Homeಮುಖಪುಟಇಸ್ರೇಲ್‌ನ ಆಕ್ರಮಣಕಾರಿ ದಾಳಿಯಲ್ಲಿ ಹಮಾಸ್ ಕಮಾಂಡರ್‌ನ ಹತ್ಯೆ

ಇಸ್ರೇಲ್‌ನ ಆಕ್ರಮಣಕಾರಿ ದಾಳಿಯಲ್ಲಿ ಹಮಾಸ್ ಕಮಾಂಡರ್‌ನ ಹತ್ಯೆ

- Advertisement -
- Advertisement -

ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನೆಯ ಆಕ್ರಮಣಕಾರಿ ದಾಳಿ ಮುಂದುವರೆದಿದ್ದು, ಇಸ್ರೇಲಿ ವಾಯುಪಡೆಯು ಹಮಾಸ್ ಸಂಘಟನೆಯ ಪ್ರದೇಶದ ಮೇಲೆ ನಿರಂತರವಾಗಿ ಬಾಂಬ್ ದಾಳಿ ನಡೆಸುತ್ತಿದೆ. ಇಸ್ರೇಲಿ ರಕ್ಷಣಾ ಪಡೆಗಳು ಮಂಗಳವಾರ ಗಾಜಾದ ಜಬಾಲಿಯಾದಲ್ಲಿ ಪ್ರಮುಖ ಕಾರ್ಯಾಚರಣೆಯನ್ನು ನಡೆಸಿವೆ.

ಹಮಾಸ್ ಸಂಘಟನೆಯ ಕೇಂದ್ರೀಯ ಜಬಾಲಿಯಾ ಬೆಟಾಲಿಯನ್‌ನ ಕಮಾಂಡರ್ ಇಬ್ರಾಹಿಂ ಬಿಯಾರಿ ಅವರನ್ನು ಬಾಂಬ್ ದಾಳಿಯಲ್ಲಿ ಹತ್ಯೆ ಮಾಡಿರುವುದಾಗಿ ಇಸ್ರೇಲ್ ನ ರಕ್ಷಣಾ ಪಡೆಗಳು ದೃಢಪಡಿಸಿವೆ. ಆದರೆ, ಈ ಶಿಬಿರದಲ್ಲಿ ಸಂಘಟನೆಯ ಮುಖಂಡರು ಇದ್ದರು ಎಂಬ ವರದಿಗಳನ್ನು ಹಮಾಸ್ ವಕ್ತಾರ ಹಝೀಮ್ ಕಾಸಿಂ ಅಲ್ಲಗಳೆದಿದ್ದಾರೆ.

ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ನಡೆಸಲು ‘ನುಕ್ಖಾ’ ಹೋರಾಟಗಾರರನ್ನು ಇಸ್ರೇಲ್‌ಗೆ ಕಳುಹಿಸಿಕೊಡುವಲ್ಲಿ ಬಿಯಾರಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಐಡಿಎಫ್ ಹೇಳಿದೆ.

ಇದಕ್ಕೂ ಮುನ್ನ ಐಡಿಎಫ್ ವಕ್ತಾರ ಲೆಫ್ಟಿನೆಂಟ್ ಕರ್ನಲ್ ರಿಚರ್ಡ್ ಹೆಟ್ ಹೇಳಿಕೆ ನೀಡಿ, ಪರಿಹಾರ ಶಿಬಿರದ ಸುತ್ತಮುತ್ತ ಅತ್ಯ ಹಿರಿಯ ಹಮಾಸ್ ಕಮಾಂಡರ್ ಅವರನ್ನು ಐಡಿಎಫ್ ಗುರಿ ಮಾಡಿದೆ ಎಂದು ಪ್ರಕಟಿಸಿದ್ದರು.

ಇಲ್ಲಿ ರಕ್ಷಣಾ ಪಡೆಗಳು ಹಮಾಸ್ ಕಮಾಂಡರ್ ಸೇರಿದಂತೆ 50 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಅಬು ಅಜೀನಾ ಹತ್ಯೆ ಹಮಾಸ್​ನ್ನು ದುರ್ಬಲಗೊಳಿಸಿದೆ ಎಂದು ಇಸ್ರೇಲ್ ಹೇಳಿದೆ.

ಇಸ್ರೇಲ್ ದಾಳಿಯಲ್ಲಿ ಇದುವರೆಗೆ 10 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಗಾಜಾ ಪಟ್ಟಿಯ ಆರೋಗ್ಯ ಸಚಿವಾಲಯ ಹೇಳಿದೆ. ಇಸ್ರೇಲ್​ನಲ್ಲಿ ಇದುವರೆಗೆ 1,400 ಜನರು ಸಾವನ್ನಪ್ಪಿದ್ದಾರೆ, ಸುಮಾರು 250 ಜನರನ್ನು ಹಮಾಸ್ ಒತ್ತೆಯಾಳಾಗಿ ಇರಿಸಿದೆ. ಇದೇ ಸಮಯದಲ್ಲಿ, ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಇಸ್ರೇಲಿ ಸೈನಿಕರು ಸಹ ಸಾವನ್ನಪ್ಪಿದ್ದಾರೆ.

ಇಸ್ರೇಲಿ ಸೇನೆಯು ಮೊದಲು ವೈಮಾನಿಕ ದಾಳಿಯನ್ನು ಪ್ರಾರಂಭಿಸಿತು, ಇದಾದ ನಂತರ ಹಮಾಸ್‌ನ ಸೆಂಟ್ರಲ್ ಜಬಾಲಿಯಾ ಬೆಟಾಲಿಯನ್ ಬಳಸುತ್ತಿದ್ದ ಕಟ್ಟಡವನ್ನು ಗ್ರೌಂಡ್ ಫೋರ್ಸ್ ವಶಪಡಿಸಿಕೊಂಡಿತು. ಇಸ್ರೇಲ್ ದಾಳಿಯಲ್ಲಿ ಜಬಾಲಿಯಾದಲ್ಲಿ ಹಲವು ಕಟ್ಟಡಗಳು ನಾಶವಾಗಿವೆ. ಈ ಸಮಯದಲ್ಲಿ, ಇಸ್ರೇಲಿ ಸೇನೆಯು ಬೆಟಾಲಿಯನ್ ಮುಖ್ಯಸ್ಥ ಸೇರಿದಂತೆ 50 ಹಮಾಸ್ ಹೋರಾಟಗಾರರನ್ನು ಕೊಂದಿದೆ ಎಂದು ಹೇಳಲಾಗಿದೆ. ಇದಾದ ಬಳಿಕ ಇಲ್ಲಿ ನಿರ್ಮಿಸಲಾಗಿದ್ದ ಸುರಂಗವನ್ನೂ ಭೂಸೇನೆ ಧ್ವಂಸಗೊಳಿಸಿದೆ.

ಇದನ್ನೂ ಓದಿ: ಇಸ್ರೇಲ್ ಹಿಂಸಾಚಾರ: ಹಮಾಸ್‌ ಗುಂಪಿನ 150 ಸುರಂಗ ಮಾರ್ಗಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...