Homeಮುಖಪುಟಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಕಳೆದ ಎರಡು ವರ್ಷಗಳಲ್ಲೇ ಅತ್ಯಧಿಕ: ವರದಿ

ಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಕಳೆದ ಎರಡು ವರ್ಷಗಳಲ್ಲೇ ಅತ್ಯಧಿಕ: ವರದಿ

- Advertisement -
- Advertisement -

ಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಎರಡು ವರ್ಷಗಳಲ್ಲೇ ಗರಿಷ್ಠ 10.09%ಕ್ಕೆ ಏರಿಕೆಯಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಡೇಟಾ ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಅಕ್ಟೋಬರ್‌ನಲ್ಲಿ ನಿರುದ್ಯೋಗದ ದರವು 7.09% ರಷ್ಟಿತ್ತು. ಹೊಸ ಅಂಕಿಅಂಶವು ಸೆಪ್ಟೆಂಬರ್‌ಗೆ ಹೋಲಿಕೆ ಮಾಡಿದರೆ ನಿರುದ್ಯೋಗದಲ್ಲಿ ಸುಮಾರು ಮೂರು ಶೇಕಡಾವಾರು ಹೆಚ್ಚಳವನ್ನು ಸೂಚಿಸುತ್ತದೆ. ಬ್ಲೂಮ್‌ಬರ್ಗ್ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗವು 6.2% ರಿಂದ 10.82%ಕ್ಕೆ ಏರಿಕೆಯಾಗಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, 2022-2023ರ ನಿರುದ್ಯೋಗ ದರವು 3.2% ರಷ್ಟಿದೆ. ಆದರೆ ಆರ್ಥಿಕ ತಜ್ಞರು ಉತ್ತಮ ಮೌಲ್ಯಮಾಪನಕ್ಕಾಗಿ CMIE ಡೇಟಾವನ್ನು ಅವಲಂಬಿಸಿದ್ದಾರೆ. ಏಕೆಂದರೆ ಅದರ ಅಂಕಿಅಂಶಗಳು ಮಾಸಿಕ ಸಮೀಕ್ಷೆಗಳನ್ನು ಆಧರಿಸಿರುತ್ತವೆ. ಇದು ಸರ್ಕಾರಿ ದತ್ತಾಂಶಕ್ಕೆ ವಿರುದ್ಧವಾಗಿದೆ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ಈ ವರ್ಷ ಭಾರತದ ಆರ್ಥಿಕತೆಯು 6% ದಿಂದ 6.5%ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಭಾರತದಲ್ಲಿ ಜನಸಂಖ್ಯೆಯು ಹೆಚ್ಚುತ್ತಿದೆ ಮತ್ತು ಏಪ್ರಿಲ್‌ನಲ್ಲಿ ಭಾರತವು ಚೀನಾವನ್ನು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದ ಸ್ಥಾನದಿಂದ ಹಿಂದಿಕ್ಕಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಬೆಳವಣಿಗೆಯ ಹೊರತಾಗಿಯೂ, ಕಳೆದ ಐದು ವರ್ಷಗಳಿಂದ ಭಾರತದ ಉದ್ಯೋಗಿಗಳ ಸಂಖ್ಯೆಯು  ನಿಶ್ಚಲವಾಗಿದೆ ಎಂದು CMIE ಮುಖ್ಯ ಕಾರ್ಯನಿರ್ವಾಹಕ ಮಹೇಶ್ ವ್ಯಾಸ್ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ ಸುಮಾರು 10 ಮಿಲಿಯನ್ ಭಾರತೀಯರು ಕೆಲಸ ಹುಡುಕುವ ಭರವಸೆಯಲ್ಲಿ ಉದ್ಯೋಗದ ಮಾರುಕಟ್ಟೆಗೆ  ಪ್ರವೇಶಿಸಿದ್ದಾರೆ ಎಂದು ಬ್ಲೂಮ್‌ಬರ್ಗ್ CMIE ಡೇಟಾವನ್ನು ಉಲ್ಲೇಖಿಸಿದೆ.

ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟಿ ನಡೆಸಿದ ಸಮೀಕ್ಷೆಯ ಪ್ರಕಾರ, ಈ ವರ್ಷದ ಆರಂಭದಲ್ಲಿ 15 ರಿಂದ 34 ವರ್ಷ ವಯಸ್ಸಿನ 36% ಭಾರತೀಯರು ನಿರುದ್ಯೋಗ ದೇಶ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದು ಭಾವಿಸಿದ್ದಾರೆ. 2016ರಲ್ಲಿ ನಡೆಸಿದ ಸಮೀಕ್ಷೆಗೆ ಹೋಲಿಸಿದರೆ, ನಿರುದ್ಯೋಗವನ್ನು ಅತಿದೊಡ್ಡ ಸಮಸ್ಯೆ ಎಂದು ಹೇಳುವ ಭಾರತೀಯರ ಪ್ರಮಾಣವು 18 ಶೇಕಡಾ ಹೆಚ್ಚಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 40% ದಷ್ಟು ವಿದ್ಯಾವಂತರು ಅಂದರೆ ಪದವೀಧರರು ಮತ್ತು ಅದಕ್ಕಿಂತ ಮೇಲ್ಪಟ್ಟವರು  ನಿರುದ್ಯೋಗವನ್ನು ದೊಡ್ಡ ಸವಾಲು ಎಂದು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...