Homeಸಾಹಿತ್ಯ-ಸಂಸ್ಕೃತಿಕಥೆಅವಕಾಶಗಳ ಬಾಲ ಕೈ ಬಿಟ್ಟಾಗ

ಅವಕಾಶಗಳ ಬಾಲ ಕೈ ಬಿಟ್ಟಾಗ

- Advertisement -
- Advertisement -

ಇಪ್ಪತ್ತೈದು ವಯಸ್ಸಿನ ಸ್ಫುರದ್ರೂಪಿ ಯುವಕ. ಪಕ್ಕದೂರಿನ ರೈತನೊಬ್ಬನ ಮಗಳ ಮೇಲೆ ಅವನಿಗೆ ಒಲವಾಯಿತು. ಆಕೆಯನ್ನೇ ಮದುವೆಯಾಗಬೇಕೆಂದು ನಿರ್ಧರಿಸಿಕೊಂಡ. ಸೀದಾ ಆ ಹುಡುಗಿಯ ಅಪ್ಪನ ಮುಂದೆ ಬಂದು ನಿಂತ.
`ನಾನು ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ. ಅವಳನ್ನು ಮದುವೆಯಾಗುತ್ತೇನೆ. ದಯವಿಟ್ಟು ಅಪ್ಪಣೆ ಕೊಡಿ’ ಹುಡುಗ ಪ್ರಾಮಾಣಿಕವಾಗಿ ತನ್ನ ಮನದಾಸೆಯನ್ನು ಹುಡುಗಿಯ ಅಪ್ಪನೆದುರು ಬಿಚ್ಚಿಟ್ಟ.
ರೈತ, ಹುಡುಗನನ್ನು ಒಮ್ಮೆ ದಿಟ್ಟಿಸಿ ನೋಡಿದ. ಸಿರಿವಂತಿಕೆಯ ಲಕ್ಷಣಗಳು ಅವನ ದೇಹದಿಂದ ಚಿಮ್ಮಿ ಬರುತ್ತಿದ್ದವು.
ಒಂದು ನಿರ್ಧಾರಿತ ಧ್ವನಿಯಲ್ಲಿ ರೈತ ನುಡಿದ, `ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡಲು ನನಗೆ ಯಾವ ಅಭ್ಯಂತರವೂ ಇಲ್ಲ. ಆದರೆ ನಾನು ಒಂದು ಸ್ಪರ್ಧೆ ಇಡುವೆ. ಅದರಲ್ಲಿ ನೀನು ಗೆದ್ದರೆ ಮಾತ್ರ ಮದುವೆಯ ಪ್ರಸ್ತಾಪ. ಇಲ್ಲದಿದ್ದರೆ ನೀನು ಖಾಲಿ ಕೈಯಲ್ಲಿ ವಾಪಾಸ್ ಹೋಗಬೇಕು’.
ವಯಸ್ಸಿನ ಹುಮ್ಮಸ್ಸು, ಪ್ರೀತಿಯ ನಶೆಯಲ್ಲಿದ್ದ ಹುಡುಗ `ಸರಿ, ನಾನು ಸಿದ್ಧ. ಏನು ನಿಮ್ಮ ಸ್ಪರ್ಧೆ?’ ಪ್ರಶ್ನಿಸಿಯೇಬಿಟ್ಟ.
`ಏನಿಲ್ಲ, ನೀನು ಆ ಮೈದಾನದ ಮಧ್ಯದಲ್ಲಿ ನಿಂತಿರು. ನಾನು ನನ್ನ ಬಳಿಯಿರುವ ಮೂರು ಗೂಳಿಗಳನ್ನು ಒಂದಾದ ಮೇಲೆ ಒಂದರಂತೆ ಮೈದಾನದೊಳಕ್ಕೆ ಬಿಡುತ್ತೇನೆ. ಮೂರರಲ್ಲಿ ಯಾವುದಾದರು ಒಂದು ಗೂಳಿಯ ಬಾಲವನ್ನು ನೀನು ಹಿಡಿದರೂ ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡ್ತೀನಿ.’
`ಅಷ್ಟೇ ತಾನೆ, ನಾನು ಸಿದ್ಧ!’ ಹುಡುಗ ಒಂದೇ ಉಸುರಿಗೆ ಸಮ್ಮತಿಯಿತ್ತ.
ಮೈದಾನದ ನಡುವೆ ಹುಡುಗ ಮೊದಲ ಗೂಳಿಗಾಗಿ ಕಾದು ನಿಂತ. ರೈತ ತನ್ನ ಕೊಟ್ಟಿಗೆಯಿಂದ ಒಂದು ಗೂಳಿಯನ್ನು ಮೈದಾನದತ್ತ ನುಗ್ಗಿಸಿದ. ಅದು ದಷ್ಟಪುಷ್ಟವಾಗಿದ್ದ ಗೂಳಿ. ಕಟ್ಟುಮಸ್ತಾದ ಐದಾರು ಪೈಲ್ವಾನರನ್ನು ಒಂದೇ ಏಟಿಗೆ ಎತ್ತಿ ಬಿಸಾಡಬಲ್ಲ ರೋಷದಿಂದ ನುಗ್ಗಿ ಬರುತ್ತಿತ್ತು.
