Homeಮುಖಪುಟಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ BJP ನಾಯಕನ ಮೇಲೆ BRS ಶಾಸಕನಿಂದ ಹಲ್ಲೆ

ಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ BJP ನಾಯಕನ ಮೇಲೆ BRS ಶಾಸಕನಿಂದ ಹಲ್ಲೆ

- Advertisement -
- Advertisement -

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ತೆಲುಗು ಸುದ್ದಿ ವಾಹಿನಿಯೊಂದು ನಡೆಸಿದ ಚರ್ಚೆಯ ನೇರಪ್ರಸಾರ ಕಾರ್ಯಕ್ರಮದಲ್ಲಿ ಆಡಳಿತಾರೂಢ ಬಿಆರ್‌ಎಸ್ ಶಾಸಕರೊಬ್ಬರು, ಬಿಜೆಪಿ ಮುಖಂಡನ ಮೇಲೆ ಬಹಿರಂಗ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಈ ವೇಳೆ ಪೊಲೀಸರು ಮತ್ತು ಇತರರು ಮಧ್ಯಪ್ರವೇಶಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.

ಹೈದರಾಬಾದ್ ನ ಕುತುಬಲ್ಲಾಪುರ ಕ್ಷೇತ್ರದ ಬಿಆರ್‌ಎಸ್ ಶಾಸಕ ಕೆ.ಪಿ.ವಿವೇಕಾನಂದ, ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುನಾ ಶ್ರೀಶೈಲಂ ಗೌಡ್ ಮೇಲೆ ಹಲ್ಲೆ ನಡೆಸಿದ್ದಾಗಿ ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಜಿ.ಕಿಶನ್ ರೆಡ್ಡಿ ಆರೋಪಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದೇ ತಾಳ್ಮೆ ಕಳೆದುಕೊಂಡ ಶಾಸಕರು ಹಲ್ಲೆ ನಡೆಸಿದ್ದಾಗಿ ಅವರು ಹೇಳಿದ್ದಾರೆ.

ಕುನಾ ಶ್ರೀಶೈಲಂ ಗೌಡ್ ಅವರ ಕತ್ತಿನ ಪಟ್ಟಿ ಹಿಡಿದು ವಿವೇಕಾನಂದ ಹಲ್ಲೆ ನಡೆಸಿದ ಕ್ರಮ ಅಂಜುಬುರುಕತನದ್ದು ಎಂದು ಅವರು ಹೇಳಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸದಿದ್ದರೆ, ಕಾನೂನಾತ್ಮಕ ಹೋರಾಟ ಆರಂಭಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

“ಚರ್ಚೆಯಲ್ಲಿ ಇಬ್ಬರೂ ಸಭ್ಯತೆಯನ್ನು ಪಾಲಿಸಬೇಕಾದದ್ದು ಅಗತ್ಯವಾದರೂ, ಬಿಜೆಪಿ ಮುಖಂಡ ಶಾಸಕರ ತಂದೆಯ ಹೆಸರನ್ನು ಎತ್ತಿಕೊಂಡರು” ಎಂದು ಬಿಆರ್‌ಎಸ್ ವಕ್ತಾರ ಶ್ರವಣ್ ದಸೋಜು ಪ್ರತಿಕ್ರಿಯಿಸಿದ್ದಾರೆ.

ಗೌಡ್ ಅವರು ವಿವೇಕಾನಂದ ಅವರ ಮೇಲೆ ವಾಗ್ದಾಳಿ ನಡೆಸುವ ವೇಳೆ ಅವರ ತಂದೆ-ತಾಯಿಯ ಹೆಸರು ಬಳಕೆ ಮಾಡಬಾರದಿತ್ತು ಹಾಗೂ ಶಾಸಕರು ಕೂಡಾ ಎದುರಾಳಿಯ ಮೇಲೆ ದಾಳಿ ಮಾಡಬಾರದಿತ್ತು. ಇಬ್ಬರೂ ಸಂಯಮ ಹೊಂದಿರಬೇಕಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆ ಕುರಿತು ಬಿಆರ್‌ಎಸ್ ವಕ್ತಾರ ಶ್ರವಣ್ ದಾಸೋಜು ಅವರು ಗೌಡ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ”ಬಿಆರ್‌ಎಸ್ ಶಾಸಕರ ತಂದೆಯ ಬಗ್ಗೆ ಗೌಡ್ ಉಲ್ಲೇಖಿಸಿದ್ದಾರೆ. ಇಬ್ಬರೂ ಚರ್ಚೆಯ ಸಮಯದಲ್ಲಿ ಸಭ್ಯತೆ ಮತ್ತು ಸೌಜನ್ಯವನ್ನು ಕಾಪಾಡಿಕೊಳ್ಳಬೇಕಾಗಿತ್ತು.ವಿವೇಕಾನಂದರು ಹಾಲಿ ಶಾಸಕರಾಗಿದ್ದರೆ, ಶ್ರೀಶೈಲಂ ಗೌಡ್ ಮೊದಲು ಶಾಸಕರಾಗಿದ್ದರು ಎಂದು ಅವರು ಹೇಳಿದರು.

ಇಬ್ಬರೂ ಸಭ್ಯತೆ, ಸಭ್ಯತೆಯನ್ನು ಕಾಪಾಡಿಕೊಂಡಿರಬೇಕು” ಮತ್ತು ಸಂಯಮದಿಂದಿರಬೇಕು. ಗೌಡ್ ಅವರು ವಿವೇಕಾನಂದರ ಪೋಷಕರ ಬಗ್ಗೆ ಮಾತನಾಡುವ ಬದಲು ಚರ್ಚೆಯ ಕುರಿತು ಮಾತನಾಡಬೇಕಿತ್ತು. ಇಬ್ಬರೂ ಸಂವೇದನಾಶೀಲರಾಗಿ ನಡೆದುಕೊಳ್ಳಬೇಕಿತ್ತು ಏಕೆಂದರೆ ಇಡೀ ಜಗತ್ತು ತಮ್ಮನ್ನು ಗಮನಿಸುತ್ತಿದೆ ಎಂದು ಅರಿತುಕೊಳ್ಳಬಹುದಿತ್ತು ಎಂದು ದಾಸೋಜು ಹೇಳಿದರು.

ಇದನ್ನೂ ಓದಿ: 477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...