Homeಮುಖಪುಟಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಕಳೆದ ಎರಡು ವರ್ಷಗಳಲ್ಲೇ ಅತ್ಯಧಿಕ: ವರದಿ

ಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಕಳೆದ ಎರಡು ವರ್ಷಗಳಲ್ಲೇ ಅತ್ಯಧಿಕ: ವರದಿ

- Advertisement -
- Advertisement -

ಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಎರಡು ವರ್ಷಗಳಲ್ಲೇ ಗರಿಷ್ಠ 10.09%ಕ್ಕೆ ಏರಿಕೆಯಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಡೇಟಾ ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಅಕ್ಟೋಬರ್‌ನಲ್ಲಿ ನಿರುದ್ಯೋಗದ ದರವು 7.09% ರಷ್ಟಿತ್ತು. ಹೊಸ ಅಂಕಿಅಂಶವು ಸೆಪ್ಟೆಂಬರ್‌ಗೆ ಹೋಲಿಕೆ ಮಾಡಿದರೆ ನಿರುದ್ಯೋಗದಲ್ಲಿ ಸುಮಾರು ಮೂರು ಶೇಕಡಾವಾರು ಹೆಚ್ಚಳವನ್ನು ಸೂಚಿಸುತ್ತದೆ. ಬ್ಲೂಮ್‌ಬರ್ಗ್ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗವು 6.2% ರಿಂದ 10.82%ಕ್ಕೆ ಏರಿಕೆಯಾಗಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, 2022-2023ರ ನಿರುದ್ಯೋಗ ದರವು 3.2% ರಷ್ಟಿದೆ. ಆದರೆ ಆರ್ಥಿಕ ತಜ್ಞರು ಉತ್ತಮ ಮೌಲ್ಯಮಾಪನಕ್ಕಾಗಿ CMIE ಡೇಟಾವನ್ನು ಅವಲಂಬಿಸಿದ್ದಾರೆ. ಏಕೆಂದರೆ ಅದರ ಅಂಕಿಅಂಶಗಳು ಮಾಸಿಕ ಸಮೀಕ್ಷೆಗಳನ್ನು ಆಧರಿಸಿರುತ್ತವೆ. ಇದು ಸರ್ಕಾರಿ ದತ್ತಾಂಶಕ್ಕೆ ವಿರುದ್ಧವಾಗಿದೆ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ಈ ವರ್ಷ ಭಾರತದ ಆರ್ಥಿಕತೆಯು 6% ದಿಂದ 6.5%ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಭಾರತದಲ್ಲಿ ಜನಸಂಖ್ಯೆಯು ಹೆಚ್ಚುತ್ತಿದೆ ಮತ್ತು ಏಪ್ರಿಲ್‌ನಲ್ಲಿ ಭಾರತವು ಚೀನಾವನ್ನು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದ ಸ್ಥಾನದಿಂದ ಹಿಂದಿಕ್ಕಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಬೆಳವಣಿಗೆಯ ಹೊರತಾಗಿಯೂ, ಕಳೆದ ಐದು ವರ್ಷಗಳಿಂದ ಭಾರತದ ಉದ್ಯೋಗಿಗಳ ಸಂಖ್ಯೆಯು  ನಿಶ್ಚಲವಾಗಿದೆ ಎಂದು CMIE ಮುಖ್ಯ ಕಾರ್ಯನಿರ್ವಾಹಕ ಮಹೇಶ್ ವ್ಯಾಸ್ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ ಸುಮಾರು 10 ಮಿಲಿಯನ್ ಭಾರತೀಯರು ಕೆಲಸ ಹುಡುಕುವ ಭರವಸೆಯಲ್ಲಿ ಉದ್ಯೋಗದ ಮಾರುಕಟ್ಟೆಗೆ  ಪ್ರವೇಶಿಸಿದ್ದಾರೆ ಎಂದು ಬ್ಲೂಮ್‌ಬರ್ಗ್ CMIE ಡೇಟಾವನ್ನು ಉಲ್ಲೇಖಿಸಿದೆ.

ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟಿ ನಡೆಸಿದ ಸಮೀಕ್ಷೆಯ ಪ್ರಕಾರ, ಈ ವರ್ಷದ ಆರಂಭದಲ್ಲಿ 15 ರಿಂದ 34 ವರ್ಷ ವಯಸ್ಸಿನ 36% ಭಾರತೀಯರು ನಿರುದ್ಯೋಗ ದೇಶ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದು ಭಾವಿಸಿದ್ದಾರೆ. 2016ರಲ್ಲಿ ನಡೆಸಿದ ಸಮೀಕ್ಷೆಗೆ ಹೋಲಿಸಿದರೆ, ನಿರುದ್ಯೋಗವನ್ನು ಅತಿದೊಡ್ಡ ಸಮಸ್ಯೆ ಎಂದು ಹೇಳುವ ಭಾರತೀಯರ ಪ್ರಮಾಣವು 18 ಶೇಕಡಾ ಹೆಚ್ಚಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 40% ದಷ್ಟು ವಿದ್ಯಾವಂತರು ಅಂದರೆ ಪದವೀಧರರು ಮತ್ತು ಅದಕ್ಕಿಂತ ಮೇಲ್ಪಟ್ಟವರು  ನಿರುದ್ಯೋಗವನ್ನು ದೊಡ್ಡ ಸವಾಲು ಎಂದು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...