Homeಕರ್ನಾಟಕಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

- Advertisement -
- Advertisement -

ಪದೇ ಪದೇ ನಾಲಿಗೆ ಹರಿಬಿಟ್ಟು ಅಶಾಂತಿ ಉಂಟು ಮಾಡುವ ಹಿಂದುತ್ವ ಮುಖಂಡ, ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್‌ ಕೆರೆಹಳ್ಳಿ ಬಂಧನವಾಗಿದೆ. ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ನಿಂದಿಸಿದ್ದ ಪ್ರಕರಣದಲ್ಲಿ ಇದೀಗ ಪುನೀತ್ ಜೈಲು ಸೇರಿದ್ದಾನೆ.

ಪುನೀತ್ ಕೆರೆಹಳ್ಳಿ ಈಗಾಗಲೇ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. 2013ರಲ್ಲಿ ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿ ಬಿದ್ದಿದ್ದ. ಗೋ ರಕ್ಷಣೆ ಹೆಸರಲ್ಲಿ ಇದ್ರೀಸ್ ಪಾಷಾ ಎಂಬ ವ್ಯಕ್ತಿಯನ್ನು ಕೊಂದ ಆರೋಪವೂ ಪುನೀತ್‌ ಕೆರೆಹಳ್ಳಿ ಮತ್ತು ಆತನ ಗ್ಯಾಂಗ್ ಮೇಲೆ ಇದೆ. ವಿಧಾನಸೌಧಕ್ಕೆ ಕಲ್ಲು ಹೊಡೆಯುವ ಮತ್ತು ಬಸ್ಸಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಪ್ರಕರಣ ದಾಖಲಾಗಿತ್ತು. ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದನು. ಈ ವಿಚಾರವಾಗಿಯೂ ದೂರು ದಾಖಲಾಗಿದೆ.

ಇಂತಹ ಅನೇಕ ಗಂಭೀರ ಪ್ರಕರಣಗಳಲ್ಲಿ ಸಿಲುಕಿರುವ ಹಿಂದುತ್ವ ಮುಖಂಡ ಪುನೀತ್ ಕೆರೆಹಳ್ಳಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲವಾಗಿ ಬರೆಯುತ್ತಾ ಕನ್ನಡಪರ ಹೋರಾಟಗಾರ, ದಲಿತ ಮುಖಂಡ ಹರೀಶ್ ಭೈರಪ್ಪ ಅವರ ಕುರಿತು ಕೀಳುಮಟ್ಟದ ಭಾಷೆಯಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದರು. ಈ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಶುಕ್ರವಾರ ಪುನೀತ್ ಬಂಧನವಾಗಿದೆ.

ದೂರಿನಲ್ಲಿ ಏನಿದೆ?

”ನಾನು ದಲಿತನಾಗಿರುವ ಕಾರಣ ಪುನೀತ್ ಕೆರೆಹಳ್ಳಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ” ಎಂದು ಭೈರಪ್ಪ ಹರೀಶ್ ಕುಮಾರ್ ಅವರು ದೂರಿನಲ್ಲಿ ಹೇಳಿದ್ದಾರೆ.

”ನಾನೊಬ್ಬ ಕನ್ನಡಪರ ಹೋರಾಟಗಾರನಾಗಿದ್ದು ಇತ್ತೀಚೆಗೆ ಇದೀಸ್ ಪಾಷಾ ಕೊಲೆ ಆರೋಪದಲ್ಲಿ ಜೈಲು ಶಿಕ್ಷೆಯಿಂದ ಬಿಡುಗಡೆಗೊಂಡ ಬಳಿಕವೂ ಸಮಾಜದ ಸ್ವಾಸ್ಥ್ಯ ಕದಡಲು ಯತ್ನಿಸುತ್ತಿದ್ದ ಪುನೀತ್ ಕೆರೆಹಳ್ಳಿಯ ಬಗ್ಗೆ ಜಾಗೃತರಾಗಿರುವಂತೆ ಸಾಮಾಜಿಕ ಕಳಕಳಿಯಿಂದ ಮಾಧ್ಯಮ ವರದಿಯನ್ನು ಫೇಸ್ ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ದಿನಾಂಕ 17-10-2023 ರಂದು ಪುನೀತ್ ಕೆರೆಹಳ್ಳಿ, ನನ್ನ ಮತ್ತು ನನ್ನ ಪತ್ನಿ ಮಕ್ಕಳ ವಿರುದ್ಧ ನಿಂದನಾತ್ಮಕ ಮಾತುಗಳನ್ನಾಡಿದ್ದಾನೆ. ನನ್ನ ಪತ್ನಿ ,ಮಕ್ಕಳು ತಲೆ ಎತ್ತಿ ನಡೆಯಂದಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪುನೀತ್ ಬಂಧನದ ಬಳಿಕ ಮಾತನಾಡಿದ ಹರೀಶ್ ಭೈರಪ್ಪ ಅವರು, ”ಕೊನೆಗೂ ನನ್ನ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಎನ್ನುವ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ. ನನ್ನ ಹಾಗೂ ನನ್ನ ಕುಟುಂಬದ ಮೇಲೆ ವೈಯಕ್ತಿಕ ದಾಳಿಗೆ ಇಳಿದು ತನ್ನ ಹೀನ ಮನಸ್ಥಿತಿಯನ್ನು ಪ್ರದರ್ಶನ ಮಾಡಿದ, ಸಂಘ ಪರಿವಾರದ ಮುಖಂಡ ಎಂದು ಹೇಳಿಕೊಳ್ಳುವ ವಿಕೃತ ಮನಸ್ಸಿನ ಹಿಂದೂ ಮುಖವಾಡದ ಕೊಲೆ ಆರೋಪಿ ಹಾಗೂ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿ ಸಮಾಜಘಾತಕ ಪುನೀತ್ ಕೆರೆಹಳ್ಳಿಯನ್ನು ನೆನ್ನೆಯಿಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದರು. ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೇಳಿದರು. ಪೊಲೀಸರ ಬೇಡಿಕೆ ಪುರಸ್ಕರಿಸಿದ ನ್ಯಾಯಾಧೀಶರ ಪುನೀತ್ ಕೆರೆಹಳ್ಳಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

