Homeಮುಖಪುಟಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

ಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

- Advertisement -
- Advertisement -

ಕೇರಳದ ಎರ್ನಾಕುಲಂನಲ್ಲಿರುವ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಸೋಮವಾರ ಸಾವಿನ ಸಂಖ್ಯೆ ಮೂರಕ್ಕೆ ತಲುಪಿದೆ ಎಂದು ಪಿಟಿಐ ವರದಿ ಮಾಡಿದೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಜಮ್ರಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸಿಬಿಷನ್ ಸೆಂಟರ್‌ನಲ್ಲಿ ಪ್ರಾರ್ಥನಾ ಅಧಿವೇಶನಕ್ಕಾಗಿ ರಾಜ್ಯದಾದ್ಯಂತ ಸುಮಾರು 2,500 ಯೆಹೋವನ ಸಾಕ್ಷಿಗಳು ಸೇರಿದ್ದರು ಬೆಳಿಗ್ಗೆ 9.30 ರ ಸುಮಾರಿಗೆ ಸ್ಫೋಟಗಳು ಸಂಭವಿಸಿದವು.

ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ. ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

ಮಲಯತ್ತೂರಿನ ಲಿಬಿನಾ ಎಂದು ಗುರುತಿಸಲಾದ 12 ವರ್ಷದ ಬಾಲಕಿ ಸೋಮವಾರ ಮುಂಜಾನೆ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಆಕೆಯ ದೇಹದ 95% ರಷ್ಟು ತೀವ್ರವಾದ ಸುಟ್ಟಗಾಯಗಳಾಗಿ ದಾಖಲಾಗಿದ್ದಳು. ಈ ಹಿಂದೆ ಇಬ್ಬರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದರು ಮತ್ತು ಸುಮಾರು 40 ಜನರು ಗಾಯಗೊಂಡಿದ್ದಾರೆ.

ಈ ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವೀಡಿಯೊ ಮೂಲಕ ಈ ಕೃತ್ಯ ಎಸಗಿದ್ದು ತಾನೇ ಎಂದು ಹೇಳಿ, ಆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ವಿಡಿಯೋದಲ್ಲಿ, ಯೆಹೋವನ ಸಾಕ್ಷಿಗಳ ಸಭೆಯ “ಬೋಧನೆ” ಯಿಂದ ಕೋಪಗೊಂಡಿದ್ದಾಗಿ ಹೇಳಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಘಟನೆಗೆ “ಕೋಮುವಾದಿ” ಬಣ್ಣ ಬಳಿಯಲು ಯತ್ನಿಸಿದ ಬಿಜೆಪಿ ನಾಯಕ

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಸ್ಫೋಟಗಳ ಕುರಿತು ಎಕ್ಸಾನಲ್ಲಿ ಪೋಸ್ಟ್‌ ಮಾಡಿ “ಕೋಮುವಾದಿ” ಹೇಳಿಕೆಗಳನ್ನು ನೀಡಿದ್ದಾರೆ.

”ದಿಲ್ಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ, ಕೇರಳದಲ್ಲಿ ಭಯೋತ್ಪಾದನೆ, ಹಮಾಸ್‌ನಿಂದ ಜಿಹಾದ್‌ಗಾಗಿ ಮುಕ್ತ ಕರೆಗಳು, ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳು ನಡೆಯುತ್ತಿವೆ” ಎಂದು ಅವರು ಹೇಳಿದರು.

ಗಾಜಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು ತಕ್ಷಣವೇ ಅಂತ್ಯಗೊಳಿಸಲು ಕೋರಿ ಭಾನುವಾರ ನವದೆಹಲಿಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ ರ್ಯಾಲಿಯನ್ನು ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ”ಅವರು ಸಚಿವರಾಗಿದ್ದಾರೆ ಮತ್ತು ಅವರು ತನಿಖಾ ಸಂಸ್ಥೆಗಳಿಗೆ ಕನಿಷ್ಠ ಮಟ್ಟದ ಗೌರವವನ್ನು ತೋರಿಸಬೇಕು” ಎಂದು ವಿಜಯನ್ ಸುದ್ದಿಗಾರರಿಗೆ ತಿಳಿಸಿದರು.

”ತನಿಖೆ ನಡೆಯುತ್ತಿದೆ… ಇಂತಹ ಗಂಭೀರ ಘಟನೆಯಲ್ಲಿ, ಇಂತಹ ಆರಂಭಿಕ ಹಂತದಲ್ಲಿ, ಅವರು ಕೆಲವು ಸೆಟ್ ಜನರನ್ನು ಗುರಿಯಾಗಿಸಿಕೊಂಡು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅವರ ಕೋಮುವಾದಿ ಅಜೆಂಡಾವನ್ನು ಆಧರಿಸಿದೆ, ಆದರೆ ಕೇರಳವು ಅಂತಹ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 27 ರಂದು, ಜಮಾತ್-ಎ-ಇಸ್ಲಾಮಿಯ ಯುವ ಘಟಕದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಮತ್ತೊಂದು ರ್ಯಾಲಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಹಮಾಸ್ ಮುಖ್ಯಸ್ಥ ಖಲೀದ್ ಮಶಾಲ್ ಮಾತನಾಡಿದರು.

ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಶಾಲ್, ”ಇಸ್ಲಾಂ ಧರ್ಮದ ಮೂರು ಪವಿತ್ರ ಸ್ಥಳಗಳಲ್ಲಿ ಒಂದಾದ ಜೆರುಸಲೆಮ್‌ನಲ್ಲಿರುವ ಅಲ್-ಅಕ್ಸಾ ಮಸೀದಿಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವ ಪ್ಯಾಲೇಸ್ಟಿನಿಯನ್ ಹೋರಾಟಗಾರರನ್ನು ಪ್ರಪಂಚದಾದ್ಯಂತದ ಜನರು ಬೆಂಬಲಿಸಬೇಕು” ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಇಸ್ರೇಲ್ ನಮ್ಮ ನಿವಾಸಿಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ” ಎಂದು ಮಾಜಿ ಹಮಾಸ್ ಮುಖ್ಯಸ್ಥರು ಹೇಳಿದರು.

”ಮನೆಗಳನ್ನು ಕೆಡವಲಾಗುತ್ತಿದೆ. ಅವರು ಗಾಜಾದ ಅರ್ಧಕ್ಕಿಂತ ಹೆಚ್ಚು ಭಾಗವನ್ನು ನಾಶಪಡಿಸಿದ್ದಾರೆ. ಚರ್ಚುಗಳು, ದೇವಾಲಯಗಳು, ವಿಶ್ವವಿದ್ಯಾನಿಲಯಗಳು ಮತ್ತು UN ಸಂಸ್ಥೆಗಳನ್ನು ಸಹ ನಾಶಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...