Homeಮುಖಪುಟ477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

- Advertisement -
- Advertisement -

ವಿವಿಧ ಉಲ್ಲಂಘನೆಗಳು ಮತ್ತು ನಿಯಮಗಳ ಪಾಲನೆಯಲ್ಲಿ ವೈಫಲ್ಯಗಳಿಗಾಗಿ ಹಲವು ಕೇಬಲ್ ಟೆಲಿವಿಷನ್ ಸಿಸ್ಟಮ್‌ಗಳನ್ನು ನಡೆಸುತ್ತಿರುವ 477 ಮಲ್ಟಿ ಸಿಸ್ಟಮ್ ಆಪರೇಟರ್‌ಗಳ (ಎಂಎಸ್‌ಒ) ನೋಂದಣಿಯನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರದ್ದುಗೊಳಿಸಿದೆ.

MSOಗಳು ಕೇಬಲ್ ಟೆಲಿವಿಷನ್ ನೆಟ್ವರ್ಕ್ಸ್ (ನಿಯಂತ್ರಣ) ಕಾಯ್ದೆಯ ನಿಬಂಧನೆಗಳನ್ನು ಮತ್ತು ಅವುಗಳಡಿಯ ನಿಯಮಗಳನ್ನು ಪಾಲಿಸಬೇಕು ಮತ್ತು ಇತರ ಮಾರ್ಗಸೂಚಿಗಳಿಗೆ ಬದ್ಧರಾಗಿರಬೇಕು ಎನ್ನುವುದು ನೋಂದಣಿ ಷರತ್ತುಗಳಲ್ಲೊಂದಾಗಿದೆ.

ಷರತ್ತು ಮೀರಿದರೆ ನೀಡಲಾದ ಅನುಮತಿಯನ್ನು ರದ್ದುಗೊಳಿಸಬಹುದು ಅಥವಾ ಅಮಾನತುಗೊಳಿಸಬಹುದು. ಎಂಎಸ್‌ಒಗಳು ತಮ್ಮ ಚಂದಾದಾರರ ಪಟ್ಟಿಯನ್ನು ಮತ್ತು ಕಾಲಕಾಲಕ್ಕೆ ಸಚಿವಾಲಯವು ಮಾಡಿದ ವಿನಂತಿಗಳ ಪ್ರಕಾರ ಇತರ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಇದಲ್ಲದೆ, ಇಂಟರ್‌ಕನೆಕ್ಷನ್ ರೆಗ್ಯುಲೇಷನ್ಸ್, 2017  ನಿಯಮ 15(1) ರ ಪ್ರಕಾರ, ಪ್ರತಿ ಚಾನೆಲ್‌ಗಳ ವಿತರಕರು ಕ್ಯಾಲೆಂಡರ್ ವರ್ಷದಲ್ಲಿ ಒಮ್ಮೆ ತಮ್ಮ ಸಿಸ್ಟಮ್‌ನ ಆಡಿಟ್ ಅನ್ನು ನಡೆಸುವುದು ಕಡ್ಡಾಯವಾಗಿದೆ ಎಂದು ಸಚಿವಾಲಯ ಹೇಳಿದೆ.

ಆದಾಗ್ಯೂ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಹಂಚಿಕೊಂಡ ಮಾಹಿತಿಯ ಪ್ರಕಾರ, ಪರಿಶೀಲನೆಯಲ್ಲಿರುವ MSOಗಳು 2021 ಮತ್ತು/ಅಥವಾ 2022ರ ಕ್ಯಾಲೆಂಡರ್ ವರ್ಷಗಳಿಗೆ ತಮ್ಮ ಸಿಸ್ಟಮ್‌ಗಳ ಲೆಕ್ಕಪರಿಶೋಧನೆಗಳನ್ನು ನಡೆಸಿಲ್ಲ ಎಂದು ಸಚಿವಾಲಯವು ಗಮನಿಸಿದೆ.

