Homeಮುಖಪುಟಉಚಿತ ಪಡಿತರ ಯೋಜನೆ 5 ವರ್ಷಗಳವರೆಗೆ ವಿಸ್ತರಣೆ: ಆರ್ಥಿಕ ಸಂಕಷ್ಟ, ಅಸಮಾನತೆಗಳ ಸೂಚನೆ ಎಂದ ಕಾಂಗ್ರೆಸ್

ಉಚಿತ ಪಡಿತರ ಯೋಜನೆ 5 ವರ್ಷಗಳವರೆಗೆ ವಿಸ್ತರಣೆ: ಆರ್ಥಿಕ ಸಂಕಷ್ಟ, ಅಸಮಾನತೆಗಳ ಸೂಚನೆ ಎಂದ ಕಾಂಗ್ರೆಸ್

- Advertisement -
- Advertisement -

ಮುಂದಿನ 5 ವರ್ಷಗಳವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ 2013ರ ಅಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವುದನ್ನು ಕೇಂದ್ರ ಸರ್ಕಾರ ಮುಂದುವರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಕೊರೋನ ವೈರಸ್ ಸಾಂಕ್ರಾಮಿಕವು ಹರಡಿದ್ದಾಗ, 2020ರಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಮ್‌ಜಿಕೆಎವೈ)ಯನ್ನು ಜಾರಿಗೆ ತರಲಾಗಿತ್ತು. ಆ ಯೋಜನೆಯ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು ಸರಕಾರವು ಉಚಿತವಾಗಿ ನೀಡುತ್ತಿತ್ತು. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುತ್ತಿದ್ದ ಆಹಾರ ಧಾನ್ಯಗಳಿಗೆ ಹೆಚ್ಚುವರಿಯಾಗಿತ್ತು.

ಪಿಎಂ ಗರೀಬ್ ಕಲ್ಯಾಣ್ (ಪಿಎಂಜಿಕೆಎವೈ) ಯೋಜನೆಯು ಈ ವರ್ಷ ಡಿಸೆಂಬರ್‌ನಲ್ಲಿ ಕೊನೆಗೊಳ್ಳಬೇಕಿತ್ತು. ಶನಿವಾರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ದೇಶದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂದು ಖಚಿತಪಡಿಸಿಕೊಳ್ಳಲು ಅದನ್ನು ವಿಸ್ತರಿಸುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು. ನಾನು ಬಡತನವನ್ನು ನೋಡಿದ್ದೇನೆ. ನಾವು ಇನ್ನೂ ಐದು ವರ್ಷಗಳವರೆಗೆ ಯೋಜನೆಯನ್ನು ವಿಸ್ತರಿಸುತ್ತೇವೆ. ಇದು ಮೋದಿಯ ಸಂಕಲ್ಪ. ಇದು ಮೋದಿಯ ಗ್ಯಾರಂಟಿ. ಬಡವರಿಗೆ ಉಚಿತ ಪಡಿತರ ಸಿಗುತ್ತಲೇ ಇರುತ್ತದೆ. ಮೋದಿ ಅವರು ಗ್ಯಾರಂಟಿ ನೀಡಿದರೆ ಅದನ್ನು ಈಡೇರಿಸುತ್ತಾರೆ ಎಂಬ ಭರವಸೆ  ಪ್ರತಿಯೊಬ್ಬ ಬಡ ತಾಯಿ ಮತ್ತು ಸಹೋದರಿಗೆ ತಿಳಿದಿದೆ ಎಂದು ಅವರು ಹೇಳಿದರು.

