Homeಮುಖಪುಟಉತ್ತರಪ್ರದೇಶ: ಬಿಜೆಪಿ ಮಾಜಿ ಸಂಸದರ ಪುತ್ರ ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಸಾವು

ಉತ್ತರಪ್ರದೇಶ: ಬಿಜೆಪಿ ಮಾಜಿ ಸಂಸದರ ಪುತ್ರ ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಸಾವು

- Advertisement -
- Advertisement -

ಉತ್ತರಪ್ರದೇಶದ ಲಕ್ನೋದಲ್ಲಿನ ಆಸ್ಪತ್ರೆಯಲ್ಲಿ ಬಿಜೆಪಿಯ ಮಾಜಿ ಸಂಸದರೋರ್ವರ ಪುತ್ರನಿಗೆ ಬೆಡ್‌ ಖಾಲಿ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ದಾಖಲಿಸಲು ನಿರಾಕರಿಸಿದ್ದು, ಗಂಭೀರವಸ್ಥೆಯಲ್ಲಿದ್ದ ಅವರು ಸೂಕ್ತ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ.

ಸಂಜಯ್‌ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪುತ್ರ ನಿಧನರಾದ ಬಳಿಕ ಬಂಡಾ ಕ್ಷೇತ್ರದ ಮಾಜಿ ಸಂಸದ ಭೈರೋನ್‌ ಪ್ರಸಾದ್‌ ಮಿಶ್ರಾ ಅವರು ಆಸ್ಪತ್ರೆಯಲ್ಲಿ ಧರಣಿ ಕುಳಿತಿದ್ದರು. ಯಾವುದೇ ತುರ್ತು ಹಾಸಿಗೆಗಳು ಲಭ್ಯವಿಲ್ಲ ಎಂದು ಕರ್ತವ್ಯ ನಿರತ ಅಧಿಕಾರಿಗಳು ಹೇಳಿ ಸಂಸದರ ಮಗ ಪ್ರಕಾಶ್ ಮಿಶ್ರಾಗೆ ದಾಖಲಿಸಲು ನಿರಾಕರಿಸಿದ ಕಾರಣ ಅವರ ಸಾವು ಸಂಭವಿಸಿದೆ.

ಮಾಜಿ ಸಂಸದರು ತಮ್ಮ ಮಗ 40 ವರ್ಷದ ಪ್ರಕಾಶ್ ಮಿಶ್ರಾ ಅವರನ್ನು ಶನಿವಾರ ರಾತ್ರಿ 11 ಗಂಟೆಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಅವರು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ

ಹಿರಿಯ ಅಧಿಕಾರಿಗಳು ಬಂದು ಅವರನ್ನು ಭೇಟಿಯಾದ ಬಳಿಕ ಭೈರೋನ್ ಪ್ರಸಾದ್ ಅವರು ಬೆಳಿಗ್ಗೆ 4 ಗಂಟೆಗೆ ಧರಣಿಯನ್ನು ಕೊನೆಗೊಳಿಸಿದ್ದಾರೆ.

ಭೈರೋನ್ ಪ್ರಸಾದ್ ಅವರು 2014 ಮತ್ತು 2019ರ ನಡುವೆ ಬಂಡಾ ಕ್ಷೇತ್ರದ ಸಂಸದರಾಗಿದ್ದರು. 2019ರಲ್ಲಿ ಅವರಿಗೆ ಟಿಕೆಟ್ ನಿರಾಕರಿಸಿದಾಗ ಅವರು ಬಿಜೆಪಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದರು.

ಸೋಮವಾರ ಲಕ್ನೋ ಜಿಲ್ಲಾಡಳಿತವು ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಸೂಚಿಸಿದೆ. ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಸಂಬಂಧಪಟ್ಟ ವೈದ್ಯರನ್ನು ಸಂಸ್ಥೆಯಿಂದ ಬಿಡುಗಡೆಗೊಳಿಸಲಾಗುತ್ತಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಪಿಜಿಐ ನಿರ್ದೇಶಕರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.

ಸರ್ಕಾರದ ತನಿಖೆಗೆ ಆದೇಶ ನೀಡುವ ಮೊದಲು ಪಿಜಿಐ ನಿರ್ದೇಶಕ ಪ್ರೊಫೆಸರ್ ಆರ್.ಕೆ. ಧೀಮನ್  ತನಿಖೆಗೆ ಆದೇಶಿಸಿದ್ದರು ಎಂದು ವರದಿ ತಿಳಿಸಿದೆ.

ಈ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ ಬಿಜೆಪಿ ನೇತೃತ್ವದ ಯುಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯ ಮಾಜಿ ಸಂಸದರೊಬ್ಬರ ಮಗನಿಗೂ ಚಿಕಿತ್ಸೆ ಸಿಗುತ್ತಿಲ್ಲ ಎಂದಾದರೆ ಜನಸಾಮಾನ್ಯರ ಬಗ್ಗೆ ಏನು ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಹೊರ ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮುಗಿದ ಬಳಿಕ ಉತ್ತರಪ್ರದೇಶದ ಬಿಜೆಪಿ ಮಂತ್ರಿಗಳು ಇದನ್ನು ಅರಿಯುತ್ತಾರೆ, ಏಕೆಂದರೆ ಈಗ ಚುನಾವಣೆಗಳು ನಡೆಯುತ್ತಿದೆ ಅವರಿಗೆ ಚುನಾವಣೆ ಯಾರದ್ದೋ ಜೀವನಕ್ಕಿಂತ ಮುಖ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಮೊರ್ಬಿ ಸೇತುವೆ ದುರಂತಕ್ಕೆ 1ವರ್ಷ: ಸಂತ್ರಸ್ತರ ಕುಟುಂಬಸ್ಥರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...