Homeಚಳವಳಿಕಾರ್ಯಕರ್ತೆ ಶೆಹ್ಲಾ ರಶೀದ್ ವಿರುದ್ಧ ದೇಶದ್ರೋಹ ಪ್ರಕರಣ: ಸೈನ್ಯದ ವಿರುದ್ಧ ಟ್ವೀಟ್ ಮಾಡಿದ ಆರೋಪ

ಕಾರ್ಯಕರ್ತೆ ಶೆಹ್ಲಾ ರಶೀದ್ ವಿರುದ್ಧ ದೇಶದ್ರೋಹ ಪ್ರಕರಣ: ಸೈನ್ಯದ ವಿರುದ್ಧ ಟ್ವೀಟ್ ಮಾಡಿದ ಆರೋಪ

- Advertisement -
- Advertisement -

ಜಮ್ಮ ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ನ ಯುವ ಕಾರ್ಯಕರ್ತೆ ಶೆಹ್ಲಾ ರಶೀದ್ ಮೇಲೆ ಪೊಲೀಸರು ಎಫ್.ಐ.ಆರ್ ಹಾಕಿ ದೇಶ ದ್ರೋಹದ ಪ್ರಕರಣ ದಾಖಲಿಸಿದ್ದಾರೆ. ಸೈನ್ಯದ ವಿರುದ್ಧ ಶೆಹ್ಲಾ ಟ್ವೀಟ್ ಮಾಡಿದ್ದರು ಎಂದು ಪೊಲೀಸರು ಆರೋಪಿಸಿದರೆ, ಕಾಶ್ಮೀರದಲ್ಲಿ ಮನೆಗೆ ನುಗ್ಗಿ ಸೇನಾ ಶಿಬಿರಕ್ಕೆ ನಾಲ್ವರನ್ನು ಕರೆದುಕೊಂಡು ಹೋಗಿ, ವಿಚಾರಣೆ ನಡೆಸಿ ಹಿಂಸೆ ನೀಡಲಾಗಿದೆ ಎಂದು ಶೆಹ್ಲಾ ರಶೀದ್ ಹೇಳಿಕೊಂಡಿದ್ದರು.

ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಅದನ್ನು ವಿರೋಧಿಸಿ ಆಗಸ್ಟ್ 17ರಂದು ಶೆಹ್ಲಾ ರಶೀದ್ ಸರಣಿ ಟ್ವಿಟ್ ಗಳನ್ನು ಮಾಡಿದ್ದರು. ಪ್ರತಿನಿತ್ಯ ಅದರಲ್ಲಿಯೂ ರಾತ್ರಿವೇಳೆ ವಿಚಾರಣೆಯ ನೆಪದಲ್ಲಿ ಸಾಮಾನ್ಯ ಜನರಿಗೆ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು.

ತಮ್ಮನ್ನು ಸೋಫಿಯನ್ ಎಂಬಲ್ಲಿ ಸೇನಾ ಶಿಬಿರಕ್ಕೆ ವಿಚಾರಣೆಗೆಂದು ಕರೆಸಿಕೊಂಡು ವಿಚಾರಣೆಯ ನೆಪದಲ್ಲಿ ಒಬ್ಬ ಮನಷ್ಯ ತೀರಾ ಹತ್ತಿರಕ್ಕೆ ಬಂದು ತೊಂದರೆ ಕೊಟ್ಟಿದ್ದರು. ಮೈಕ್ ನಲ್ಲಿ ಅದೆಲ್ಲಾ ಮುದ್ರಿತಗೊಂಡಿದೆ ಎಂದು ಆರೋಪಿಸಿದ್ದರು.

ಇದಾದ ನಂತರ ವಕೀಲ್ ಅಲಾಕ್ ಅಲೋಕ್ ಶ್ರೀವತ್ಸ ಎಂಬುವವರ ದೆಹಲಿ ಪೊಲೀಸರ ಬಳಿ ದೂರೊಂದನ್ನು ನೀಡಿದ್ದು “ಶೆಹ್ಲಾ ಸುಳ್ಲು ಸುದ್ದಿಗಳನ್ನು ಹರಡುತ್ತಿದ್ದಾರೆ, ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ, ಅವರ ಬಳಿ ಯಾವುದೇ ದಾಖಲೆಗಳಿಲ್ಲ” ಎಂದು ದೂರಿದ್ದರು.

ಈ ರೀತಿ ಉದ್ದೇಶಪೂರ್ವಕವಾಗಿ ದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ಮತ್ತು ಸೈನ್ಯದ ಮೇಲೆ ಕೆಟ್ಟ ಹೆಸರು ಬರಲೆಂದು ಅವರು ಸುಳ್ಲು ಆರೋಪಗಳನ್ನು ಮಾಡಿದ್ದಾರೆ ಎಂದು ಶ್ರೀವತ್ಸ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೆಪ್ಟೆಂಬರ್ 3 ರಂದು ಸಲ್ಲಿಸಿದ ಎಫ್‌ಐಆರ್‌ನಲ್ಲಿ, ರಶೀದ್ ವಿರುದ್ಧ 124 ಎ (ದೇಶದ್ರೋಹ), 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 (ಅಪೇಕ್ಷಿತವಾಗಿ ಪ್ರಚೋದನೆಯನ್ನು ನೀಡುವ ಉದ್ದೇಶದಿಂದ ಪ್ರಚೋದಿಸಿ ಗಲಭೆಗೆ ಕಾರಣ), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು ಭಾರತೀಯ ದಂಡ ಸಂಹಿತೆಯ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಲಾಗಿದೆ.

ದೆಹಲಿ ಪೊಲೀಸರ ವಿಶೇಷ ಸೆಲ್ ಪ್ರಕರಣದ ವಿಚಾರಣೆ ನಡೆಸಿತ್ತಿದೆ. ಇದೇ ಪೊಲೀಸರು ರಶೀದ್ ಅವರ ಬ್ಯಾಚ್‌ಮೇಟ್ ಮತ್ತು ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧದ ದೇಶದ್ರೋಹ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ.

ಸಂಸತ್ತಿನ ದಾಳಿಯ ಮಾಸ್ಟರ್ ಮೈಂಡ್ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ನೆನಪಿಗಾಗಿ 2016 ರ ಫೆಬ್ರವರಿ 9 ರಂದು ಜೆಎನ್‌ಯುನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಕುಮಾರ್ ಮತ್ತು ಇತರ ಒಂಬತ್ತು ಜನರ ವಿರುದ್ಧ ದೆಹಲಿ ಪೊಲೀಸರು ಈ ವರ್ಷದ ಜನವರಿಯಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಆಗಿನ ಜೆಎನ್‌ಯುಎಸ್‌ಯು ಉಪಾಧ್ಯಕ್ಷೆ ಶೆಹ್ಲಾ ರಶೀದ್ ಮತ್ತು ಇತರ 35 ಮಂದಿಯನ್ನು ಚಾರ್ಜ್‌ಶೀಟ್‌ನ 12 ನೇ ಕಾಲಂನಲ್ಲಿ ಹೆಸರಿಸಲಾಗಿದೆ. ಆದರೆ ಇಂದು ದೆಹಲಿ ಸರ್ಕಾರ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದು ಘೋಷಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....