Homeಮುಖಪುಟಮಹಾರಾಷ್ಟ್ರ: ಸರ್ವಪಕ್ಷ ಸಭೆಯ ನಿರ್ಣಯ ತಿರಸ್ಕರಿಸಿದ ಮನೋಜ್ ಪಾಟೀಲ್; ಉಪವಾಸ ಸತ್ಯಾಗ್ರಹ ನಿಲ್ಲಿಸಲು ನಿರಾಕರಣೆ

ಮಹಾರಾಷ್ಟ್ರ: ಸರ್ವಪಕ್ಷ ಸಭೆಯ ನಿರ್ಣಯ ತಿರಸ್ಕರಿಸಿದ ಮನೋಜ್ ಪಾಟೀಲ್; ಉಪವಾಸ ಸತ್ಯಾಗ್ರಹ ನಿಲ್ಲಿಸಲು ನಿರಾಕರಣೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದ ಕಿಚ್ಚು ಹೆಚ್ಚಳವಾಗಿದ್ದು,  ಮರಾಠ ಮೀಸಲಾತಿ ವಿಚಾರವಾಗಿ ಚರ್ಚಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ಕರೆದಿದ್ದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದೆ. ಸಭೆಯಲ್ಲಿ ಮರಾಠ ಸಮುದಾಯಕ್ಕೆ ಕೋಟಾ ನೀಡಲು ಎಲ್ಲಾ ಪಕ್ಷಗಳು ಒಪ್ಪಿಗೆ ಸೂಚಿಸಿವೆ. ಆದರೆ ಮರಾಠ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಮನೋಜ್ ಜಾರಂಗೆ ಪಾಟೀಲ್ ಅವರು ಮರಾಠಾ ಸಮುದಾಯಕ್ಕೆ ಸಂಪೂರ್ಣವಾಗಿ ಮೀಸಲಾತಿ ನೀಡುವವರೆಗೆ ಉಪವಾಸ ಮುಂದುವರಿಸುವುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ರಾಜ್ಯದ ವಿವಿಧ ರಾಜಕೀಯ ಪಕ್ಷಗಳ ನಾಯಕರ ಜೊತೆ ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸಮುದಾಯದ ಬೇಡಿಕೆಯಂತೆ ಕೋಟಾ ನೀಡಲು ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಯಾವುದೇ ಸಮುದಾಯಕ್ಕೆ ಸಮಸ್ಯೆಯಾಗದಂತೆ ಮರಾಠರಿಗೆ ಮೀಸಲಾತಿ ನೀಡಲಾಗುವುದು. ಆದ್ದರಿಂದ ಈ ಕಾರ್ಯವಿಧಾನವು ಸಮಯವನ್ನು ತೆಗೆದುಕೊಳ್ಳುತ್ತದೆ. ಆದ್ದರಿಂದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಅಗತ್ಯವಿರುವ ಸಮಯವನ್ನು ನೀಡುವಂತೆ ಕೇಳಿದ್ದಾರೆ. ಇದಲ್ಲದೆ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿರುವ ಮನೋಜ್ ಜಾರಂಗೆ ಪಾಟೀಲ್ ಅವರಿಗೆ ಉಪವಾಸ ಅಂತ್ಯಗೊಳಿಸಿ ಸರ್ಕಾರಕ್ಕೆ ಸಹಕರಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಗಿದೆ.

ಆದರೆ ಸರ್ವಪಕ್ಷಗಳ ಸಭೆಯ ನಿರ್ಧಾರವನ್ನು ಜಾರಂಗೆ ಪಾಟೀಲ್ ತಿರಸ್ಕರಿಸಿದ್ದು, ಮರಾಠ ಸಮುದಾಯಕ್ಕೆ ಸಂಪೂರ್ಣ ಮೀಸಲಾತಿ ನೀಡುವವರೆಗೆ ಉಪವಾಸ ಮುಂದುವರಿಸುವುದಾಗಿ ಹೇಳಿದ್ದಾರೆ.

ಸರ್ಕಾರಕ್ಕೆ ಎಷ್ಟು ಸಮಯ ಬೇಕು ಮತ್ತು ಯಾವುದಕ್ಕೆ ಬೇಕು? ಮರಾಠ ಸಮುದಾಯಕ್ಕೆ ಸಂಪೂರ್ಣ ಮೀಸಲಾತಿ ನೀಡಲಾಗುತ್ತದೆಯೇ? ಇದನ್ನು ಸ್ಪಷ್ಟಪಡಿಸಿ, ಸರ್ವಪಕ್ಷ ಸಭೆಯಲ್ಲಿ ಏನು ಚರ್ಚಿಸಲಾಗಿದೆ ಎಂದು ತಿಳಿಯುವ ಆಸಕ್ತಿ ನನಗೆ ಇಲ್ಲ ಎಂದು ಮನೋಜ್ ಜಾರಂಗೆ ಪಾಟೀಲ್‌ ಹೇಳಿದ್ದಾರೆ.