ನಿಯಮಗಳ ಉಲ್ಲಂಘನೆಗಾಗಿ ಈ MSO ಗಳಿಗೆ ಜು.25ರಂದು ಶೋಕಾಸ್ ನೋಟಿಸ್‌ಗಳನ್ನು ಹೊರಡಿಸಲಾಗಿತ್ತು ಮತ್ತು ಉತ್ತರಿಸಲು 15 ದಿನಗಳ ಸಮಯಾವಕಾಶವನ್ನು ನೀಡಲಾಗಿತ್ತು. ಆದರೆ ಇದಕ್ಕೆ ಅವು ಪ್ರತಿಕ್ರಿಯಿಸಿರಲಿಲ್ಲ. ಸೆ.20ರಂದು ಮತ್ತೊಮ್ಮೆ ಅವಕಾಶ ನೀಡಿ ಅ.10ರವರೆಗೆ ಗಡುವು ನೀಡಲಾಗಿತ್ತು. ಆದಾಗ್ಯೂ MSOಗಳು ಅಗತ್ಯ ವಿವರಗಳನ್ನು ಸಲ್ಲಿಸಿರಲಿಲ್ಲ. ಹೀಗಾಗಿ ಅಂತಿಮವಾಗಿ ಅವುಗಳ ನೋಂದಣಿಗಳನ್ನು ರದ್ದುಗೊಳಿಸಲಾಗಿದೆ.

”… ನಿಗದಿತ ಅವಧಿಯೊಳಗೆ ನಿಗದಿತ MSO ಗಳು ಅಗತ್ಯವಾದ ಸ್ಪಷ್ಟೀಕರಣ ಅಥವಾ ವಿವರಣೆಯನ್ನು ನೀಡಿಲ್ಲ ಎಂದು ಗಮನಿಸಲಾಗಿದೆ, ಆದ್ದರಿಂದ, ಈ MSO ಗಳಿಗೆ ಆಗಸ್ಟ್ 24, 202 ರ ದಿನಾಂಕದವರೆಗೆ ಗಡುವು ನೀಡಲಾಯಿತು, ಅದರಲ್ಲಿ ಅಗತ್ಯವಿರುವ ಮಾಹಿತಿಯನ್ನು ಒದಗಿಸುವಂತೆ ಕೇಳಲಾಯಿತು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದರೆ, MSOಗಳು ನಿಗದಿತ ಅವಧಿಯೊಳಗೆ ಅಗತ್ಯ ವಿವರಗಳನ್ನು ನೀಡಿಲ್ಲ. ಕೊನೆಯ ಅವಕಾಶ, ಸೆಪ್ಟೆಂಬರ್ 20ರ ದಿನಾಂಕದ ಪತ್ರಗಳನ್ನು ಮತ್ತೊಮ್ಮೆ ಅವರಿಗೆ ಕಳುಹಿಸಲಾಯಿತು. ಗಡುವನ್ನು ಅಕ್ಟೋಬರ್ 10 ರವರೆಗೆ ವಿಸ್ತರಿಸಲಾಯಿತು. ಅವರು ಪ್ರತಿಕ್ರಿಯಿಸದ ಕಾರಣ ಅಥವಾ ಅಗತ್ಯ ವಿವರಗಳನ್ನು ನೀಡದ ಕಾರಣ, ಅಂತಿಮವಾಗಿ ಅವರ ನೋಂದಣಿಗಳನ್ನು ರದ್ದುಗೊಳಿಸಲಾಯಿತು.

ಉಲ್ಲಂಘಿಸುವ MSOಗಳಿಗೆ 30 ದಿನಗಳ ಒಳಗೆ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿಯ ಮುಂದೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮತ್ತೊಂದು ಅವಕಾಶವನ್ನು ನೀಡಲಾಗಿದೆ.

ಆದೇಶದ ವಿರುದ್ಧ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿಗಳಿಗೆ 30 ದಿನಗಳಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲು ನೋಂದಣಿ ರದ್ದುಗೊಂಡಿರುವ MSOಗಳಿಗೆ ಇನ್ನೊಂದು ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ: ದೇವಾಲಯದ ಆವರಣದಲ್ಲಿ RSS ಚಟುವಟಿಕೆಗೆ ನಿಷೇಧ: ಕೇರಳ ಸರ್ಕಾರದ ಸುತ್ತೋಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...