Homeಕರ್ನಾಟಕಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

- Advertisement -
- Advertisement -

ಪದೇ ಪದೇ ನಾಲಿಗೆ ಹರಿಬಿಟ್ಟು ಅಶಾಂತಿ ಉಂಟು ಮಾಡುವ ಹಿಂದುತ್ವ ಮುಖಂಡ, ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್‌ ಕೆರೆಹಳ್ಳಿ ಬಂಧನವಾಗಿದೆ. ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ನಿಂದಿಸಿದ್ದ ಪ್ರಕರಣದಲ್ಲಿ ಇದೀಗ ಪುನೀತ್ ಜೈಲು ಸೇರಿದ್ದಾನೆ.

ಪುನೀತ್ ಕೆರೆಹಳ್ಳಿ ಈಗಾಗಲೇ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. 2013ರಲ್ಲಿ ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿ ಬಿದ್ದಿದ್ದ. ಗೋ ರಕ್ಷಣೆ ಹೆಸರಲ್ಲಿ ಇದ್ರೀಸ್ ಪಾಷಾ ಎಂಬ ವ್ಯಕ್ತಿಯನ್ನು ಕೊಂದ ಆರೋಪವೂ ಪುನೀತ್‌ ಕೆರೆಹಳ್ಳಿ ಮತ್ತು ಆತನ ಗ್ಯಾಂಗ್ ಮೇಲೆ ಇದೆ. ವಿಧಾನಸೌಧಕ್ಕೆ ಕಲ್ಲು ಹೊಡೆಯುವ ಮತ್ತು ಬಸ್ಸಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಪ್ರಕರಣ ದಾಖಲಾಗಿತ್ತು. ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದನು. ಈ ವಿಚಾರವಾಗಿಯೂ ದೂರು ದಾಖಲಾಗಿದೆ.

ಇಂತಹ ಅನೇಕ ಗಂಭೀರ ಪ್ರಕರಣಗಳಲ್ಲಿ ಸಿಲುಕಿರುವ ಹಿಂದುತ್ವ ಮುಖಂಡ ಪುನೀತ್ ಕೆರೆಹಳ್ಳಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲವಾಗಿ ಬರೆಯುತ್ತಾ ಕನ್ನಡಪರ ಹೋರಾಟಗಾರ, ದಲಿತ ಮುಖಂಡ ಹರೀಶ್ ಭೈರಪ್ಪ ಅವರ ಕುರಿತು ಕೀಳುಮಟ್ಟದ ಭಾಷೆಯಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದರು. ಈ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಶುಕ್ರವಾರ ಪುನೀತ್ ಬಂಧನವಾಗಿದೆ.

ದೂರಿನಲ್ಲಿ ಏನಿದೆ?

”ನಾನು ದಲಿತನಾಗಿರುವ ಕಾರಣ ಪುನೀತ್ ಕೆರೆಹಳ್ಳಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ” ಎಂದು ಭೈರಪ್ಪ ಹರೀಶ್ ಕುಮಾರ್ ಅವರು ದೂರಿನಲ್ಲಿ ಹೇಳಿದ್ದಾರೆ.

”ನಾನೊಬ್ಬ ಕನ್ನಡಪರ ಹೋರಾಟಗಾರನಾಗಿದ್ದು ಇತ್ತೀಚೆಗೆ ಇದೀಸ್ ಪಾಷಾ ಕೊಲೆ ಆರೋಪದಲ್ಲಿ ಜೈಲು ಶಿಕ್ಷೆಯಿಂದ ಬಿಡುಗಡೆಗೊಂಡ ಬಳಿಕವೂ ಸಮಾಜದ ಸ್ವಾಸ್ಥ್ಯ ಕದಡಲು ಯತ್ನಿಸುತ್ತಿದ್ದ ಪುನೀತ್ ಕೆರೆಹಳ್ಳಿಯ ಬಗ್ಗೆ ಜಾಗೃತರಾಗಿರುವಂತೆ ಸಾಮಾಜಿಕ ಕಳಕಳಿಯಿಂದ ಮಾಧ್ಯಮ ವರದಿಯನ್ನು ಫೇಸ್ ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ದಿನಾಂಕ 17-10-2023 ರಂದು ಪುನೀತ್ ಕೆರೆಹಳ್ಳಿ, ನನ್ನ ಮತ್ತು ನನ್ನ ಪತ್ನಿ ಮಕ್ಕಳ ವಿರುದ್ಧ ನಿಂದನಾತ್ಮಕ ಮಾತುಗಳನ್ನಾಡಿದ್ದಾನೆ. ನನ್ನ ಪತ್ನಿ ,ಮಕ್ಕಳು ತಲೆ ಎತ್ತಿ ನಡೆಯಂದಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪುನೀತ್ ಬಂಧನದ ಬಳಿಕ ಮಾತನಾಡಿದ ಹರೀಶ್ ಭೈರಪ್ಪ ಅವರು, ”ಕೊನೆಗೂ ನನ್ನ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಎನ್ನುವ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ. ನನ್ನ ಹಾಗೂ ನನ್ನ ಕುಟುಂಬದ ಮೇಲೆ ವೈಯಕ್ತಿಕ ದಾಳಿಗೆ ಇಳಿದು ತನ್ನ ಹೀನ ಮನಸ್ಥಿತಿಯನ್ನು ಪ್ರದರ್ಶನ ಮಾಡಿದ, ಸಂಘ ಪರಿವಾರದ ಮುಖಂಡ ಎಂದು ಹೇಳಿಕೊಳ್ಳುವ ವಿಕೃತ ಮನಸ್ಸಿನ ಹಿಂದೂ ಮುಖವಾಡದ ಕೊಲೆ ಆರೋಪಿ ಹಾಗೂ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿ ಸಮಾಜಘಾತಕ ಪುನೀತ್ ಕೆರೆಹಳ್ಳಿಯನ್ನು ನೆನ್ನೆಯಿಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದರು. ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೇಳಿದರು. ಪೊಲೀಸರ ಬೇಡಿಕೆ ಪುರಸ್ಕರಿಸಿದ ನ್ಯಾಯಾಧೀಶರ ಪುನೀತ್ ಕೆರೆಹಳ್ಳಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

