Homeಕರ್ನಾಟಕಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

ಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

- Advertisement -
- Advertisement -

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ರವಿವಾರ ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಈ ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವೀಡಿಯೊ ಮೂಲಕ ಈ ಕೃತ್ಯ ಎಸಗಿದ್ದು ತಾನೇ ಎಂದು ಹೇಳಿ, ಆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ಅಪರಾಧಿಯೇ ಕೃತ್ಯದ ಬಗ್ಗೆ ತಪ್ಪುಒಪ್ಪಿಕಜೊಂಡು ಪೊಲೀಸರಿಗೆ ಶರಣಾದರೂ ಕೂಡ ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಭಾಸ್ಕರ್ ರಾವ್ ಮಾತ್ರ ಪರೋಕ್ಷವಾಗಿ ಮುಸ್ಲಿಂ ಸಮುದಾಯದವರ ತಲೆಗೆ ಕಟ್ಟಲು ನೋಡುತ್ತಿದ್ದಾರೆ.

ಎಕ್ಸಾನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ”ದೇಶದಲ್ಲಿ ಬಾಂಬ್ ಸ್ಫೋಟಗಳಿಗೆ ದೀರ್ಘ ವಿರಾಮವಿತ್ತು. ಕಾಂಗ್ರೆಸ್ ಮತ್ತು ಸಿಪಿಎಂನಿಂದ ದಶಕಗಳ ಕಾಲದ ಒಲೈಕೆಯ ಮತಬ್ಯಾಂಕ್ ರಾಜಕಾರಣವು ಮುಸ್ಲಿಮರನ್ನು ಅವಿದ್ಯಾವಂತರನ್ನಾಗಿ, ಹಿಂದುಳಿದವರನ್ನಾಗಿ ಮತ್ತು ಅಪರಾಧಿಗಳನ್ನಾಗಿ ಮಾಡಿದೆ. ಪರಿಣಾಮವಾಗಿ ಭಯೋತ್ಪಾದನೆಯನ್ನು ನಾವು ಮನೆಬಾಗಿಲಿಗೆ ಆಹ್ವಾನಿಸಿದ್ದೇವೆ. ಈ ಜನರು ಮುಖ್ಯವಾಹಿನಿಗೆ ಬರಲು ಯಾವಾಗ ಯೋಚಿಸುತ್ತಾರೆ..?” ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ನಿವೃತ್ತ ಪೊಲೀಸ್ ಕಮಿಶನರ್ ಆಗಿದ್ದ ಭಾಸ್ಕರ್ ರಾವ್ ಅವರ ಈ ಪೋಸ್ಟ್, ಕಲಮಶೇರಿ ಸ್ಪೋಟಕ್ಕೆ ಮುಸ್ಲಿಮರೇ ಕಾರಣ ಎಂದು ಪರೋಕ್ಷವಾಗಿ ಬಿಂಬಿಸಲು ಹೊರಟಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ.

ಕೇರಳದ ಕಲಮಶೇರಿಯಲ್ಲಿ ಸ್ಫೋಟ ನಡೆದದ್ದು ಬೆಳಿಗ್ಗೆ 9 ಗಂಟೆ ಸುಮಾರಿಗೆ ರಾಷ್ಟ್ರೀಯ ಮಾಧ್ಯಮಗಳಲ್ಲಿ 11.20 ರ ವೇಳೆಗೆ ಅದು ಸುದ್ದಿಯಾಯಿತು. ಆ ಬಳಿಕ ದಾಳಿಯ ಹಿಂದಿನ ಕೈಗಳ ಬಗ್ಗೆ ಎಲ್ಲೆಡೆ ಊಹಾಪೋಹಗಳೇ ಹರಿದಾಡಿದವು. ಕೇರಳ ಪೊಲೀಸರು ಸುಳ್ಳು ಸುದ್ದಿ ಹರಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನೂ ನೀಡಿದರು. ಸಂಜೆ 4.20 ರ ವೇಳೆಗೆ ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಆರೋಪಿ ಡೊಮಿನಿಕ್ ಮಾರ್ಟಿನ್ ಶರಣಾಗಿದ್ದಾನೆ ಎಂದು ಧೃಡಪಡಿಸಿದರು. ಶರಣಾಗುವ ಮುಂಚೆ ಆರೋಪಿ 6 ತಿಂಗಳ ಹಿಂದೆ ತೆರೆದಿದ್ದ ಫೇಸ್ ಬುಕ್ ಖಾತೆಯಲ್ಲಿ ಲೈವ್ ಗೆ ಬಂದು ಕೃತ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದೂ ವೈರಲಾಯಿತು.

ಇದನ್ನೂ ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...