Homeಮುಖಪುಟಗಾಝಾ ಕುರಿತ ನಿರ್ಣಯ: ಭಾರತ ಮತದಾನದಿಂದ ದೂರ ಉಳಿದಿದ್ದಕ್ಕೆ ಆಘಾತವಾಗಿದೆ: ಪ್ರಿಯಾಂಕಾ ಗಾಂಧಿ

ಗಾಝಾ ಕುರಿತ ನಿರ್ಣಯ: ಭಾರತ ಮತದಾನದಿಂದ ದೂರ ಉಳಿದಿದ್ದಕ್ಕೆ ಆಘಾತವಾಗಿದೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ವಿಶ್ವಸಂಸ್ಥೆಯಲ್ಲಿ ಜೋರ್ಡಾನ್‌ ದೇಶ ಮಂಡಿಸಿದ ನಾಗರಿಕರ ರಕ್ಷಣೆ ಮತ್ತು ಕದನ ವಿರಾಮದ ಕುರಿತ ನಿರ್ಣಯಕ್ಕೆ ಮತಚಲಾಯಿಸದೆ ದೂರ ಉಳಿದ ಭಾರತದ ನಿಲುವಿನ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಘಾತ ವ್ಯಕ್ತಪಡಿಸಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿ ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಿರ್ನಾಮವಾಗುತ್ತಿರುವುದನ್ನು ಮೌನವಾಗಿ ನೋಡುವುದು ಭಾರತದ ಆಶಯಕ್ಕೆ  ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ  ಕದನ ವಿರಾಮ ಮತ್ತು ಗಾಝಾ ಪಟ್ಟಿಯ ಜನರಿಗೆ ಮಾನವೀಯ ನೆರವು, ನಾಗರಿಕರ ರಕ್ಷಣೆ , ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವ ಶೀರ್ಷಿಕೆಯಡಿ ಜೋರ್ಡಾನ್ ದೇಶವು ಕರಡು ನಿರ್ಣಯವನ್ನು ಮಂಡಿಸಿತ್ತು. ಆದರೆ ಭಾರತ ಮತದಾನದಿಂದ ದೂರ ಉಳಿದಿತ್ತು.

193 ಸದಸ್ಯ ಬಲದ ಜನರಲ್ ಅಸೆಂಬ್ಲಿಯು ಬಹುಮತದಿಂದ ಜೋರ್ಡಾನ್ ದೇಶವು ಮಂಡಿಸಿದ ಕರಡು ಮಸೂದೆಯನ್ನು ಅಂಗೀಕರಿಸಿದೆ. ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದೆ. ಅದರ ವಿರುದ್ಧ 14 ರಾಷ್ಟ್ರಗಳು ಮತಚಲಾಯಿಸಿದರೆ 45 ದೇಶಗಳು ಗೈರುಹಾಜರಾಗಿದ್ದವು. ಅದರಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ದೇಶಗಳು ಸೇರಿದೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಿಯಾಂಕಾ ಗಾಂಧಿಯವರು, ಮಹಾತ್ಮ ಗಾಂಧಿಯವರ ಕಣ್ಣಿಗೆ ಒಂದು ಕಣ್ಣು ಇಡೀ ಜಗತ್ತನ್ನು ಕುರುಡನನ್ನಾಗಿಸುತ್ತದೆ ಎಂಬ ವಾಕ್ಯವನ್ನು ಉಲ್ಲೇಖ ಮಾಡಿದ್ದಾರೆ.

ಗಾಝಾದಲ್ಲಿ ಕದನ ವಿರಾಮಕ್ಕೆ ನಮ್ಮ ದೇಶವು ಮತದಾನ ಮಾಡದೆ ದೂರ ಉಳಿದಿರುವುದಕ್ಕೆ ನನಗೆ ಆಘಾತವಾಗಿದೆ ಮತ್ತು ನಾಚಿಕೆಯಾಗಿದೆ. ನಮ್ಮ ದೇಶವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ಸ್ಥಾಪಿಸಲ್ಪಟ್ಟಿದೆ. ನಮ್ಮದು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದ ತತ್ವಗಳು, ಈ ತತ್ವಗಳು ನಮ್ಮ ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸುವ ಸಂವಿಧಾನದ ಆಧಾರವಾಗಿದೆ ಎಂದು ಹೇಳಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿ ಲಕ್ಷಾಂತರ ಜನರಿಗೆ ಆಹಾರ, ನೀರು, ವೈದ್ಯಕೀಯ ಸೇವೆ ಮತ್ತು ವಿದ್ಯುತ್ ಕಡಿತಗೊಂಡಿರುವಾಗ, ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಿರ್ನಾಮವಾಗುತ್ತಿರುವುದನ್ನು ಮೌನವಾಗಿ ವೀಕ್ಷಿಸುತ್ತಿರುವುದು ಮತ್ತು ಆ ಕುರಿತ ನಿಲುವಿಗೆ ವಿರುದ್ಧವಾಗಿರುವುದು ನಮ್ಮ ದೇಶವು ಈವರೆಗೆ ನಿಂತಿರುವ ಎಲ್ಲ ಆಶಯಕ್ಕೂ ವಿರುದ್ಧವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...