”ಇದು ಹೋರಾಟಗಾರರ ಕುಟುಂಬವನ್ನ ಟಾರ್ಗೆಟ್ ಮಾಡುವ ವಿಕೃತ ಮನಸ್ಸಿನ ಹಿಂದೂ ಹೋರಾಟಗಾರರಿಗೆ ಪಾಠವಾಗಬೇಕು. ನಾನು ಹೋರಾಟದ ಜೀವನದಲ್ಲಿ ಎಲ್ಲಾ ಅವಮಾನಗಳನ್ನು ಟೀಕೆಗಳನ್ನು ಅನುಭವಿಸಿದ್ದೇನೆ. ಇನ್ನು ಮುಂದೆಯೂ ಅನುಭವಿಸಲು ತಯಾರಿದ್ದೇನೆ. ಯಾಕೆಂದರೆ ಒಂದು ಸಿದ್ದಾಂತಕ್ಕೆ ಬದ್ಧನಾಗಿರುವ ನಾನು ಎಲ್ಲರಿಗೂ ಒಳ್ಳೆಯವನಾಗಲು ಸಾಧ್ಯವಿಲ್ಲ. ಬಲಪಂಥೀಯರು ನನ್ನನ್ನು ವಿರೋಧಿಸುತ್ತಾರೆ ಎಂದರೆ ನಾನು ಬಾಬಾ ಸಾಹೇಬರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇನೆ ಎಂದರ್ಥ” ಎಂದು ಹೇಳಿದ್ದಾರೆ.

”ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿಯ ಒಂದಷ್ಟು ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಒಂದಷ್ಟು ಮುಖಂಡರು ನನ್ನ ವಿರುದ್ಧ ಬರೆದಿರುವ ಆ ಅಸಹ್ಯಕರವಾದ ಭಾಷೆಯನ್ನು ಯಾರು ಬೆಂಬಲಿಸಿಲ್ಲ. ಈ ವಿಚಾರವಾಗಿ ಇವನ ಜೊತೆ ನಾವು ನಿಲ್ಲಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂಬ ಮಾಹಿತಿ ನನಗಿದೆ. ಈ ರೀತಿಯಾದ ಒಂದು ನೈತಿಕತೆಯ ತೀರ್ಮಾನ ತೆಗೆದುಕೊಂಡಿದ್ದರೆ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ” ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬಂಧನಕ್ಕೂ ಮುನ್ನ ಪುನೀತ್ ಕೆರೆಹಳ್ಳಿ ಬಂಧನಕ್ಕೂ ಮುನ್ನ ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಅದರಲ್ಲಿ ತನಗೆ ಈ ಬಾರಿ ಜಾಮೀನು ಬೇಡ, ನಾನು ಜೈಲಿನಲ್ಲಿಯೇ ಇರುತ್ತೇನೆ ಎಂದು ಹೇಳಿದ್ದ ಹೇಳಿಕೆ ಸಾಕಷ್ಟು ವೈರಲ್ ಆಗಿತ್ತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಪುನೀತ್ ಕೆರೆಹಳ್ಳಿ ಬಂಧನ ಸಾಧ್ಯತೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...