ಬಡವರ ಮಕ್ಕಳ ಮೇಲೆ ಸರಕಾರ ಕೇಸ್‌ ದಾಖಲಿಸುತ್ತಿದೆ. ಅವರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ನಮಗೆ ಮೀಸಲಾತಿ ನೀಡಿ, ನಾವು ಹಠವನ್ನು ನಿಲ್ಲಿಸುತ್ತೇವೆ. ಮರಾಠರಿಗೆ ಮೀಸಲಾತಿ ಕೊಡಿ. ನಿಮಗೆ ಏಕೆ ಸಮಯ ಬೇಕು? ಎಂದು ಮನೋಜ್ ಜಾರಂಗೆ ಪಾಟೀಲ್ ಪ್ರಶ್ನಿಸಿದ್ದಾರೆ.

ನೀವು ಎಲ್ಲಾ ಮರಾಠಿಗರಿಗೆ ಕುಂಬಿ ಜಾತಿ ಪ್ರಮಾಣ ಪತ್ರ ನೀಡುತ್ತೀರಾ? ನಿಮ್ಮ ಮನಸ್ಸಿನಲ್ಲಿ ಏನಿದೆ? ನಮಗೆ ತಿಳಿಸಿ, ಮರಾಠಾ ಸಮುದಾಯವು ಜನರನ್ನು ಮೋಸ ಮಾಡುವುದಿಲ್ಲ ಮತ್ತು ದ್ರೋಹ ಮಾಡುವುದಿಲ್ಲ. ಸುಳ್ಳು ಮತ್ತು ಅಸತ್ಯವನ್ನು ಹೇಳಲು ನಮ್ಮನ್ನು ಒತ್ತಾಯಿಸಬೇಡಿ ಎಂದು ಮನೋಜ್ ಜಾರಂಗೆ ಪಾಟೀಲ್ ಹೇಳಿದ್ದಾರೆ.

ಸರ್ಕಾರದ ನಿರ್ಣಯವನ್ನು ನಾವು ಒಪ್ಪುವುದಿಲ್ಲ. ಸರ್ಕಾರ ಶೀಘ್ರದಲ್ಲೇ ಸಂಪೂರ್ಣ ಮೀಸಲಾತಿ ನೀಡುತ್ತಾ? ಸಂಪೂರ್ಣ ಮೀಸಲಾತಿ ಸಿಗುವವರೆಗೆ ನಮ್ಮ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಮನೋಜ್ ಜಾರಂಗೆ ಪಾಟೀಲ್ ಸ್ಪಷ್ಟಪಡಿಸಿದರು. ನಾನು ಉಪವಾಸ ಸತ್ಯಾಗ್ರಹ ಮಾಡುವ ಮುನ್ನ ಚರ್ಚೆಯ ಅಗತ್ಯವಿದೆ ಎಂದು ಏಕೆ ಹೇಳಲಿಲ್ಲ? ನಾನು 8 ದಿನ ಉಪವಾಸ ಮಾಡಿದ ನಂತರ ನೀವು ಎಚ್ಚರಗೊಂಡಿದ್ದೀರಿ. ಆದರೆ ನಾನು ನನ್ನ ಸಮುದಾಯಕ್ಕಾಗಿ ಹೋರಾಡಲು ಸಿದ್ಧ. ಅವರು ಉದ್ದೇಶಪೂರ್ವಕವಾಗಿ ಮರಾಠ ಸಮುದಾಯವನ್ನು ಕೆಣಕುತ್ತಿದ್ದಾರೆ. ಅವರಿಗೆ ಸಮಯ ಏಕೆ ಬೇಕು ಎಂದು ಅವರು ಇಲ್ಲಿಗೆ ಬಂದು ಮಹಾರಾಷ್ಟ್ರದ ಜನರಿಗೆ ಹೇಳಬೇಕು. ಅದರ ನಂತರ ನಾವು ಯೋಚಿಸುತ್ತೇವೆ ಎಂದು ಮನೋಜ್ ಜಾರಂಗೆ ಪಾಟೀಲ್ ಹೇಳಿದ್ದಾರೆ.

ಮನೋಜ್ ಜಾರಂಗೆ ಪಾಟೀಲ್ ಉಪವಾಸ ಸತ್ಯಾಗ್ರಹ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಂಜೆಯಿಂದ ನೀರು ಕುಡಿಯುವುದನ್ನು ನಿಲ್ಲಿಸುವುದಾಗಿ ಅವರು ಘೋಷಿಸಿದ್ದಾರೆ. ಮನೋಜ್ ಜಾರಂಗೆ ಪಾಟೀಲ್ ಅವರು ಇಡೀ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ತಮ್ಮ ಬೇಡಿಕೆಯಲ್ಲಿ ದೃಢವಾಗಿ ನಿಂತಿದ್ದಾರೆ.

ಇದನ್ನು ಓದಿ: ಪ್ಯಾಲೆಸ್ತೀನ್‌ ನಾಗರಿಕರ ನರಮೇಧ ತಡೆಯುವಲ್ಲಿ ವಿಶ್ವಸಂಸ್ಥೆ ವಿಫಲವಾಗಿದೆ ಎಂದು ಹಿರಿಯ ಅಧಿಕಾರಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...