Homeಅಂತರಾಷ್ಟ್ರೀಯಇಸ್ರೇಲ್‌-ಪ್ಯಾಲೆಸ್ತೀನ್‌ ಸಂಘರ್ಷ 'ಜಾಗತಿಕ ಬಿಕ್ಕಟ್ಟು': ಮಾರ್ಟಿನ್ ಗ್ರಿಫಿತ್ಸ್

ಇಸ್ರೇಲ್‌-ಪ್ಯಾಲೆಸ್ತೀನ್‌ ಸಂಘರ್ಷ ‘ಜಾಗತಿಕ ಬಿಕ್ಕಟ್ಟು’: ಮಾರ್ಟಿನ್ ಗ್ರಿಫಿತ್ಸ್

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ಗೆ ಎರಡು ದಿನಗಳ ಪ್ರವಾಸದ ಬಳಿಕ ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳು ಮತ್ತು ತುರ್ತು ಪರಿಹಾರ ಸಂಯೋಜಕರಾದ ಮಾರ್ಟಿನ್ ಗ್ರಿಫಿತ್ಸ್ ಅವರು ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದು, ಪ್ಯಾಲೆಸ್ತೀನ್‌ ಮೇಲಿನ ಇಸ್ರೇಲ್‌ ದಾಳಿಯನ್ನು ಜಾಗತಿಕ ಬಿಕ್ಕಟ್ಟು ಎಂದು ಕರೆದಿದ್ದು, ಇದು ಮುಂದುವರಿಯಬಾರದು ಎಂದು ಹೇಳಿದ್ದಾರೆ.

ಯದ್ಧ ವಿರಾಮದ ಅಗತ್ಯವಿದೆ. ಇದು ಮಾತ್ರ ಗಾಝಾಕ್ಕೆ ಪರಿಹಾರ ವಸ್ತುಗಳನ್ನು ತಲುಪಿಸಲು ಇರುವ ಆಯ್ಕೆಯಾಗಿದೆ. ಇಸ್ರೇಲ್‌ ಗಾಝಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ನಡಸಿದ ದಾಳಿಯಲ್ಲಿ ಹಲವಾರು ನಾಗರಿಕರು ಮೃತಪಟ್ಟಿದ್ದಾರೆ. ಗಾಜಾದ ಜನರಿಗೆ ಇದು ಇತ್ತೀಚಿನ ದೌರ್ಜನ್ಯವಷ್ಠೆ, ಅಕ್ಟೋಬರ್ 7 ಮತ್ತು ಅದರ ನಂತರದ ಪರಿಣಾಮಗಳು ಲಕ್ಷಾಂತರ ಜನರ ಜೀವನದಲ್ಲಿ ಅಳಿಸಲಾಗದ ಗಾಯಗಳನ್ನು ಮಾಡಿದೆ ಎಂದು ಮಾರ್ಟಿನ್ ಗ್ರಿಫಿತ್ಸ್ ಹೇಳಿದ್ದಾರೆ.

ಗಾಝಾದಲ್ಲಿ, ಮಹಿಳೆಯರು, ಮಕ್ಕಳು ಮತ್ತು ಪುರುಷರು ಹಸಿವಿನಿಂದ ಬಳಲುತ್ತಿದ್ದಾರೆ. ಆಘಾತಕ್ಕೊಳಗಾಗಿದ್ದಾರೆ ಮತ್ತು ಬಾಂಬ್ ದಾಳಿಯಿಂದ ಸಾಯುತ್ತಿದ್ದಾರೆ. ಅವರು ಮಾನವೀಯತೆಯ ಮೇಲಿನ ಎಲ್ಲಾ ನಂಬಿಕೆ ಮತ್ತು ಭವಿಷ್ಯದ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವರಲ್ಲಿ ಹತಾಶೆ ಎದ್ದುಕಾಣುತ್ತಿದೆ ಎಂದು ಹೇಳಿದ್ದಾರೆ.

ಪಶ್ಚಿಮ ದಂಡೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಹಿಂಸಾಚಾರ ಮತ್ತು ಚೆಕ್‌ಪೋಸ್ಟ್‌ಗಳನ್ನು ಮುಚ್ಚುವುದರಿಂದ ಜನರು ಆಹಾರ, ಉದ್ಯೋಗಗಳು, ಆರೋಗ್ಯ ರಕ್ಷಣೆ ಮತ್ತು ಇತರ ಅಗತ್ಯ ಸೇವೆಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದು ಮುಂದುವರಿಯಲು ಸಾಧ್ಯವಿಲ್ಲ. ನಮಗೆ ಒಂದು ಹಂತದ ಬದಲಾವಣೆಯ ಅಗತ್ಯವಿದೆ. ಒತ್ತೆಯಾಳುಗಳನ್ನು ತಕ್ಷಣವೇ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕಾಗಿದೆ. ನಾವು ಬದುಕುಳಿಯಲು ಅಗತ್ಯವಾದವುಗಳನ್ನು ವಿಶೇಷವಾಗಿ ನೀರು, ಆಹಾರ, ಔಷಧ ಮತ್ತು ಇಂಧನ ತಕ್ಷಣವೇ ಒದಗಿಸಬೇಕು ಎಂದು ಹೇಳಿದ್ದಾರೆ.

ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ ದಾಳಿಯಲ್ಲಿ 1,400 ಜನರ ಹತ್ಯೆಯಾಗಿದೆ. 200 ಮಂದಿಯನ್ನು ಹಮಾಸ್ ಒತ್ತೆಯಾಳಾಗಿ ಇಟ್ಟುಕೊಂಡಿದೆ. ಬಳಿಕ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಯಲ್ಲಿ ಮಹಿಳೆಯರು ಮಕ್ಕಳು ಸೇರಿ 8000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...