Homeಮುಖಪುಟನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

ನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

- Advertisement -
- Advertisement -

ಆಪಲ್ ಮೊಬೈಲ್ ಕಂಪನಿಯು ಕನಿಷ್ಟ ಇಬ್ಬರು ಪತ್ರಕರ್ತರು ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರಿಗೆ ಎಚ್ಚರಿಕೆ ಸಂದೇಶಗಳನ್ನು ನೀಡಿದೆ. ಅವರ ಐಫೋನ್‌ಗಳನ್ನು ಪ್ರಾಯೋಜಿತ ದಾಳಿಕೋರರು ಹ್ಯಾಕ್ ಮಾಡಿರಬಹುದು ಎಂದು ಎಚ್ಚರಿಕೆ ನೀಡಿದೆ.

ತೃಣಮೂಲ ಕಾಂಗ್ರೆಸ್ ಲೋಕಸಭಾ ಸಂಸದ ಮಹುವಾ ಮೊಯಿತ್ರಾ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ನಾಯಕ ಶಶಿ ತರೂರ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಪವನ್ ಖೇರಾ, ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಉಸ್ತುವಾರಿ ಸುಪ್ರಿಯಾ ಶ್ರೀನಾಟೆ ಮತ್ತು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದ ಪ್ರಿಯಾಂಕಾ ಚತುರ್ವೇದಿ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಬೆದರಿಕೆ ಸಂದೇಶ ಸ್ವೀಕರಿಸಿದ್ದರ ಬಗ್ಗೆ ಬರೆದಿದ್ದಾರೆ.

ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷ ಸಮೀರ್ ಸರನ್ ಮತ್ತು ಡೆಕ್ಕನ್ ಕ್ರಾನಿಕಲ್ ರೆಸಿಡೆಂಟ್ ಎಡಿಟರ್ ಶ್ರೀರಾಮ್ ಕರ್ರಿ ಅವರು ಆಪಲ್‌ನಿಂದ ಎಚ್ಚರಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದರು. ಅದರ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಸೀತಾರಾಂ ಯೆಚೂರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರಿಗೂ ಎಚ್ಚರಿಕೆ ನೀಡಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಸ್ವತಂತ್ರ ಪತ್ರಿಕೋದ್ಯಮ ರೇವತಿಗೂ ಈ ಎಚ್ಚರಿಕೆ ಸಂದೇಶ ಬಂದಿದೆ. ಈ ಬಗ್ಗೆ ಎಕ್ಸಾನಲ್ಲಿ ಪೋಸ್ಟ್ ಮಾಡಿರುವ ಅವರು, ”ಕಳೆದ ಕೆಲವು ದಿನಗಳಿಂದ ಅವರುಗಳ ಫೋನ್ ಬ್ಯಾಟರಿಯಿಂದ ಬೇಗ ಖಾಲಿಯಾಗುತ್ತಿದೆ ಮತ್ತು ವಿಚಿತ್ರವಾಗಿ ವರ್ತಿಸುತ್ತಿದೆ. ಇದು ಮೊದಲ ಬಾರಿ ಅಲ್ಲ!” ಎಂದು ತಿಳಿಸಿದ್ದಾರೆ.

ಓವೈಸಿಯನ್ನು ಹೊರತುಪಡಿಸಿ ಇನ್ನುಳಿದ ರಾಜಕೀಯ ನಾಯಕರು ವಿರೋಧ ಪಕ್ಷಗಳ ಒಕ್ಕೂಟ INDIAಗೆ  ಸೇರಿದವರು. ಇವರೆಲ್ಲ ಮೋದಿ ಸರ್ಕಾರದ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತಿದ್ದಾರೆ.

”ನಿಮ್ಮ ಸಾಧನವು ರಾಜ್ಯ ಪ್ರಾಯೋಜಿತ ದಾಳಿಕೋರರಿಂದ ರಾಜಿ ಮಾಡಿಕೊಂಡರೆ, ಅವರು ನಿಮ್ಮ ಸೂಕ್ಷ್ಮ ಡೇಟಾ, ಸಂವಹನಗಳು ಅಥವಾ ಕ್ಯಾಮರಾ ಮತ್ತು ಮೈಕ್ರೊಫೋನ್ ಅನ್ನು ದೂರದಿಂದಲೇ ಪ್ರವೇಶಿಸಲು ಸಾಧ್ಯವಾಗುತ್ತದೆ” ಎಂದು ಅವರಿಗೆ ಬಂದಿರುವ ಸಂದೇಶಗಳು ಎಚ್ಚರಿಕೆ ನೀಡಿವೆ.

ಅಧಿಸೂಚನೆಯಲ್ಲಿ, ”ಈ ರೀತಿ ನಿಮ್ಮ ಮೊಬೈಲ್‌ ಹ್ಯಾಕ್ ಮಾಡಲು ಸಾಧ್ಯವಿರುವಾಗ ಇದು ತಪ್ಪು… ಈ ಎಚ್ಚರಿಕೆಯನ್ನು ದಯವಿಟ್ಟು ಗಂಭೀರವಾಗಿ ತೆಗೆದುಕೊಳ್ಳಿ” ಎಂದು ಹೇಳಲಾಗಿದೆ.

ಆಪಲ್ ತನ್ನ ವೆಬ್‌ಸೈಟ್‌ನಲ್ಲಿ ಹೇಳಿದ್ದೇನೆ?

”ಸಾಂಪ್ರದಾಯಿಕ ಸೈಬರ್ ಅಪರಾಧಿಗಳಿಗಿಂತ ಇದು ಭಿನ್ನವಾಗಿದೆ. ರಾಜ್ಯ ಪ್ರಾಯೋಜಿತ ದಾಳಿಕೋರರು ಕಡಿಮೆ ಸಂಖ್ಯೆಯ ನಿರ್ದಿಷ್ಟ ವ್ಯಕ್ತಿಗಳು ಮತ್ತು ಅವರ ಸಾಧನಗಳನ್ನು ಗುರಿಯಾಗಿಸುತ್ತಾರೆ. ಹ್ಯಾಕ್ ಮಾಡಲು ಅಸಾಧಾರಣ ಸಂಪನ್ಮೂಲಗಳನ್ನು ಬಳಸುತ್ತಾರೆ. ಈ ದಾಳಿಗಳನ್ನು ಪತ್ತೆಹಚ್ಚಲು ಮತ್ತು ತಡೆಯುವುದು ತುಂಬಾ ಕಷ್ಟಕರವಾಗುತ್ತದೆ. ರಾಜ್ಯ-ಪ್ರಾಯೋಜಿತ ದಾಳಿಗಳು ಹೆಚ್ಚು ಸಂಕೀರ್ಣವಾಗಿವೆ” ಎಂದು ಹೇಳಿದೆ.

ಇದನ್ನೂ ಓದಿ: ಕೇರಳ: ಸ್ಪೋಟದ ಬಗ್ಗೆ ವಿವಾದಾತ್ಮಕ ಪೋಸ್ಟ್‌ ಮಾಡಿದ್ದ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...