Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

- Advertisement -
- Advertisement -

ಇಸ್ರೇಲ್-ಪ್ಯಾಲೆಸ್ತೀನ್‌ ಸಂಘರ್ಷದ ಬಗ್ಗೆ ಹಲವಾರು ದೇಶಗಳು ಮಾನವೀಯ ಆಧಾರದ ಮೇಲೆ ಕಳವಳ ವ್ಯಕ್ತಪಡಿಸುವುದರ ಜೊತೆಗೆ ಇಸ್ರೇಲ್‌ ಜೊತೆಗಿನ ತಮ್ಮ ರಾಜತಾಂತ್ರಿ ಸಂಬಂಧವನ್ನು ಕಡಿತಗೊಳಿಸಲು ಮುಂದಾಗಿದೆ.

ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್, ಜರ್ಮನಿ ಯುಕೆ ಮತ್ತು ಭಾರತದಂತಹ ಪ್ರಭಾವಶಾಲಿ ರಾಷ್ಟ್ರಗಳು ಇಸ್ರೇಲ್‌ನೊಂದಿಗೆ ನಿಂತಿದೆ ಮತ್ತು ಈ ದೇಶಗಳು ಹಮಾಸ್‌ನ ದಾಳಿಯನ್ನು ಭಯೋತ್ಪಾದನಾ ದಾಳಿ ಎಂದು ಕರೆದು ಇಸ್ರೇಲ್‌ ದಾಳಿಯನ್ನು ಬೆಂಬಲಿಸಿದೆ.

ಆದರೆ ಯುಎನ್‌ ಮತ್ತು ಅಮ್ನೆಸ್ಟಿ ಇಂಟರ್‌ನ್ಯಾಶನಲ್, UNRWA (ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ), OHCHR (ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ) ಇಸ್ರೇಲ್‌ನಿಂದ ನಡೆದ ನರಮೇದ ಮತ್ತು ನಾಗರಿಕರ ಮೇಲಿನ ದಾಳಿ ಮತ್ತು ಮಾನವೀಯ ನೆರವಿನ ತಡೆ ಬಗ್ಗೆ ಗಮನಿಸಿದೆ.

ಬೊಲಿವಿಯಾವು ಇಸ್ರೇಲ್‌ನಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ಮುಚ್ಚಿದ ಮೊದಲ ದೇಶವಾಗಿದ್ದು,  ಅ.31ರಂದು ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸುವುದಾಗಿ ಸಂದೇಶವನ್ನು ಕಳುಹಿಸಿದೆ.

ಗಾಝಾ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್‌ ಮಿಲಿಟರಿ ಆಕ್ರಮಣವನ್ನು ಖಂಡಿಸಿ ಬೊಲಿವಿಯಾ ಇಸ್ರೇಲ್‌ ಜೊತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಮುರಿಯಲು ನಿರ್ಧರಿಸಿದೆ ಎಂದು ಉಪ ವಿದೇಶಾಂಗ ಸಚಿವ ಫ್ರೆಡ್ಡಿ ಮಾಮಾನಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಬೊಲಿವಿಯಾ ಸಚಿವೆ ಮಾರಿಯಾ ನೆಲಾ ಪ್ರದಾ ಅವರು, ಗಾಝಾಕ್ಕೆ ಮಾನವೀಯ ನೆರವು ಕಳುಹಿಸುವುದಾಗಿ ಘೋಷಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇದುವರೆಗೆ ಸಾವಿರಾರು ನಾಗರಿಕರ ಸಾವುಗಳು ಮತ್ತು ಪ್ಯಾಲೆಸ್ತೀನ್ ಜನರ ಬಲವಂತದ ಸ್ಥಳಾಂತರಕ್ಕೆ ಕಾರಣವಾದ ದಾಳಿಗಳನ್ನು ಕೊನೆಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ನೆರೆಯ ಕೊಲಂಬಿಯಾ ಮತ್ತು ಚಿಲಿ ಕೂಡ ಗಾಜಾದಲ್ಲಿ ನಾಗರಿಕರ ಸಾವುಗಳನ್ನು ಖಂಡಿಸಿದೆ ಮತ್ತು ಕದನ ವಿರಾಮಕ್ಕೆ ಕರೆ ನೀಡಿ ತಮ್ಮ ರಾಯಭಾರಿಗಳನ್ನು ಇಸ್ರೇಲ್‌ನಿಂದ ವಾಪಾಸ್ಸು ಕರೆಸಿಕೊಂಡಿದೆ. ಲ್ಯಾಟಿನ್ ಅಮೆರಿಕದ ಎಡ-ಒಲವುಳ್ಳ ದೇಶಗಳು ಪ್ಯಾಲೆಸ್ತೀನ್ ಬಗ್ಗೆ ಸಹಾನುಭೂತಿ ಹೊಂದಿದೆ.

ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಸಾಮಾಜಿಕ ಮಾಧ್ಯಮ ಸೈಟ್ X ನಲ್ಲಿ ಬರೆಯುತ್ತಾ, ಇಸ್ರೇಲ್ ಅಂತರಾಷ್ಟ್ರೀಯ ಮಾನವೀಯ ಕಾನೂನಿನ ಉಲ್ಲಂಘನೆ ಮಾಡಿದೆ. ಗಾಝಾದ ಜನರಿಗೆ ಸಾಮೂಹಿಕ ಶಿಕ್ಷೆ ನೀಡಲಾಗುತ್ತಿದೆ. ಇದರಿಂದಾಗಿ ತಮ್ಮ ರಾಯಭಾರಿ ಜಾರ್ಜ್ ಕಾರ್ವಾಜಾಲ್ ಅವರನ್ನು ಇಸ್ರೇಲ್‌ನಿಂದ ದೇಶಕ್ಕೆ ವಾಪಾಸ್ಸು ಕರೆಸಿಕೊಳ್ಳುವುದಾಗಿ ಘೋಷಿಸಿದ್ದಾರೆ.

ಜೋರ್ಡಾನ್ ದೇಶವು ಕೂಡ ಇದೇ ರೀತಿಯ ನಿಲುವನ್ನು ಹೊಂದಿದೆ.  ಜೋರ್ಡನ್‌ ಈ ಮೊದಲು ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಗಾಝಾ ಕುರಿತು ನಿರ್ಣಯವನ್ನು ಮಂಡಿಸಿತ್ತು.

ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಇಸ್ರೇಲ್‌ನಲ್ಲಿರುವ ಕೊಲಂಬಿಯಾದ ರಾಯಭಾರಿಯನ್ನು ಮರಳಿ ಕರೆದಿದ್ದಾರೆ. ಅವರು ಗಾಝಾದಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರು ಇಸ್ರೇಲ್‌ ದಾಳಿಯನ್ನು ಪ್ಯಾಲೆಸ್ತೀನ್ ಜನರ ಹತ್ಯಾಕಾಂಡ ಎಂದು ಕರೆದಿದ್ದಾರೆ.

ಇಸ್ರೇಲ್‌ ಮಿಲಿಟರಿ ಪಡೆಗಳು ಗಾಝಾ ಮೇಲೆ ನಡೆಸಿದ ದಾಳಿಯನ್ನು ಕೊಲಂಬಿಯಾ ಖಂಡಿಸಿದೆ ಮತ್ತು ಕದನ ವಿರಾಮದ ತುರ್ತು ಮತ್ತು ಇಸ್ರೇಲ್‌ನ ಭದ್ರತಾ ಪಡೆಗಳು ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಪಾಲಿಸಬೇಕಾದ ಬಾಧ್ಯತೆಯನ್ನು ಪುನರುಚ್ಚರಿಸಿದೆ.

ಇದನ್ನು ಓದಿ: ಕೇರಳ: ಸಿಎಂ ಪಿಣರಾಯ್‌ ವಿಜಯನ್‌ಗೆ ಬೆದರಿಕೆ ಕರೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...