Homeಮುಖಪುಟಸಲಿಂಗ ವಿವಾಹ: ಸುಪ್ರೀಂ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಕೆ

ಸಲಿಂಗ ವಿವಾಹ: ಸುಪ್ರೀಂ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಕೆ

- Advertisement -
- Advertisement -

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನಿರಾಕರಿಸುವ ಅಕ್ಟೋಬರ್ 17 ರ ಸುಪ್ರೀಂ ಕೋರ್ಟ್‌ನ ತೀರ್ಪು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ. ಹಿಂದಿನ ಅರ್ಜಿದಾರರಲ್ಲಿ ಒಬ್ಬರಾದ ಉದಿತ್ ಸೂದ್ ಅವರು ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು.

ಕಳೆದ ತಿಂಗಳು, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿತು,

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ಅದನ್ನು ಸಂಸತ್ತು ಮಾಡಬೇಕೆಂದು ಹೇಳಿದೆ. ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ”ನ್ಯಾಯಾಲಯವು ಕಾನೂನುಗಳನ್ನು ಮಾಡುವುದಿಲ್ಲ ಬದಲಿಗೆ ಅವುಗಳನ್ನು ವ್ಯಾಖ್ಯಾನಿಸುತ್ತದೆ. ಕೇವಲ ಸಂಸತ್ತು ಮಾತ್ರ ವಿಶೇಷ ವಿವಾಹ ಕಾಯ್ದೆಯಲ್ಲಿ ಬದಲಾವಣೆ ತರಬಹುದು. ಆದರೆ ಈ ಎಲ್‌ಜಿಬಿಟಿಕ್ಯೂ ಸಮುದಾಯ ತಮ್ಮ ಬದುಕು ಸಾಗಿಸುವಲ್ಲಿ ಯಾವುದೇ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳದ್ದು” ಎಂದು ಸೂಚಿಸಿದರು.

”ವಿಶೇಷ ವಿವಾಹ ಕಾಯ್ದೆ(SMA) ವಿಷಯವನ್ನು ಸಂಸತ್ತು ನಿರ್ಧರಿಸಬೇಕು. ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್ 4 ಅನ್ನು ರದ್ದುಪಡಿಸಿದರೆ ಪ್ರಗತಿಪರ ಶಾಸನದ ಪ್ರಯೋಜನಗಳನ್ನು ಕಳೆದುಕೊಳ್ಳಬೇಕಾಗುವ ಅಪಾಯವೂ ಇದೆ. ಇದು ದೇಶವನ್ನು ಸ್ವಾತಂತ್ರ್ಯ ಪೂರ್ವ ಯುಗಕ್ಕೆ ಕೊಂಡೊಯ್ಯಲಿದೆ. ಭಾರತೀಯ ಉತ್ತರಾಧಿಕಾರ ಕಾಯ್ದೆ ಅಥವಾ ಹಿಂದೂ ಉತ್ತರಾಧಿಕಾರ ಕಾಯ್ದೆಯನ್ನು ಒಮ್ಮೆ ಗಮನಿಸಿದರೆ ಈ ಪ್ರಕರಣವು ಶಾಸಕಾಂಗ ಕ್ಷೇತ್ರ ವ್ಯಾಪ್ತಿಗೆ ಸೇರುತ್ತದೆ ಎಂಬುದು ಸ್ಪಷ್ಟ” ಎಂದು ಸಿಜೆಐ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಮ್ಯಾರಥಾನ್ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮೇ 11ರಂದು ತೀರ್ಪು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರಿದ್ದ ಪಂಚಪೀಠವು ಈ ತೀರ್ಪು ನೀಡಿದೆ.

ಸಲಿಂಗಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕು ಎಂದು ಕೋರಿ 18 ಸಲಿಂಗಿ ದಂಪತಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಕೋರ್ಟ್​ ಏಪ್ರಿಲ್ 18ರಿಂದ ಆರಂಭಿಸಿತ್ತು.

ತೀರ್ಪಿನಲ್ಲಿ ಉಲ್ಲೇಖಿಸಿದ ಪ್ರಮುಖ ಅಂಶಗಳು:

  1. ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನ ಕ್ರಮವನ್ನು ಆಯ್ಕೆ ಮಾಡುವ ಅವಿಭಾಜ್ಯ ಅಂಗ
  2. ಮದುವೆಯು ಸ್ಥಿರ ಮತ್ತು ಬದಲಾಗದ ಸಂಸ್ಥೆ ಎಂದು ಹೇಳುವುದು ತಪ್ಪು
  3. ಎಲ್‌ಜಿಬಿಟಿ ಸಮುದಾಯದ ವ್ಯಕ್ತಿಗಳು ಸೇರಿದಂತೆ ಎಲ್ಲ ವ್ಯಕ್ತಿಗಳು ತಮ್ಮ ಜೀವನದ ನೈತಿಕ ಗುಣಮಟ್ಟವನ್ನು ನಿರ್ಣಯಿಸುವ ಹಕ್ಕನ್ನು ಹೊಂದಿದ್ದಾರೆ.
  4. ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವ ಸಾಮರ್ಥ್ಯವಾಗಿದೆ
  5. ಕ್ವೀರ್ ಸಮುದಾಯಕ್ಕೆ ಯಾವುದೇ ಸೇವೆ, ಸವಲತ್ತು ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ

ಇದನ್ನೂ ಓದಿ: ಸಲಿಂಗ ವಿವಾಹ: ಜೀವನ ಸಂಗಾತಿ ಆಯ್ಕೆ ಜೀವನದ ಅವಿಭಾಜ್ಯ ಅಂಗ; ಸುಪ್ರೀಂಕೋರ್ಟ್‌ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...