ಹುಡುಗ ಯೋಚನೆ ಮಾಡಿದ, `ಈ ಗೂಳಿ ಭಯಂಕರ ತಾಕತ್ತಿನಲ್ಲಿದೆ. ಇದರ ಬಾಲ ಹಿಡಿಯಲು ಹೋದರೆ ಅಪಾಯ ಕಟ್ಟಿಟ್ಟಬುತ್ತಿ. ಇದನ್ನು ಸುಮ್ಮನೇ ಬಿಟ್ಟುಬಿಡೋಣ. ಎರಡನೇ ಗೂಳಿಯ ಬಾಲ ಹಿಡಿದರಾಯ್ತು. ಹೇಗೂ ಒಂದು ಗೂಳಿಯ ಬಾಲವನ್ನು ತಾನೇ ನಾನು ಹಿಡಿಯಬೇಕಿರುವುದು. ಮನಸ್ಸಿನ ಆಲೋಚನೆಯನ್ನು ಪ್ರತಿಫಲಿಸುವಂತೆ ಆತ ಪಕ್ಕಕ್ಕೆ ಸರಿದು ಗೂಳಿ ಓಡಿಹೋಗಲು ಅನುವು ಮಾಡಿಕೊಟ್ಟ.
ಈಗಾತ ಎರಡನೇ ಗೂಳಿಯ ನಿರೀಕ್ಷೆಯಲ್ಲಿದ್ದಾನೆ. ಕೊಟ್ಟಿಗೆ ತೆರೆಯಿತು, ಎರಡನೇ ಗೂಳಿ ಮೈದಾನದತ್ತ ದೌಡಾಯಿಸಿತು. ಅದು ಮೊದಲನೆಯದ್ದಕ್ಕಿಂತ ಬಲಿಷ್ಠವಾಗಿದೆ. ಅದರ ಓಟಕ್ಕೆ ನೆಲವೇ ನಡುಗಿಹೋಗುತ್ತಿದೆ. ಹುಡುಗನ ಮನಸ್ಸು ಮತ್ತೆ ಆಲೋಚಿಸಿತು `ಈ ಗೂಳಿಯ ಸಹವಾಸವೂ ಬೇಡ. ಇದೂ ಹೋಗಲಿ. ಮೂರನೇ ಗೂಳಿಯ ಬಾಲವನ್ನು ಹಿಡಿದರಾಯಿತು.’
ಎರಡನೇ ಗೂಳಿಯೂ ಅನಾಯಾಸವಾಗಿ ಸಾಗಿಹೋಯಿತು. ಈಗ ಕಡೆಯ, ಮೂರನೇ ಗೂಳಿಯ ನಿರೀಕ್ಷೆಯಲ್ಲಿ ಹುಡುಗನಿದ್ದಾನೆ. ಇದು ಅವನ ಕೊನೆಯ ಅವಕಾಶ. ಕೊಟ್ಟಿಗೆಯ ಬಾಗಿಲು ತೆರೆಯಿತು. ಮೂರನೇ ಗೂಳಿಯೂ ಹೊರಬಂತು. ಅದನ್ನು ನೋಡುತ್ತಿದ್ದಂತೆ ಹುಡುಗನ ಮುಖದಲ್ಲಿ ಖುಷಿ ದಟ್ಟೈಸಿತು. ಯಾಕೆಂದರೆ ಅದು ಬಡಕಲು ದೇಹದ ನರಪೇತಲ ಗೂಳಿ! ಸುಲಭವಾಗಿ ಅದರ ಬಾಲ ಹಿಡಿಯಬಹುದೆಂದು ಹುಡುಗ ಲೆಕ್ಕಾಚಾರ ಹಾಕಿದ. ಗೂಳಿ ಹತ್ತಿರ ಬರುತ್ತಿದ್ದಂತೆಯೇ ಅದರ ಮೇಲೆ ನೆಗೆಯಲು ಸನ್ನದ್ಧನಾದ. ಬಾಲ ಹಿಡಿಯಬೇಕೆಂದರೆ ಗೂಳಿ ಕೊಂಚ ಮುಂದಕ್ಕೆ ಹೋಗಬೇಕು, ಆಗ ಹಿಂದಿನಿಂದ ನೆಗೆದು ಬಾಲ ಹಿಡಿಯಬಹುದೆಂಬ ತಂತ್ರ ರೂಪಿಸಿಕೊಂಡ. ಅದರಂತೆ ಆ ಗೂಳಿ ತನ್ನನ್ನು ಪಾರು ಮಾಡಿಕೊಂಡು ಹೋಗುತ್ತಿದ್ದಂತೆಯೇ ಎರಡೂ ತೋಳುಗಳಿಗೆ ಬಲತುಂಬಿಕೊಂಡು, ಅಂಗೈಗಳನ್ನು ಬಿಗಿತಕ್ಕೆ ಅಣಿಮಾಡಿಕೊಂಡು ಗೂಳಿಯ ಮೇಲೆ ಹಾರಿದ.
ಹುಡುಗನಿಗೆ ಅಚ್ಚರಿ… ಆ ಗೂಳಿಗೆ ಬಾಲವೇ ಇರಲಿಲ್ಲ! ಪ್ರಶ್ನಾರ್ಥಕ ಮೊಗದೊಂದಿಗೆ ರೈತನತ್ತ ನೋಡಿದ. ರೈತ ತನ್ನ ಮೊದಲೆರಡು ಗೂಳಿಗಳ ಕಡೆ ನೋಡಿ ಮುಗುಳ್ನಕ್ಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...