Homeಮುಖಪುಟಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

ಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

- Advertisement -
- Advertisement -

ಕೇರಳದ ಎರ್ನಾಕುಲಂನಲ್ಲಿರುವ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಸೋಮವಾರ ಸಾವಿನ ಸಂಖ್ಯೆ ಮೂರಕ್ಕೆ ತಲುಪಿದೆ ಎಂದು ಪಿಟಿಐ ವರದಿ ಮಾಡಿದೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಜಮ್ರಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸಿಬಿಷನ್ ಸೆಂಟರ್‌ನಲ್ಲಿ ಪ್ರಾರ್ಥನಾ ಅಧಿವೇಶನಕ್ಕಾಗಿ ರಾಜ್ಯದಾದ್ಯಂತ ಸುಮಾರು 2,500 ಯೆಹೋವನ ಸಾಕ್ಷಿಗಳು ಸೇರಿದ್ದರು ಬೆಳಿಗ್ಗೆ 9.30 ರ ಸುಮಾರಿಗೆ ಸ್ಫೋಟಗಳು ಸಂಭವಿಸಿದವು.

ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ. ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

ಮಲಯತ್ತೂರಿನ ಲಿಬಿನಾ ಎಂದು ಗುರುತಿಸಲಾದ 12 ವರ್ಷದ ಬಾಲಕಿ ಸೋಮವಾರ ಮುಂಜಾನೆ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಆಕೆಯ ದೇಹದ 95% ರಷ್ಟು ತೀವ್ರವಾದ ಸುಟ್ಟಗಾಯಗಳಾಗಿ ದಾಖಲಾಗಿದ್ದಳು. ಈ ಹಿಂದೆ ಇಬ್ಬರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದರು ಮತ್ತು ಸುಮಾರು 40 ಜನರು ಗಾಯಗೊಂಡಿದ್ದಾರೆ.

ಈ ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವೀಡಿಯೊ ಮೂಲಕ ಈ ಕೃತ್ಯ ಎಸಗಿದ್ದು ತಾನೇ ಎಂದು ಹೇಳಿ, ಆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ವಿಡಿಯೋದಲ್ಲಿ, ಯೆಹೋವನ ಸಾಕ್ಷಿಗಳ ಸಭೆಯ “ಬೋಧನೆ” ಯಿಂದ ಕೋಪಗೊಂಡಿದ್ದಾಗಿ ಹೇಳಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಘಟನೆಗೆ “ಕೋಮುವಾದಿ” ಬಣ್ಣ ಬಳಿಯಲು ಯತ್ನಿಸಿದ ಬಿಜೆಪಿ ನಾಯಕ

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಸ್ಫೋಟಗಳ ಕುರಿತು ಎಕ್ಸಾನಲ್ಲಿ ಪೋಸ್ಟ್‌ ಮಾಡಿ “ಕೋಮುವಾದಿ” ಹೇಳಿಕೆಗಳನ್ನು ನೀಡಿದ್ದಾರೆ.

”ದಿಲ್ಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ, ಕೇರಳದಲ್ಲಿ ಭಯೋತ್ಪಾದನೆ, ಹಮಾಸ್‌ನಿಂದ ಜಿಹಾದ್‌ಗಾಗಿ ಮುಕ್ತ ಕರೆಗಳು, ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳು ನಡೆಯುತ್ತಿವೆ” ಎಂದು ಅವರು ಹೇಳಿದರು.

ಗಾಜಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು ತಕ್ಷಣವೇ ಅಂತ್ಯಗೊಳಿಸಲು ಕೋರಿ ಭಾನುವಾರ ನವದೆಹಲಿಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ ರ್ಯಾಲಿಯನ್ನು ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ”ಅವರು ಸಚಿವರಾಗಿದ್ದಾರೆ ಮತ್ತು ಅವರು ತನಿಖಾ ಸಂಸ್ಥೆಗಳಿಗೆ ಕನಿಷ್ಠ ಮಟ್ಟದ ಗೌರವವನ್ನು ತೋರಿಸಬೇಕು” ಎಂದು ವಿಜಯನ್ ಸುದ್ದಿಗಾರರಿಗೆ ತಿಳಿಸಿದರು.

”ತನಿಖೆ ನಡೆಯುತ್ತಿದೆ… ಇಂತಹ ಗಂಭೀರ ಘಟನೆಯಲ್ಲಿ, ಇಂತಹ ಆರಂಭಿಕ ಹಂತದಲ್ಲಿ, ಅವರು ಕೆಲವು ಸೆಟ್ ಜನರನ್ನು ಗುರಿಯಾಗಿಸಿಕೊಂಡು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅವರ ಕೋಮುವಾದಿ ಅಜೆಂಡಾವನ್ನು ಆಧರಿಸಿದೆ, ಆದರೆ ಕೇರಳವು ಅಂತಹ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 27 ರಂದು, ಜಮಾತ್-ಎ-ಇಸ್ಲಾಮಿಯ ಯುವ ಘಟಕದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಮತ್ತೊಂದು ರ್ಯಾಲಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಹಮಾಸ್ ಮುಖ್ಯಸ್ಥ ಖಲೀದ್ ಮಶಾಲ್ ಮಾತನಾಡಿದರು.

ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಶಾಲ್, ”ಇಸ್ಲಾಂ ಧರ್ಮದ ಮೂರು ಪವಿತ್ರ ಸ್ಥಳಗಳಲ್ಲಿ ಒಂದಾದ ಜೆರುಸಲೆಮ್‌ನಲ್ಲಿರುವ ಅಲ್-ಅಕ್ಸಾ ಮಸೀದಿಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವ ಪ್ಯಾಲೇಸ್ಟಿನಿಯನ್ ಹೋರಾಟಗಾರರನ್ನು ಪ್ರಪಂಚದಾದ್ಯಂತದ ಜನರು ಬೆಂಬಲಿಸಬೇಕು” ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಇಸ್ರೇಲ್ ನಮ್ಮ ನಿವಾಸಿಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ” ಎಂದು ಮಾಜಿ ಹಮಾಸ್ ಮುಖ್ಯಸ್ಥರು ಹೇಳಿದರು.

”ಮನೆಗಳನ್ನು ಕೆಡವಲಾಗುತ್ತಿದೆ. ಅವರು ಗಾಜಾದ ಅರ್ಧಕ್ಕಿಂತ ಹೆಚ್ಚು ಭಾಗವನ್ನು ನಾಶಪಡಿಸಿದ್ದಾರೆ. ಚರ್ಚುಗಳು, ದೇವಾಲಯಗಳು, ವಿಶ್ವವಿದ್ಯಾನಿಲಯಗಳು ಮತ್ತು UN ಸಂಸ್ಥೆಗಳನ್ನು ಸಹ ನಾಶಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...