Homeಮುಖಪುಟ477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

- Advertisement -
- Advertisement -

ವಿವಿಧ ಉಲ್ಲಂಘನೆಗಳು ಮತ್ತು ನಿಯಮಗಳ ಪಾಲನೆಯಲ್ಲಿ ವೈಫಲ್ಯಗಳಿಗಾಗಿ ಹಲವು ಕೇಬಲ್ ಟೆಲಿವಿಷನ್ ಸಿಸ್ಟಮ್‌ಗಳನ್ನು ನಡೆಸುತ್ತಿರುವ 477 ಮಲ್ಟಿ ಸಿಸ್ಟಮ್ ಆಪರೇಟರ್‌ಗಳ (ಎಂಎಸ್‌ಒ) ನೋಂದಣಿಯನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರದ್ದುಗೊಳಿಸಿದೆ.

MSOಗಳು ಕೇಬಲ್ ಟೆಲಿವಿಷನ್ ನೆಟ್ವರ್ಕ್ಸ್ (ನಿಯಂತ್ರಣ) ಕಾಯ್ದೆಯ ನಿಬಂಧನೆಗಳನ್ನು ಮತ್ತು ಅವುಗಳಡಿಯ ನಿಯಮಗಳನ್ನು ಪಾಲಿಸಬೇಕು ಮತ್ತು ಇತರ ಮಾರ್ಗಸೂಚಿಗಳಿಗೆ ಬದ್ಧರಾಗಿರಬೇಕು ಎನ್ನುವುದು ನೋಂದಣಿ ಷರತ್ತುಗಳಲ್ಲೊಂದಾಗಿದೆ.

ಷರತ್ತು ಮೀರಿದರೆ ನೀಡಲಾದ ಅನುಮತಿಯನ್ನು ರದ್ದುಗೊಳಿಸಬಹುದು ಅಥವಾ ಅಮಾನತುಗೊಳಿಸಬಹುದು. ಎಂಎಸ್‌ಒಗಳು ತಮ್ಮ ಚಂದಾದಾರರ ಪಟ್ಟಿಯನ್ನು ಮತ್ತು ಕಾಲಕಾಲಕ್ಕೆ ಸಚಿವಾಲಯವು ಮಾಡಿದ ವಿನಂತಿಗಳ ಪ್ರಕಾರ ಇತರ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಇದಲ್ಲದೆ, ಇಂಟರ್‌ಕನೆಕ್ಷನ್ ರೆಗ್ಯುಲೇಷನ್ಸ್, 2017  ನಿಯಮ 15(1) ರ ಪ್ರಕಾರ, ಪ್ರತಿ ಚಾನೆಲ್‌ಗಳ ವಿತರಕರು ಕ್ಯಾಲೆಂಡರ್ ವರ್ಷದಲ್ಲಿ ಒಮ್ಮೆ ತಮ್ಮ ಸಿಸ್ಟಮ್‌ನ ಆಡಿಟ್ ಅನ್ನು ನಡೆಸುವುದು ಕಡ್ಡಾಯವಾಗಿದೆ ಎಂದು ಸಚಿವಾಲಯ ಹೇಳಿದೆ.

ಆದಾಗ್ಯೂ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಹಂಚಿಕೊಂಡ ಮಾಹಿತಿಯ ಪ್ರಕಾರ, ಪರಿಶೀಲನೆಯಲ್ಲಿರುವ MSOಗಳು 2021 ಮತ್ತು/ಅಥವಾ 2022ರ ಕ್ಯಾಲೆಂಡರ್ ವರ್ಷಗಳಿಗೆ ತಮ್ಮ ಸಿಸ್ಟಮ್‌ಗಳ ಲೆಕ್ಕಪರಿಶೋಧನೆಗಳನ್ನು ನಡೆಸಿಲ್ಲ ಎಂದು ಸಚಿವಾಲಯವು ಗಮನಿಸಿದೆ.

