Homeಮುಖಪುಟಆಂಧ್ರಪ್ರದೇಶ: ಸಂಪುಟ ಸಭೆಯಲ್ಲಿ ಜಾತಿಗಣತಿಗೆ ಅನುಮೋದನೆ

ಆಂಧ್ರಪ್ರದೇಶ: ಸಂಪುಟ ಸಭೆಯಲ್ಲಿ ಜಾತಿಗಣತಿಗೆ ಅನುಮೋದನೆ

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಜಾತಿಗಣತಿ ನಡೆಸುವ ಪ್ರಸ್ತಾವನೆಗೆ ಆಂಧ್ರಪ್ರದೇಶದ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ನೀಡಲಾಗಿದೆ.

ಜಾತಿಗಣತಿ ಕುರಿತ ನಿರ್ಧಾರದ ಬಗ್ಗೆ ಸಚಿವ ಚೆಲುಬೋಯಿನ ಶ್ರೀನಿವಾಸ ವೇಣುಗೋಪಾಲ ಕೃಷ್ಣ ಅವರು ಮಾಹಿತಿಯನ್ನು ನೀಡಿದ್ದಾರೆ. ಜಾತಿಗಣತಿ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ವೈದ್ಯಕೀಯ ದತ್ತಾಂಶವನ್ನು ಲೆಕ್ಕಹಾಕುವ ಗುರಿಯನ್ನು ಹೊಂದಿದೆ. ಈ ಮೂಲಕ ಹಿಂದುಳಿದ ಸಮುದಾಯಗಳಿಗೆ ಭದ್ರತೆಯನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಮತ್ತು ಭಾರತದಾದ್ಯಂತ ಜಾತಿ ಗಣತಿಗೆ ಒತ್ತಾಯಿಸುತ್ತಿರುವ ಎಲ್ಲರ ಸಲಹೆಗಳನ್ನು ಪರಿಗಣಿಸಲು ಸರ್ಕಾರ ತೀರ್ಮಾನಿಸಿದೆ. ಜಿಲ್ಲಾಧಿಕಾರಿಗಳ ವ್ಯಾಪ್ತಿಯಲ್ಲಿ ವಿವಿಧ ಜಾತಿ ಸಂಘಗಳ ಅಭಿಪ್ರಾಯಗಳನ್ನು ಕೂಡ ಪರಿಗಣಿಸಲಾಗುವುದು. ಜಾತಿಗಣತಿ ಕೋರಿ ವಿವಿಧ ಜಾತಿ ಸಂಘಗಳಿಂದ ಮಾಹಿತಿ ಪಡೆಯಲು ಐದು ಸ್ಥಳಗಳಲ್ಲಿ ದುಂಡು ಮೇಜಿನ ಚರ್ಚೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ವೇಣುಗೋಪಾಲ ಕೃಷ್ಣ ಅವರು ಭಾರತದಲ್ಲಿ ಜಾತಿಗಣತಿಯು ಬಹಳ ಹಿಂದೆ ನಡೆಸಿರುವುದು ಎಂಬವುದನ್ನು  ಉಲ್ಲೇಖಿಸಿದ್ದು, ರಾಜ್ಯದಲ್ಲಿ ಜಾತಿಗಣತಿ ನಡೆಸುವ ಸಂಪುಟದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸಚಿವ ಸಂಪುಟದಲ್ಲಿ ಇದಲ್ಲದೆ 6,790 ಸರ್ಕಾರಿ ಪ್ರೌಢಶಾಲೆಗಳಲ್ಲಿ ಕೌಶಲ್ಯ ತಜ್ಞರ ನೇಮಕಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಪೋಲಾವರಂ ಯೋಜನೆಯ ಭಾಗವಾಗಿ ಪ್ರವಾಹಕ್ಕೆ ಒಳಗಾದ ಗ್ರಾಮಗಳ ಪುನರ್ವಸತಿ ಪ್ರಯತ್ನಗಳ ಭಾಗವಾಗಿ ಏಲೂರು ಜಿಲ್ಲೆಯ ಪೊಲಾವರಂ, ವೇಲೇರುಪಾಡು ಮತ್ತು ಕುಕುನೂರ್ ಮಂಡಲಗಳಲ್ಲಿ 12,984 ಕುಟುಂಬಗಳಿಗೆ ಉಚಿತ ಭೂ ಹಕ್ಕು ನೋಂದಣಿ ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೆಚ್ಚುವರಿಯಾಗಿ ರಾಜಮಹೇಂದ್ರವರಂ ಜಿಲ್ಲೆಯ ದೇವಿಪಟ್ಟಣಂ, ಕುನವರಂ ಮತ್ತು ವರ ರಾಮಚಂದ್ರಪುರಂ ಮಂಡಲಗಳಲ್ಲಿ 3,823 ಕುಟುಂಬಗಳಿಗೆ ಪರ್ಯಾಯ ಭೂಮಿ ಪತ್ರಗಳನ್ನು ನೀಡಲು ಸಂಪುಟದಲ್ಲಿ ನಿರ್ಧರಿಸಲಾಗಿದೆ.

ಅಕ್ಟೋಬರ್ 30ರಂದು ನಡೆದ ಹೂಡಿಕೆ ಕುರಿತ ಸಭೆಯ ಭಾಗವಾಗಿ ರಾಜ್ಯದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ. ಎರಡು ಆಹಾರ ಸಂಸ್ಕರಣಾ ಘಟಕಗಳಿಗೆ ವಿಶೇಷ ಪ್ಯಾಕೇಜ್ ನೀಡುವ SIPB ನಿರ್ಧಾರವನ್ನು ಅನುಮೋದಿಸಿದೆ. ರಸ್ತೆ ಮತ್ತು ಕಟ್ಟಡಗಳ ಇಲಾಖೆಯಲ್ಲಿ 467 ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇದನ್ನು ಓದಿ: ಇಸ್ರೇಲ್‌ ವೈಮಾನಿಕ ದಾಳಿಗೆ ‘ಪ್ಯಾಲೆಸ್ತೀನ್‌ ಟಿವಿ’ ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...