Homeಕರ್ನಾಟಕಜಾತಿ ನಿಂದನೆ ಪ್ರಕರಣ: ಪುನೀತ್ ಕೆರೆಹಳ್ಳಿ ಬಂಧನ ಸಾಧ್ಯತೆ

ಜಾತಿ ನಿಂದನೆ ಪ್ರಕರಣ: ಪುನೀತ್ ಕೆರೆಹಳ್ಳಿ ಬಂಧನ ಸಾಧ್ಯತೆ

- Advertisement -
- Advertisement -

ಹಿಂದುತ್ವ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕನ್ನಡ ಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ಅವರು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಂಧನದ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

”ನಾನು ದಲಿತನಾಗಿರುವ ಕಾರಣ ಪುನೀತ್ ಕೆರೆಹಳ್ಳಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ” ಎಂದು ಭೈರಪ್ಪ ಹರೀಶ್ ಕುಮಾರ್ ಅವರು ದೂರಿನಲ್ಲಿ ಹೇಳಿದ್ದಾರೆ.

”ನಾನೊಬ್ಬ ಕನ್ನಡಪರ ಹೋರಾಟಗಾರನಾಗಿದ್ದು ಇತ್ತೀಚೆಗೆ ಇದೀಸ್ ಪಾಷಾ ಕೊಲೆ ಆರೋಪದಲ್ಲಿ ಜೈಲು ಶಿಕ್ಷೆಯಿಂದ ಬಿಡುಗಡೆಗೊಂಡ ಬಳಿಕವೂ ಸಮಾಜದ ಸ್ವಾಸ್ಥ್ಯ ಕದಡಲು ಯತ್ನಿಸುತ್ತಿದ್ದ ಪುನೀತ್ ಕೆರೆಹಳ್ಳಿಯ ಬಗ್ಗೆ ಜಾಗೃತರಾಗಿರುವಂತೆ ಸಾಮಾಜಿಕ ಕಳಕಳಿಯಿಂದ ಮಾಧ್ಯಮ ವರದಿಯನ್ನು ಫೇಸ್ ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ದಿನಾಂಕ 17-10-2023 ರಂದು ಪುನೀತ್ ಕೆರೆಹಳ್ಳಿ, ನನ್ನ ಮತ್ತು ನನ್ನ ಪತ್ನಿ ಮಕ್ಕಳ ವಿರುದ್ಧ ನಿಂದನಾತ್ಮಕ ಮಾತುಗಳನ್ನಾಡಿದ್ದಾನೆ. ನನ್ನ ಪತ್ನಿ ,ಮಕ್ಕಳು ತಲೆ ಎತ್ತಿ ನಡೆಯಂದಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ನಾಯಕರನ್ನು ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

”ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದನು. ಪುನೀತ್ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಈ ಪೋಸ್‌ಗೆ ಕೆಟ್ಟದ್ದಾಗಿ ಕಮೆಂಟ್ ಮಾಡಿರುತ್ತಾರೆ. ಪುನೀತ್ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದರು.

ಇದಕ್ಕೂ ಮುನ್ನ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ವೇಳೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆಗಿತ್ತು.

”ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂಬುವ ಪದ ಬಳಿಸಿರುವುದೇ ಅತ್ಯಂತ ಕಾನೂನು ವಿರೋಧಿ ಕೃತ್ಯ. ಆತನ ಹೇಳಿಕೆಯ ಹಿನ್ನೆಲೆಯಲ್ಲಿ ಈ ಕೂಡಲೇ ಪ್ರಕರಣ ದಾಖಲಿಸಿಕೊಂಡು ಅವನಿಗೆ ಬೆಂಬಲ ವ್ಯಕ್ತಪಡಿಸಿರುವ ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಸಬೇಕು” ಎಂದು ದೂರು ದಾಖಲಾಗಿತ್ತು.

ಇದನ್ನೂ ಓದಿ: ಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...