ಅವರು ಭಾನುವಾರ ಮಧ್ಯಪ್ರದೇಶದ ಸಿಯೋನಿಯಲ್ಲಿ ಮತ್ತೊಮ್ಮೆ ಇದೆ ಘೋಷಣೆಯನ್ನು ಪುನರಾವರ್ತಿಸಿದರು. ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ ದೇಶದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂದು ಖಚಿತಪಡಿಸಿಕೊಳ್ಳಲು ಅದನ್ನು ಯೋಜನೆಯನ್ನು ವಿಸ್ತರಿಸುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ ನಿರ್ಧಾರವು ಉನ್ನತ ಮಟ್ಟದ ಆರ್ಥಿಕ ಸಂಕಷ್ಟ ಮತ್ತು ಬೆಳೆಯುತ್ತಿರುವ ಅಸಮಾನತೆಗಳ ಸೂಚನೆಯಾಗಿದೆ ಎಂದು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್  ಕೇಂದ್ರ ಸರಕಾರವನ್ನು ಟೀಕಿಸಿದೆ.

ಕೇಂದ್ರ ಸರ್ಕಾರವು ಜನರಿಗೆ NFSA ಅಡಿಯಲ್ಲಿ ಅಕ್ಕಿ ಕೆಜಿಗೆ 3 ರೂಗೆ, ಗೋಧಿ ಕೆಜಿಗೆ 2 ರೂಗೆ, ಮತ್ತು ಧಾನ್ಯಗಳು ಕೆಜಿಗೆ ರೂ 1 ರಂತೆ ನೀಡುತ್ತದೆ.  ಕಳೆದ ವರ್ಷ ಡಿಸೆಂಬರ್‌ನಲ್ಲಿ ಸರ್ಕಾರವು PMGKAYನ್ನು NFSA ನೊಂದಿಗೆ ವಿಲೀನಗೊಳಿಸಿತು ಮತ್ತು NFSA ಅಡಿಯಲ್ಲಿ ಫಲಾನುಭವಿಗಳಿಗೆ ಅವರ ಅರ್ಹತೆಯ ಪ್ರಕಾರ 2023ರಲ್ಲಿ ಒಂದು ವರ್ಷಕ್ಕೆ ಉಚಿತ ಆಹಾರಧಾನ್ಯಗಳನ್ನು ನೀಡಲು ನಿರ್ಧರಿಸಿತು. ಮುಂದಿನ ಐದು ವರ್ಷಗಳವರೆಗೆ ಈ ಯೋಜನೆಯನ್ನು ವಿಸ್ತರಿಸುವುದಾಗಿ ಪ್ರಧಾನಮಂತ್ರಿ ಘೋಷಿಸಿದ್ದಾರೆ.

ಎನ್‌ಎಫ್‌ಎಸ್‌ಎ ಸುಮಾರು 81.35 ಕೋಟಿ ಜನರನ್ನು ಒಳಗೊಂಡಿದೆ ಮತ್ತು ಅವರಿಗೆ ಆಹಾರ ಭದ್ರತೆ ಒದಗಿಸಲು 2 ಲಕ್ಷ ಕೋಟಿ ರೂಪಾಯಿಗಳ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೇಂದ್ರ ಹೇಳಿತ್ತು.

ಪ್ರಧಾನಮಂತ್ರಿಯವರ ಘೋಷಣೆಯು ಉನ್ನತ ಮಟ್ಟದ ಆರ್ಥಿಕ ಸಂಕಷ್ಟ ಮತ್ತು ಬೆಳೆಯುತ್ತಿರುವ ಅಸಮಾನತೆಗಳ ಸೂಚನೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಅಗತ್ಯ ವಸ್ತುಗಳ ಗಗನಕ್ಕೇರಿರುವ ಬೆಲೆಗಳಿಗೆ ಅನುಗುಣವಾಗಿ ಬಹುಪಾಲು ಭಾರತೀಯರ ಆದಾಯವು ಹೆಚ್ಚಾಗಿಲ್ಲ ಎಂದು ಜೈರಾಮ್ ರಮೇಶ್ ಟೀಕಿಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 2013ರಲ್ಲಿ ಸಂಸತ್ತು ಅಂಗೀಕರಿಸಿದ ರಾಷ್ಟ್ರೀಯ ಆಹಾರ ಭದ್ರತೆಯನ್ನು ಸತತವಾಗಿ ವಿರೋಧಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ: 6 ಮಂದಿ ದುಷ್ಕರ್ಮಿಗಳ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...