”ಇದು ಹೋರಾಟಗಾರರ ಕುಟುಂಬವನ್ನ ಟಾರ್ಗೆಟ್ ಮಾಡುವ ವಿಕೃತ ಮನಸ್ಸಿನ ಹಿಂದೂ ಹೋರಾಟಗಾರರಿಗೆ ಪಾಠವಾಗಬೇಕು. ನಾನು ಹೋರಾಟದ ಜೀವನದಲ್ಲಿ ಎಲ್ಲಾ ಅವಮಾನಗಳನ್ನು ಟೀಕೆಗಳನ್ನು ಅನುಭವಿಸಿದ್ದೇನೆ. ಇನ್ನು ಮುಂದೆಯೂ ಅನುಭವಿಸಲು ತಯಾರಿದ್ದೇನೆ. ಯಾಕೆಂದರೆ ಒಂದು ಸಿದ್ದಾಂತಕ್ಕೆ ಬದ್ಧನಾಗಿರುವ ನಾನು ಎಲ್ಲರಿಗೂ ಒಳ್ಳೆಯವನಾಗಲು ಸಾಧ್ಯವಿಲ್ಲ. ಬಲಪಂಥೀಯರು ನನ್ನನ್ನು ವಿರೋಧಿಸುತ್ತಾರೆ ಎಂದರೆ ನಾನು ಬಾಬಾ ಸಾಹೇಬರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇನೆ ಎಂದರ್ಥ” ಎಂದು ಹೇಳಿದ್ದಾರೆ.

”ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿಯ ಒಂದಷ್ಟು ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಒಂದಷ್ಟು ಮುಖಂಡರು ನನ್ನ ವಿರುದ್ಧ ಬರೆದಿರುವ ಆ ಅಸಹ್ಯಕರವಾದ ಭಾಷೆಯನ್ನು ಯಾರು ಬೆಂಬಲಿಸಿಲ್ಲ. ಈ ವಿಚಾರವಾಗಿ ಇವನ ಜೊತೆ ನಾವು ನಿಲ್ಲಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂಬ ಮಾಹಿತಿ ನನಗಿದೆ. ಈ ರೀತಿಯಾದ ಒಂದು ನೈತಿಕತೆಯ ತೀರ್ಮಾನ ತೆಗೆದುಕೊಂಡಿದ್ದರೆ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ” ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬಂಧನಕ್ಕೂ ಮುನ್ನ ಪುನೀತ್ ಕೆರೆಹಳ್ಳಿ ಬಂಧನಕ್ಕೂ ಮುನ್ನ ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಅದರಲ್ಲಿ ತನಗೆ ಈ ಬಾರಿ ಜಾಮೀನು ಬೇಡ, ನಾನು ಜೈಲಿನಲ್ಲಿಯೇ ಇರುತ್ತೇನೆ ಎಂದು ಹೇಳಿದ್ದ ಹೇಳಿಕೆ ಸಾಕಷ್ಟು ವೈರಲ್ ಆಗಿತ್ತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಪುನೀತ್ ಕೆರೆಹಳ್ಳಿ ಬಂಧನ ಸಾಧ್ಯತೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...