ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಅನ್ನು ಸೇರಿಸಲು ಹೇಳಲಾಗಿದೆ.

ಆದಾಗ್ಯೂ, ಸಮಿತಿಯ ಶಿಫಾರಸುಗಳ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಎನ್‌ಸಿಇಆರ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ.

”ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಲ್ಲಿ ಭಾರತ್ ಎಂಬ ಹೆಸರನ್ನು ಬಳಸಬೇಕೆಂದು ಸಮಿತಿಯು ಸರ್ವಾನುಮತದಿಂದ ಶಿಫಾರಸು ಮಾಡಿದೆ. ಪಠ್ಯಪುಸ್ತಕಗಳಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ವನ್ನು ಪರಿಚಯಿಸಲು ನಾವು ಶಿಫಾರಸು ಮಾಡಿದ್ದೇವೆ” ಎಂದು ಐಸಾಕ್ ಪಿಟಿಐಗೆ ತಿಳಿಸಿದರು.

ಸಮಿತಿಯು ಪಠ್ಯಪುಸ್ತಕಗಳಲ್ಲಿ ವಿವಿಧ ಯುದ್ಧಗಳಲ್ಲಿನ ಹಿಂದೂ ರಾಜರ ಗೆಲುವನ್ನು ಹೈಲೈಟ್ ಮಾಡಲು ಶಿಫಾರಸು ಮಾಡಿದೆ ಎಂದು ಅವರು ಹೇಳಿದರು.

”ನಮ್ಮ ವೈಫಲ್ಯಗಳನ್ನು ಪ್ರಸ್ತುತ ಪಠ್ಯಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ಮೊಘಲರು ಮತ್ತು ಸುಲ್ತಾನರ ಮೇಲಿನ ನಮ್ಮ ವಿಜಯಗಳ ಬಗ್ಗೆ ಉಲ್ಲೇಖಿಸಲಾಗಿಲ್ಲ ಎಂದು ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ (ICHR) ಸದಸ್ಯರೂ ಆಗಿರುವ ಐಸಾಕ್ ಹೇಳಿದರು.

ಎನ್‌ಸಿಇಆರ್‌ಟಿಯು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ಕ್ಕೆ ಅನುಗುಣವಾಗಿ ಶಾಲಾ ಪಠ್ಯಪುಸ್ತಕಗಳ ಪಠ್ಯಕ್ರಮವನ್ನು ಪರಿಷ್ಕರಿಸುತ್ತಿದೆ. ಕೌನ್ಸಿಲ್ ಇತ್ತೀಚೆಗೆ ಪಠ್ಯಕ್ರಮ, ಪಠ್ಯಪುಸ್ತಕಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ಅಂತಿಮಗೊಳಿಸಲು 19 ಸದಸ್ಯರ ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿಯನ್ನು (ಎನ್‌ಎಸ್‌ಟಿಸಿ) ರಚಿಸಿದೆ.

”ಎಲ್ಲಾ ವಿಷಯಗಳ ಪಠ್ಯಕ್ರಮದಲ್ಲಿ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಯನ್ನು ಪರಿಚಯಿಸಲು ಸಮಿತಿಯು ಶಿಫಾರಸು ಮಾಡಿದೆ” ಎಂದು ಐಸಾಕ್ ಹೇಳಿದರು.

ಸಮಿತಿಯ ಇತರ ಸದಸ್ಯರಲ್ಲಿ ಐಸಿಎಚ್‌ಆರ್ ಅಧ್ಯಕ್ಷ ರಘುವೇಂದ್ರ ತನ್ವಾರ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪ್ರಾಧ್ಯಾಪಕಿ ವಂದನಾ ಮಿಶ್ರಾ, ಡೆಕ್ಕನ್ ಕಾಲೇಜ್ ಡೀಮ್ಡ್ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ವಸಂತ ಶಿಂಧೆ ಮತ್ತು ಹರಿಯಾಣ ಸರ್ಕಾರಿ ಶಾಲೆಯಲ್ಲಿ ಸಮಾಜಶಾಸ್ತ್ರ ಬೋಧಿಸುವ ಮಮತಾ ಯಾದವ್ ಇರಲಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿಗೆ ಮೋದಿ ಸರ್ಕಾರದ ಲೋಪವೇ ಕಾರಣ: ರಾಹುಲ್ ಸಂದರ್ಶನದಲ್ಲಿ ಮಲಿಕ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...