Homeಮುಖಪುಟಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

ಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

- Advertisement -
- Advertisement -

ಕೇರಳದ ಎರ್ನಾಕುಲಂನಲ್ಲಿರುವ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಸೋಮವಾರ ಸಾವಿನ ಸಂಖ್ಯೆ ಮೂರಕ್ಕೆ ತಲುಪಿದೆ ಎಂದು ಪಿಟಿಐ ವರದಿ ಮಾಡಿದೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಜಮ್ರಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸಿಬಿಷನ್ ಸೆಂಟರ್‌ನಲ್ಲಿ ಪ್ರಾರ್ಥನಾ ಅಧಿವೇಶನಕ್ಕಾಗಿ ರಾಜ್ಯದಾದ್ಯಂತ ಸುಮಾರು 2,500 ಯೆಹೋವನ ಸಾಕ್ಷಿಗಳು ಸೇರಿದ್ದರು ಬೆಳಿಗ್ಗೆ 9.30 ರ ಸುಮಾರಿಗೆ ಸ್ಫೋಟಗಳು ಸಂಭವಿಸಿದವು.

ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ. ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

ಮಲಯತ್ತೂರಿನ ಲಿಬಿನಾ ಎಂದು ಗುರುತಿಸಲಾದ 12 ವರ್ಷದ ಬಾಲಕಿ ಸೋಮವಾರ ಮುಂಜಾನೆ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಆಕೆಯ ದೇಹದ 95% ರಷ್ಟು ತೀವ್ರವಾದ ಸುಟ್ಟಗಾಯಗಳಾಗಿ ದಾಖಲಾಗಿದ್ದಳು. ಈ ಹಿಂದೆ ಇಬ್ಬರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದರು ಮತ್ತು ಸುಮಾರು 40 ಜನರು ಗಾಯಗೊಂಡಿದ್ದಾರೆ.

ಈ ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವೀಡಿಯೊ ಮೂಲಕ ಈ ಕೃತ್ಯ ಎಸಗಿದ್ದು ತಾನೇ ಎಂದು ಹೇಳಿ, ಆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ವಿಡಿಯೋದಲ್ಲಿ, ಯೆಹೋವನ ಸಾಕ್ಷಿಗಳ ಸಭೆಯ “ಬೋಧನೆ” ಯಿಂದ ಕೋಪಗೊಂಡಿದ್ದಾಗಿ ಹೇಳಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಘಟನೆಗೆ “ಕೋಮುವಾದಿ” ಬಣ್ಣ ಬಳಿಯಲು ಯತ್ನಿಸಿದ ಬಿಜೆಪಿ ನಾಯಕ

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಸ್ಫೋಟಗಳ ಕುರಿತು ಎಕ್ಸಾನಲ್ಲಿ ಪೋಸ್ಟ್‌ ಮಾಡಿ “ಕೋಮುವಾದಿ” ಹೇಳಿಕೆಗಳನ್ನು ನೀಡಿದ್ದಾರೆ.

”ದಿಲ್ಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ, ಕೇರಳದಲ್ಲಿ ಭಯೋತ್ಪಾದನೆ, ಹಮಾಸ್‌ನಿಂದ ಜಿಹಾದ್‌ಗಾಗಿ ಮುಕ್ತ ಕರೆಗಳು, ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳು ನಡೆಯುತ್ತಿವೆ” ಎಂದು ಅವರು ಹೇಳಿದರು.

ಗಾಜಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು ತಕ್ಷಣವೇ ಅಂತ್ಯಗೊಳಿಸಲು ಕೋರಿ ಭಾನುವಾರ ನವದೆಹಲಿಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ ರ್ಯಾಲಿಯನ್ನು ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ”ಅವರು ಸಚಿವರಾಗಿದ್ದಾರೆ ಮತ್ತು ಅವರು ತನಿಖಾ ಸಂಸ್ಥೆಗಳಿಗೆ ಕನಿಷ್ಠ ಮಟ್ಟದ ಗೌರವವನ್ನು ತೋರಿಸಬೇಕು” ಎಂದು ವಿಜಯನ್ ಸುದ್ದಿಗಾರರಿಗೆ ತಿಳಿಸಿದರು.

”ತನಿಖೆ ನಡೆಯುತ್ತಿದೆ… ಇಂತಹ ಗಂಭೀರ ಘಟನೆಯಲ್ಲಿ, ಇಂತಹ ಆರಂಭಿಕ ಹಂತದಲ್ಲಿ, ಅವರು ಕೆಲವು ಸೆಟ್ ಜನರನ್ನು ಗುರಿಯಾಗಿಸಿಕೊಂಡು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅವರ ಕೋಮುವಾದಿ ಅಜೆಂಡಾವನ್ನು ಆಧರಿಸಿದೆ, ಆದರೆ ಕೇರಳವು ಅಂತಹ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 27 ರಂದು, ಜಮಾತ್-ಎ-ಇಸ್ಲಾಮಿಯ ಯುವ ಘಟಕದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಮತ್ತೊಂದು ರ್ಯಾಲಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಹಮಾಸ್ ಮುಖ್ಯಸ್ಥ ಖಲೀದ್ ಮಶಾಲ್ ಮಾತನಾಡಿದರು.

ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಶಾಲ್, ”ಇಸ್ಲಾಂ ಧರ್ಮದ ಮೂರು ಪವಿತ್ರ ಸ್ಥಳಗಳಲ್ಲಿ ಒಂದಾದ ಜೆರುಸಲೆಮ್‌ನಲ್ಲಿರುವ ಅಲ್-ಅಕ್ಸಾ ಮಸೀದಿಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವ ಪ್ಯಾಲೇಸ್ಟಿನಿಯನ್ ಹೋರಾಟಗಾರರನ್ನು ಪ್ರಪಂಚದಾದ್ಯಂತದ ಜನರು ಬೆಂಬಲಿಸಬೇಕು” ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಇಸ್ರೇಲ್ ನಮ್ಮ ನಿವಾಸಿಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ” ಎಂದು ಮಾಜಿ ಹಮಾಸ್ ಮುಖ್ಯಸ್ಥರು ಹೇಳಿದರು.

”ಮನೆಗಳನ್ನು ಕೆಡವಲಾಗುತ್ತಿದೆ. ಅವರು ಗಾಜಾದ ಅರ್ಧಕ್ಕಿಂತ ಹೆಚ್ಚು ಭಾಗವನ್ನು ನಾಶಪಡಿಸಿದ್ದಾರೆ. ಚರ್ಚುಗಳು, ದೇವಾಲಯಗಳು, ವಿಶ್ವವಿದ್ಯಾನಿಲಯಗಳು ಮತ್ತು UN ಸಂಸ್ಥೆಗಳನ್ನು ಸಹ ನಾಶಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...