Homeಕರ್ನಾಟಕಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

ಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

- Advertisement -
- Advertisement -

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ರವಿವಾರ ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಈ ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವೀಡಿಯೊ ಮೂಲಕ ಈ ಕೃತ್ಯ ಎಸಗಿದ್ದು ತಾನೇ ಎಂದು ಹೇಳಿ, ಆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ಅಪರಾಧಿಯೇ ಕೃತ್ಯದ ಬಗ್ಗೆ ತಪ್ಪುಒಪ್ಪಿಕಜೊಂಡು ಪೊಲೀಸರಿಗೆ ಶರಣಾದರೂ ಕೂಡ ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಭಾಸ್ಕರ್ ರಾವ್ ಮಾತ್ರ ಪರೋಕ್ಷವಾಗಿ ಮುಸ್ಲಿಂ ಸಮುದಾಯದವರ ತಲೆಗೆ ಕಟ್ಟಲು ನೋಡುತ್ತಿದ್ದಾರೆ.

ಎಕ್ಸಾನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ”ದೇಶದಲ್ಲಿ ಬಾಂಬ್ ಸ್ಫೋಟಗಳಿಗೆ ದೀರ್ಘ ವಿರಾಮವಿತ್ತು. ಕಾಂಗ್ರೆಸ್ ಮತ್ತು ಸಿಪಿಎಂನಿಂದ ದಶಕಗಳ ಕಾಲದ ಒಲೈಕೆಯ ಮತಬ್ಯಾಂಕ್ ರಾಜಕಾರಣವು ಮುಸ್ಲಿಮರನ್ನು ಅವಿದ್ಯಾವಂತರನ್ನಾಗಿ, ಹಿಂದುಳಿದವರನ್ನಾಗಿ ಮತ್ತು ಅಪರಾಧಿಗಳನ್ನಾಗಿ ಮಾಡಿದೆ. ಪರಿಣಾಮವಾಗಿ ಭಯೋತ್ಪಾದನೆಯನ್ನು ನಾವು ಮನೆಬಾಗಿಲಿಗೆ ಆಹ್ವಾನಿಸಿದ್ದೇವೆ. ಈ ಜನರು ಮುಖ್ಯವಾಹಿನಿಗೆ ಬರಲು ಯಾವಾಗ ಯೋಚಿಸುತ್ತಾರೆ..?” ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ನಿವೃತ್ತ ಪೊಲೀಸ್ ಕಮಿಶನರ್ ಆಗಿದ್ದ ಭಾಸ್ಕರ್ ರಾವ್ ಅವರ ಈ ಪೋಸ್ಟ್, ಕಲಮಶೇರಿ ಸ್ಪೋಟಕ್ಕೆ ಮುಸ್ಲಿಮರೇ ಕಾರಣ ಎಂದು ಪರೋಕ್ಷವಾಗಿ ಬಿಂಬಿಸಲು ಹೊರಟಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ.

ಕೇರಳದ ಕಲಮಶೇರಿಯಲ್ಲಿ ಸ್ಫೋಟ ನಡೆದದ್ದು ಬೆಳಿಗ್ಗೆ 9 ಗಂಟೆ ಸುಮಾರಿಗೆ ರಾಷ್ಟ್ರೀಯ ಮಾಧ್ಯಮಗಳಲ್ಲಿ 11.20 ರ ವೇಳೆಗೆ ಅದು ಸುದ್ದಿಯಾಯಿತು. ಆ ಬಳಿಕ ದಾಳಿಯ ಹಿಂದಿನ ಕೈಗಳ ಬಗ್ಗೆ ಎಲ್ಲೆಡೆ ಊಹಾಪೋಹಗಳೇ ಹರಿದಾಡಿದವು. ಕೇರಳ ಪೊಲೀಸರು ಸುಳ್ಳು ಸುದ್ದಿ ಹರಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನೂ ನೀಡಿದರು. ಸಂಜೆ 4.20 ರ ವೇಳೆಗೆ ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಆರೋಪಿ ಡೊಮಿನಿಕ್ ಮಾರ್ಟಿನ್ ಶರಣಾಗಿದ್ದಾನೆ ಎಂದು ಧೃಡಪಡಿಸಿದರು. ಶರಣಾಗುವ ಮುಂಚೆ ಆರೋಪಿ 6 ತಿಂಗಳ ಹಿಂದೆ ತೆರೆದಿದ್ದ ಫೇಸ್ ಬುಕ್ ಖಾತೆಯಲ್ಲಿ ಲೈವ್ ಗೆ ಬಂದು ಕೃತ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದೂ ವೈರಲಾಯಿತು.

ಇದನ್ನೂ ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...