Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

- Advertisement -
- Advertisement -

ಇಸ್ರೇಲ್-ಪ್ಯಾಲೆಸ್ತೀನ್‌ ಸಂಘರ್ಷದ ಬಗ್ಗೆ ಹಲವಾರು ದೇಶಗಳು ಮಾನವೀಯ ಆಧಾರದ ಮೇಲೆ ಕಳವಳ ವ್ಯಕ್ತಪಡಿಸುವುದರ ಜೊತೆಗೆ ಇಸ್ರೇಲ್‌ ಜೊತೆಗಿನ ತಮ್ಮ ರಾಜತಾಂತ್ರಿ ಸಂಬಂಧವನ್ನು ಕಡಿತಗೊಳಿಸಲು ಮುಂದಾಗಿದೆ.

ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್, ಜರ್ಮನಿ ಯುಕೆ ಮತ್ತು ಭಾರತದಂತಹ ಪ್ರಭಾವಶಾಲಿ ರಾಷ್ಟ್ರಗಳು ಇಸ್ರೇಲ್‌ನೊಂದಿಗೆ ನಿಂತಿದೆ ಮತ್ತು ಈ ದೇಶಗಳು ಹಮಾಸ್‌ನ ದಾಳಿಯನ್ನು ಭಯೋತ್ಪಾದನಾ ದಾಳಿ ಎಂದು ಕರೆದು ಇಸ್ರೇಲ್‌ ದಾಳಿಯನ್ನು ಬೆಂಬಲಿಸಿದೆ.

ಆದರೆ ಯುಎನ್‌ ಮತ್ತು ಅಮ್ನೆಸ್ಟಿ ಇಂಟರ್‌ನ್ಯಾಶನಲ್, UNRWA (ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ), OHCHR (ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ) ಇಸ್ರೇಲ್‌ನಿಂದ ನಡೆದ ನರಮೇದ ಮತ್ತು ನಾಗರಿಕರ ಮೇಲಿನ ದಾಳಿ ಮತ್ತು ಮಾನವೀಯ ನೆರವಿನ ತಡೆ ಬಗ್ಗೆ ಗಮನಿಸಿದೆ.

ಬೊಲಿವಿಯಾವು ಇಸ್ರೇಲ್‌ನಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ಮುಚ್ಚಿದ ಮೊದಲ ದೇಶವಾಗಿದ್ದು,  ಅ.31ರಂದು ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸುವುದಾಗಿ ಸಂದೇಶವನ್ನು ಕಳುಹಿಸಿದೆ.

ಗಾಝಾ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್‌ ಮಿಲಿಟರಿ ಆಕ್ರಮಣವನ್ನು ಖಂಡಿಸಿ ಬೊಲಿವಿಯಾ ಇಸ್ರೇಲ್‌ ಜೊತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿಯಲು ನಿರ್ಧರಿಸಿದೆ ಎಂದು ಉಪ ವಿದೇಶಾಂಗ ಸಚಿವ ಫ್ರೆಡ್ಡಿ ಮಾಮಾನಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಬೊಲಿವಿಯಾ ಸಚಿವೆ ಮಾರಿಯಾ ನೆಲಾ ಪ್ರದಾ ಅವರು, ಗಾಝಾಕ್ಕೆ ಮಾನವೀಯ ನೆರವು ಕಳುಹಿಸುವುದಾಗಿ ಘೋಷಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇದುವರೆಗೆ ಸಾವಿರಾರು ನಾಗರಿಕರ ಸಾವುಗಳು ಮತ್ತು ಪ್ಯಾಲೆಸ್ತೀನ್ ಜನರ ಬಲವಂತದ ಸ್ಥಳಾಂತರಕ್ಕೆ ಕಾರಣವಾದ ದಾಳಿಗಳನ್ನು ಕೊನೆಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ನೆರೆಯ ಕೊಲಂಬಿಯಾ ಮತ್ತು ಚಿಲಿ ಕೂಡ ಗಾಜಾದಲ್ಲಿ ನಾಗರಿಕರ ಸಾವುಗಳನ್ನು ಖಂಡಿಸಿದೆ ಮತ್ತು ಕದನ ವಿರಾಮಕ್ಕೆ ಕರೆ ನೀಡಿ ತಮ್ಮ ರಾಯಭಾರಿಗಳನ್ನು ಇಸ್ರೇಲ್‌ನಿಂದ ವಾಪಾಸ್ಸು ಕರೆಸಿಕೊಂಡಿದೆ. ಲ್ಯಾಟಿನ್ ಅಮೆರಿಕದ ಎಡ-ಒಲವುಳ್ಳ ದೇಶಗಳು ಪ್ಯಾಲೆಸ್ತೀನ್ ಬಗ್ಗೆ ಸಹಾನುಭೂತಿ ಹೊಂದಿದೆ.

ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಸಾಮಾಜಿಕ ಮಾಧ್ಯಮ ಸೈಟ್ X ನಲ್ಲಿ ಬರೆಯುತ್ತಾ, ಇಸ್ರೇಲ್ ಅಂತರಾಷ್ಟ್ರೀಯ ಮಾನವೀಯ ಕಾನೂನಿನ ಉಲ್ಲಂಘನೆ ಮಾಡಿದೆ. ಗಾಝಾದ ಜನರಿಗೆ ಸಾಮೂಹಿಕ ಶಿಕ್ಷೆ ನೀಡಲಾಗುತ್ತಿದೆ. ಇದರಿಂದಾಗಿ ತಮ್ಮ ರಾಯಭಾರಿ ಜಾರ್ಜ್ ಕಾರ್ವಾಜಾಲ್ ಅವರನ್ನು ಇಸ್ರೇಲ್‌ನಿಂದ ದೇಶಕ್ಕೆ ವಾಪಾಸ್ಸು ಕರೆಸಿಕೊಳ್ಳುವುದಾಗಿ ಘೋಷಿಸಿದ್ದಾರೆ.

ಜೋರ್ಡಾನ್ ದೇಶವು ಕೂಡ ಇದೇ ರೀತಿಯ ನಿಲುವನ್ನು ಹೊಂದಿದೆ.  ಜೋರ್ಡನ್‌ ಈ ಮೊದಲು ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಗಾಝಾ ಕುರಿತು ನಿರ್ಣಯವನ್ನು ಮಂಡಿಸಿತ್ತು.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಇಸ್ರೇಲ್‌ನಲ್ಲಿರುವ ಕೊಲಂಬಿಯಾದ ರಾಯಭಾರಿಯನ್ನು ಮರಳಿ ಕರೆದಿದ್ದಾರೆ. ಅವರು ಗಾಝಾದಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರು ಇಸ್ರೇಲ್‌ ದಾಳಿಯನ್ನು ಪ್ಯಾಲೆಸ್ತೀನ್ ಜನರ ಹತ್ಯಾಕಾಂಡ ಎಂದು ಕರೆದಿದ್ದಾರೆ.

ಇಸ್ರೇಲ್‌ ಮಿಲಿಟರಿ ಪಡೆಗಳು ಗಾಝಾ ಮೇಲೆ ನಡೆಸಿದ ದಾಳಿಯನ್ನು ಕೊಲಂಬಿಯಾ ಖಂಡಿಸಿದೆ ಮತ್ತು ಕದನ ವಿರಾಮದ ತುರ್ತು ಮತ್ತು ಇಸ್ರೇಲ್‌ನ ಭದ್ರತಾ ಪಡೆಗಳು ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಪಾಲಿಸಬೇಕಾದ ಬಾಧ್ಯತೆಯನ್ನು ಪುನರುಚ್ಚರಿಸಿದೆ.

ಇದನ್ನು ಓದಿ: ಕೇರಳ: ಸಿಎಂ ಪಿಣರಾಯ್‌ ವಿಜಯನ್‌ಗೆ ಬೆದರಿಕೆ ಕರೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...