Homeಕರ್ನಾಟಕವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಸ್ಥಿತಿಯಲ್ಲಿ ಬಿಜೆಪಿ: ಜಗದೀಶ್ ಶೆಟ್ಟರ್

ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಸ್ಥಿತಿಯಲ್ಲಿ ಬಿಜೆಪಿ: ಜಗದೀಶ್ ಶೆಟ್ಟರ್

- Advertisement -
- Advertisement -

ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ‌ ಹೆಸರು ಕೇಳಿ ಬರುತ್ತಿದ್ದು, ಯಾರು ಅಧ್ಯಕ್ಷರು ಎನ್ನುವುದು ಬಹಿರಂಗವಾಗಿ ಹೇಳುತ್ತಿಲ್ಲ. ದೆಹಲಿ ವರಿಷ್ಠರು ಒಂದು ಹೆಸರು ತೇಲಿಬಿಟ್ಟರು ಅದರ ಪ್ರತಿಕ್ರಿಯೆಗಳನ್ನು ನೋಡಿ ಅದು ಫೇಲ್ ಆಯಿತು. ಹಾಗಾಗಿ ಈಗ ಮತ್ತೆ ಬೇರೆ ಹೆಸರಿನ ಪ್ರಯೋಗ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಶೋಭಾ ಕರಂದ್ಲಾಜೆ ಊಹಾಪೋಹ ಅಂತ ಹೇಳಿದ್ದಾರೆ. ರಾಜ್ಯಧ್ಯಕ್ಷರನ್ನು, ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು” ಎಂದರು

”ಕಾಂಗ್ರೆಸ್ ಸರ್ಕಾರಕ್ಕೆ ಏನು ಆಗುವುದಿಲ್ಲ. ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು, ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನದ ಭಾಗವಾಗಿ, ಸಂಕ್ರಾಂತಿ ನಂತರ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಹೇಳುತ್ತಾ ಅವರಲ್ಲಿ ಆಶಾಭಾವನೆ ಮೂಡಿಸಸುವ ಪ್ರಯತ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತದೆ. 104 ಇದ್ದಾಗಾಲೇ ಏನು ಮಾಡಲು ಆಗಿಲ್ಲ ಈಗ ಏನು ಮಾಡಲು ಸಾಧ್ಯ? ಎಂದು ಶೆಟ್ಟರ್ ಸವಾಲು ಹಾಕಿದ್ದಾರೆ.

ಡಿಕೆಶಿ-ಹೆಚ್‌ಡಿಕೆ ನಡುವಿನ ಕಿತ್ತಾಡದ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, ”ಬೆಂಗಳೂರು ಸಾಕಷ್ಟು ಬೆಳವಣಿಗೆ ಆಗಿದೆ. ನೂರಾರು ಹಳ್ಳಿಗಳು ಬೆಂಗಳೂರಿಗೆ ಸೇರುತ್ತಿವೆ. ಇದಕ್ಕೆ ಕನಕಪುರ ಹೊರತಾಗಿಲ್ಲ. ಕನಕಪುರ ಬೆಂಗಳೂರು ಗ್ರಾಮೀಣದ ಒಂದು ಭಾಗ. ಸಹಜವಾಗಿ ಕನಕಪುರ ಬೆಂಗಳೂರು ನಗರಕ್ಕೆ ಸೇರಿದೆ ಎನ್ನುವುದರಲ್ಲಿ ಆಶ್ಚರ್ಯಪಡುವಂತಹ ವಿಚಾರ ಏನಿದೆ. ಇದಕ್ಕೆ ವಿಶೇಷ ಕಾಮೆಂಟ್ ಮಾಡುವ ಅವಶ್ಯಕತೆ ಇಲ್ಲ. ಡಿಕೆಶಿ ಕನಕಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ ಹೊರತು ಜಿಲ್ಲೆಯ ಬಗ್ಗೆ ಹೇಳಿಲ್ಲ” ಎಂದರು.

”ಡಿಕೆಶಿ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ಅವರು ಅಭಿವೃದ್ಧಿಗೆ ಒತ್ತು ನೀಡುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಎಲ್ಲವನ್ನೂ ರಾಜಕೀಯ ಮಾಡಲಾಗುತ್ತಿದೆ. ಇದನ್ನು ಬಿಟ್ಟು ಇಡೀ ವ್ಯವಸ್ಥೆಗೆ ಅನುಕೂಲ ಆಗುವುದನ್ನು ನೋಡಬೇಕು” ಎಂದು ಹೇಳಿದರು.

”ಕುಮಾರಸ್ವಾಮಿ ಏನೇ ಟಿಕೆ ಮಾಡಿದರು ಅದಕ್ಕೆ ಪುರಾವೆ ಇರಬೇಕು. ಜಾರ್ಜ್ ಮನೆಯಲ್ಲಿ ಸಿದ್ದರಾಮಯ್ಯ ಏನು ಮಾಡಿದರು ಅಂತ ಪ್ರಶ್ನೆ ಮಾಡಿದರೆ, ಅದು ಪ್ರಶ್ನೆಯಾಗಿಯೇ ಉಳಿಯಲಿದೆ. ಪೆನ್ ಡ್ರೈವ್ ವಿಚಾರದಲ್ಲಿಯೂ‌ ಇದೆ ಆಯಿತು. ಟೀಕೆ ಮಾಡುವ ಸಲುವಾಗಿ ಟ್ವೀಟ್ ಮಾಡಿದರೆ ಅದರಿಂದ ಏನು ಉಪಯೋಗ ಆಗುವುದಿಲ್ಲ. ಮಾಧ್ಯಮದಲ್ಲಿ ಚರ್ಚೆ ಆಗುತ್ತೆ ಹೊರೆತು ವಾಸ್ತವವಾಗಿ ಏನು ಗೊತ್ತಾಗುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ದೇವಾಲಯದ ಆವರಣದಲ್ಲಿ RSS ಚಟುವಟಿಕೆಗೆ ನಿಷೇಧ: ಕೇರಳ ಸರ್ಕಾರದ ಸುತ್ತೋಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...