ನಿಯಮಗಳ ಉಲ್ಲಂಘನೆಗಾಗಿ ಈ MSO ಗಳಿಗೆ ಜು.25ರಂದು ಶೋಕಾಸ್ ನೋಟಿಸ್‌ಗಳನ್ನು ಹೊರಡಿಸಲಾಗಿತ್ತು ಮತ್ತು ಉತ್ತರಿಸಲು 15 ದಿನಗಳ ಸಮಯಾವಕಾಶವನ್ನು ನೀಡಲಾಗಿತ್ತು. ಆದರೆ ಇದಕ್ಕೆ ಅವು ಪ್ರತಿಕ್ರಿಯಿಸಿರಲಿಲ್ಲ. ಸೆ.20ರಂದು ಮತ್ತೊಮ್ಮೆ ಅವಕಾಶ ನೀಡಿ ಅ.10ರವರೆಗೆ ಗಡುವು ನೀಡಲಾಗಿತ್ತು. ಆದಾಗ್ಯೂ MSOಗಳು ಅಗತ್ಯ ವಿವರಗಳನ್ನು ಸಲ್ಲಿಸಿರಲಿಲ್ಲ. ಹೀಗಾಗಿ ಅಂತಿಮವಾಗಿ ಅವುಗಳ ನೋಂದಣಿಗಳನ್ನು ರದ್ದುಗೊಳಿಸಲಾಗಿದೆ.

”… ನಿಗದಿತ ಅವಧಿಯೊಳಗೆ ನಿಗದಿತ MSO ಗಳು ಅಗತ್ಯವಾದ ಸ್ಪಷ್ಟೀಕರಣ ಅಥವಾ ವಿವರಣೆಯನ್ನು ನೀಡಿಲ್ಲ ಎಂದು ಗಮನಿಸಲಾಗಿದೆ, ಆದ್ದರಿಂದ, ಈ MSO ಗಳಿಗೆ ಆಗಸ್ಟ್ 24, 202 ರ ದಿನಾಂಕದವರೆಗೆ ಗಡುವು ನೀಡಲಾಯಿತು, ಅದರಲ್ಲಿ ಅಗತ್ಯವಿರುವ ಮಾಹಿತಿಯನ್ನು ಒದಗಿಸುವಂತೆ ಕೇಳಲಾಯಿತು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದರೆ, MSOಗಳು ನಿಗದಿತ ಅವಧಿಯೊಳಗೆ ಅಗತ್ಯ ವಿವರಗಳನ್ನು ನೀಡಿಲ್ಲ. ಕೊನೆಯ ಅವಕಾಶ, ಸೆಪ್ಟೆಂಬರ್ 20ರ ದಿನಾಂಕದ ಪತ್ರಗಳನ್ನು ಮತ್ತೊಮ್ಮೆ ಅವರಿಗೆ ಕಳುಹಿಸಲಾಯಿತು. ಗಡುವನ್ನು ಅಕ್ಟೋಬರ್ 10 ರವರೆಗೆ ವಿಸ್ತರಿಸಲಾಯಿತು. ಅವರು ಪ್ರತಿಕ್ರಿಯಿಸದ ಕಾರಣ ಅಥವಾ ಅಗತ್ಯ ವಿವರಗಳನ್ನು ನೀಡದ ಕಾರಣ, ಅಂತಿಮವಾಗಿ ಅವರ ನೋಂದಣಿಗಳನ್ನು ರದ್ದುಗೊಳಿಸಲಾಯಿತು.

ಉಲ್ಲಂಘಿಸುವ MSOಗಳಿಗೆ 30 ದಿನಗಳ ಒಳಗೆ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿಯ ಮುಂದೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮತ್ತೊಂದು ಅವಕಾಶವನ್ನು ನೀಡಲಾಗಿದೆ.

ಆದೇಶದ ವಿರುದ್ಧ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿಗಳಿಗೆ 30 ದಿನಗಳಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲು ನೋಂದಣಿ ರದ್ದುಗೊಂಡಿರುವ MSOಗಳಿಗೆ ಇನ್ನೊಂದು ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ: ದೇವಾಲಯದ ಆವರಣದಲ್ಲಿ RSS ಚಟುವಟಿಕೆಗೆ ನಿಷೇಧ: ಕೇರಳ ಸರ್ಕಾರದ ಸುತ್ತೋಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...