Homeಮುಖಪುಟಗಾಝಾ ಕುರಿತ ನಿರ್ಣಯ: ಭಾರತ ಮತದಾನದಿಂದ ದೂರ ಉಳಿದಿದ್ದಕ್ಕೆ ಆಘಾತವಾಗಿದೆ: ಪ್ರಿಯಾಂಕಾ ಗಾಂಧಿ

ಗಾಝಾ ಕುರಿತ ನಿರ್ಣಯ: ಭಾರತ ಮತದಾನದಿಂದ ದೂರ ಉಳಿದಿದ್ದಕ್ಕೆ ಆಘಾತವಾಗಿದೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ವಿಶ್ವಸಂಸ್ಥೆಯಲ್ಲಿ ಜೋರ್ಡಾನ್‌ ದೇಶ ಮಂಡಿಸಿದ ನಾಗರಿಕರ ರಕ್ಷಣೆ ಮತ್ತು ಕದನ ವಿರಾಮದ ಕುರಿತ ನಿರ್ಣಯಕ್ಕೆ ಮತಚಲಾಯಿಸದೆ ದೂರ ಉಳಿದ ಭಾರತದ ನಿಲುವಿನ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಘಾತ ವ್ಯಕ್ತಪಡಿಸಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿ ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಿರ್ನಾಮವಾಗುತ್ತಿರುವುದನ್ನು ಮೌನವಾಗಿ ನೋಡುವುದು ಭಾರತದ ಆಶಯಕ್ಕೆ  ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ  ಕದನ ವಿರಾಮ ಮತ್ತು ಗಾಝಾ ಪಟ್ಟಿಯ ಜನರಿಗೆ ಮಾನವೀಯ ನೆರವು, ನಾಗರಿಕರ ರಕ್ಷಣೆ , ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವ ಶೀರ್ಷಿಕೆಯಡಿ ಜೋರ್ಡಾನ್ ದೇಶವು ಕರಡು ನಿರ್ಣಯವನ್ನು ಮಂಡಿಸಿತ್ತು. ಆದರೆ ಭಾರತ ಮತದಾನದಿಂದ ದೂರ ಉಳಿದಿತ್ತು.

193 ಸದಸ್ಯ ಬಲದ ಜನರಲ್ ಅಸೆಂಬ್ಲಿಯು ಬಹುಮತದಿಂದ ಜೋರ್ಡಾನ್ ದೇಶವು ಮಂಡಿಸಿದ ಕರಡು ಮಸೂದೆಯನ್ನು ಅಂಗೀಕರಿಸಿದೆ. ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದೆ. ಅದರ ವಿರುದ್ಧ 14 ರಾಷ್ಟ್ರಗಳು ಮತಚಲಾಯಿಸಿದರೆ 45 ದೇಶಗಳು ಗೈರುಹಾಜರಾಗಿದ್ದವು. ಅದರಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ದೇಶಗಳು ಸೇರಿದೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಿಯಾಂಕಾ ಗಾಂಧಿಯವರು, ಮಹಾತ್ಮ ಗಾಂಧಿಯವರ ಕಣ್ಣಿಗೆ ಒಂದು ಕಣ್ಣು ಇಡೀ ಜಗತ್ತನ್ನು ಕುರುಡನನ್ನಾಗಿಸುತ್ತದೆ ಎಂಬ ವಾಕ್ಯವನ್ನು ಉಲ್ಲೇಖ ಮಾಡಿದ್ದಾರೆ.

ಗಾಝಾದಲ್ಲಿ ಕದನ ವಿರಾಮಕ್ಕೆ ನಮ್ಮ ದೇಶವು ಮತದಾನ ಮಾಡದೆ ದೂರ ಉಳಿದಿರುವುದಕ್ಕೆ ನನಗೆ ಆಘಾತವಾಗಿದೆ ಮತ್ತು ನಾಚಿಕೆಯಾಗಿದೆ. ನಮ್ಮ ದೇಶವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ಸ್ಥಾಪಿಸಲ್ಪಟ್ಟಿದೆ. ನಮ್ಮದು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದ ತತ್ವಗಳು, ಈ ತತ್ವಗಳು ನಮ್ಮ ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸುವ ಸಂವಿಧಾನದ ಆಧಾರವಾಗಿದೆ ಎಂದು ಹೇಳಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿ ಲಕ್ಷಾಂತರ ಜನರಿಗೆ ಆಹಾರ, ನೀರು, ವೈದ್ಯಕೀಯ ಸೇವೆ ಮತ್ತು ವಿದ್ಯುತ್ ಕಡಿತಗೊಂಡಿರುವಾಗ, ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಿರ್ನಾಮವಾಗುತ್ತಿರುವುದನ್ನು ಮೌನವಾಗಿ ವೀಕ್ಷಿಸುತ್ತಿರುವುದು ಮತ್ತು ಆ ಕುರಿತ ನಿಲುವಿಗೆ ವಿರುದ್ಧವಾಗಿರುವುದು ನಮ್ಮ ದೇಶವು ಈವರೆಗೆ ನಿಂತಿರುವ ಎಲ್ಲ ಆಶಯಕ್ಕೂ ವಿರುದ್ಧವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...