Homeಮುಖಪುಟತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

ತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

- Advertisement -
- Advertisement -

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೊಕ್ಕಡಿ ಗ್ರಾಮದಲ್ಲಿ ಎಐಎಡಿಎಂಕೆಯ ಪಂಚಾಯತ್ ಸದಸ್ಯೆ ಮತ್ತು ಆಕೆಯ ಪತಿ ಸೇರಿದಂತೆ ಜನರ ಗುಂಪು ನಡೆಸಿದ ದಾಳಿಯಲ್ಲಿ ದಲಿತ ಸಮುದಾಯದ  10 ಮಂದಿ ಗಾಯಗೊಂಡಿದ್ದಾರೆ.

ದಲಿತ ಸಮುದಾಯದ ಜನರು ತಮ್ಮ ವಸತಿ ಪ್ರದೇಶದ ಬಳಿ ಕಲ್ಲು ಪಾಲಿಶ್ ಮಾಡುವ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಸಂಘರ್ಷಗಳು ನಡೆದಿದೆ. ಎಐಎಡಿಎಂಕೆಯ ಕೃಷ್ಣಗಿರಿ ವೆಸ್ಟ್ ಯೂನಿಯನ್ ಕಾರ್ಯದರ್ಶಿ ಸೊಕ್ಕಡಿ ರಾಜನ್, ಪಂಚಾಯತ್ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರು ಜಾತಿ ನಿಂದನೆಗಳನ್ನು ಮಾಡಿದ್ದು, ಬಳಿಕ ದಲಿತರ ಮೇಲೆ ಕಲ್ಲು ತೂರಾಟ ಮಾಡಲು ಜನರನ್ನು ಪ್ರೇರೇಪಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸೊಕ್ಕಡಿ ರಾಜನ್ ಮತ್ತು ರಾಮಲಿಂಗಂ ವಿರುದ್ಧ ಪೊಲೀಸರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

120ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸಿಸುವ ಗ್ರಾಮದಲ್ಲಿ ಕಲ್ಲು ಪಾಲಿಶ್ ಮಾಡುವುದನ್ನು ಸ್ಥಳೀಯರು ವಿರೋಧಿಸಿದ್ದಾರೆ. ಇದರಿಂದ ಆರೋಗ್ಯ ಸಂಬಂಧಿತ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದರು. ಇದರಿಂದ ಕೋಪಗೊಂಡು ದಲಿತರು ವಾಸಿಸುತ್ತಿದ್ದ ವಸತಿ ಪ್ರದೇಶದಲ್ಲಿ ಕಲ್ಲು ತೂರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸೊಕ್ಕಾಡಿಯ ದಲಿತ ನಿವಾಸಿಯೊಬ್ಬರು ಮಾತನಾಡಿ, ಅ.29ರಂದು ಕೆಲವು ಯುವಕರು ತಮ್ಮ ಮನೆಗೆ ಕಲ್ಲಿನ ಧೂಳು ಬಂದು ಆರೋಗ್ಯ ಸಮಸ್ಯೆಯಾಗುತ್ತದೆ. ಇದರಿಂದ  ಕಲ್ಲು ಪಾಲಿಶ್ ನಿಲ್ಲಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಿದ್ದರು. ಇದಾದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಬಂದ ಸೊಕ್ಕಾಡಿ ರಾಜನ್ ಅಲ್ಲಿದ್ದ ಜನರಿಗೆ ಜಾತಿ ನಿಂದನೆ ಮಾಡಿದ್ದರು. ಆ ಬಳಿಕ ವಾಗ್ವಾದ ನಡೆದು ಗ್ರಾಮದಲ್ಲಿ 30 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಆದರೆ ತಡರಾತ್ರಿ ಸೊಕ್ಕಡಿ ರಾಜನ್‌, ಪಂಚಾಯತ್‌ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರೊಂದಿಗೆ ವೆಲ್ಲಾಲ ಗೌಂಡರ್‌ ಜನರು ಬಂದು ದಲಿತರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೃಷ್ಣಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಎರಡೂ ಕಡೆಯ 23 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ 13 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಗ್ರಾಮದ ಇನ್ನೋರ್ವ ವ್ಯಕ್ತಿ ಮಾತನಾಡಿದ್ದು, ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಕಲ್ಲಿನ ಪಾಲಿಶ್ ಮಾಡುವ ಕೆಲಸ ಪ್ರಾರಂಭಿಸಿದ್ದರು. ಹಲವು ಬಾರಿ ನಾವು ಮನೆಗಳಿಗೆ ಧೂಳು ಹರಡದಂತೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದೆವು. ಮನೆಯ ಆಹಾರ, ನೀರು ಎಲ್ಲಾ ದೂಳಲ್ಲಿ ಮುಳುಗುತ್ತದೆ. ನಮ್ಮ ಮನವಿಯನ್ನು ಅವರು ಸ್ವೀಕರಿಸಲಿಲ್ಲ ಎಂದು ಹೇಳಿದ್ದಾರೆ.

ಹರೂರಿನ ಸಿಪಿಐ(ಎಂ) ಮಾಜಿ ಶಾಸಕ ಡಿಲ್ಲಿ ಬಾಬು ಈ ಕುರಿತು ಮಾತನಾಡಿದ್ದು, ಈ ಸಮಸ್ಯೆ ಉಲ್ಬಣಗೊಂಡಾಗ ಪೊಲೀಸರು ದಲಿತರಿಗೆ ಯಾವುದೇ ರಕ್ಷಣೆ ನೀಡಲಿಲ್ಲ. ಇದು ಪೊಲೀಸರ ಸಮ್ಮುಖದಲ್ಲಿ ನಡೆದಿರುವುದು ಆಶ್ಚರ್ಯಕರವಾಗಿದೆ ಮತ್ತು ಈಗ ಪೊಲೀಸರು ದಾಳಿಕೋರರು ಮತ್ತು ಸಂತ್ರಸ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದರೂ ಪರಿಸ್ಥಿತಿ ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...