Homeಮುಖಪುಟಉಚಿತ ಪಡಿತರ ಯೋಜನೆ 5 ವರ್ಷಗಳವರೆಗೆ ವಿಸ್ತರಣೆ: ಆರ್ಥಿಕ ಸಂಕಷ್ಟ, ಅಸಮಾನತೆಗಳ ಸೂಚನೆ ಎಂದ ಕಾಂಗ್ರೆಸ್

ಉಚಿತ ಪಡಿತರ ಯೋಜನೆ 5 ವರ್ಷಗಳವರೆಗೆ ವಿಸ್ತರಣೆ: ಆರ್ಥಿಕ ಸಂಕಷ್ಟ, ಅಸಮಾನತೆಗಳ ಸೂಚನೆ ಎಂದ ಕಾಂಗ್ರೆಸ್

- Advertisement -
- Advertisement -

ಮುಂದಿನ 5 ವರ್ಷಗಳವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ 2013ರ ಅಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವುದನ್ನು ಕೇಂದ್ರ ಸರ್ಕಾರ ಮುಂದುವರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಕೊರೋನ ವೈರಸ್ ಸಾಂಕ್ರಾಮಿಕವು ಹರಡಿದ್ದಾಗ, 2020ರಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಮ್‌ಜಿಕೆಎವೈ)ಯನ್ನು ಜಾರಿಗೆ ತರಲಾಗಿತ್ತು. ಆ ಯೋಜನೆಯ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು ಸರಕಾರವು ಉಚಿತವಾಗಿ ನೀಡುತ್ತಿತ್ತು. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುತ್ತಿದ್ದ ಆಹಾರ ಧಾನ್ಯಗಳಿಗೆ ಹೆಚ್ಚುವರಿಯಾಗಿತ್ತು.

ಪಿಎಂ ಗರೀಬ್ ಕಲ್ಯಾಣ್ (ಪಿಎಂಜಿಕೆಎವೈ) ಯೋಜನೆಯು ಈ ವರ್ಷ ಡಿಸೆಂಬರ್‌ನಲ್ಲಿ ಕೊನೆಗೊಳ್ಳಬೇಕಿತ್ತು. ಶನಿವಾರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ದೇಶದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂದು ಖಚಿತಪಡಿಸಿಕೊಳ್ಳಲು ಅದನ್ನು ವಿಸ್ತರಿಸುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು. ನಾನು ಬಡತನವನ್ನು ನೋಡಿದ್ದೇನೆ. ನಾವು ಇನ್ನೂ ಐದು ವರ್ಷಗಳವರೆಗೆ ಯೋಜನೆಯನ್ನು ವಿಸ್ತರಿಸುತ್ತೇವೆ. ಇದು ಮೋದಿಯ ಸಂಕಲ್ಪ. ಇದು ಮೋದಿಯ ಗ್ಯಾರಂಟಿ. ಬಡವರಿಗೆ ಉಚಿತ ಪಡಿತರ ಸಿಗುತ್ತಲೇ ಇರುತ್ತದೆ. ಮೋದಿ ಅವರು ಗ್ಯಾರಂಟಿ ನೀಡಿದರೆ ಅದನ್ನು ಈಡೇರಿಸುತ್ತಾರೆ ಎಂಬ ಭರವಸೆ  ಪ್ರತಿಯೊಬ್ಬ ಬಡ ತಾಯಿ ಮತ್ತು ಸಹೋದರಿಗೆ ತಿಳಿದಿದೆ ಎಂದು ಅವರು ಹೇಳಿದರು.

ಅವರು ಭಾನುವಾರ ಮಧ್ಯಪ್ರದೇಶದ ಸಿಯೋನಿಯಲ್ಲಿ ಮತ್ತೊಮ್ಮೆ ಇದೆ ಘೋಷಣೆಯನ್ನು ಪುನರಾವರ್ತಿಸಿದರು. ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ ದೇಶದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂದು ಖಚಿತಪಡಿಸಿಕೊಳ್ಳಲು ಅದನ್ನು ಯೋಜನೆಯನ್ನು ವಿಸ್ತರಿಸುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ ನಿರ್ಧಾರವು ಉನ್ನತ ಮಟ್ಟದ ಆರ್ಥಿಕ ಸಂಕಷ್ಟ ಮತ್ತು ಬೆಳೆಯುತ್ತಿರುವ ಅಸಮಾನತೆಗಳ ಸೂಚನೆಯಾಗಿದೆ ಎಂದು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್  ಕೇಂದ್ರ ಸರಕಾರವನ್ನು ಟೀಕಿಸಿದೆ.

ಕೇಂದ್ರ ಸರ್ಕಾರವು ಜನರಿಗೆ NFSA ಅಡಿಯಲ್ಲಿ ಅಕ್ಕಿ ಕೆಜಿಗೆ 3 ರೂಗೆ, ಗೋಧಿ ಕೆಜಿಗೆ 2 ರೂಗೆ, ಮತ್ತು ಧಾನ್ಯಗಳು ಕೆಜಿಗೆ ರೂ 1 ರಂತೆ ನೀಡುತ್ತದೆ.  ಕಳೆದ ವರ್ಷ ಡಿಸೆಂಬರ್‌ನಲ್ಲಿ ಸರ್ಕಾರವು PMGKAYನ್ನು NFSA ನೊಂದಿಗೆ ವಿಲೀನಗೊಳಿಸಿತು ಮತ್ತು NFSA ಅಡಿಯಲ್ಲಿ ಫಲಾನುಭವಿಗಳಿಗೆ ಅವರ ಅರ್ಹತೆಯ ಪ್ರಕಾರ 2023ರಲ್ಲಿ ಒಂದು ವರ್ಷಕ್ಕೆ ಉಚಿತ ಆಹಾರಧಾನ್ಯಗಳನ್ನು ನೀಡಲು ನಿರ್ಧರಿಸಿತು. ಮುಂದಿನ ಐದು ವರ್ಷಗಳವರೆಗೆ ಈ ಯೋಜನೆಯನ್ನು ವಿಸ್ತರಿಸುವುದಾಗಿ ಪ್ರಧಾನಮಂತ್ರಿ ಘೋಷಿಸಿದ್ದಾರೆ.

ಎನ್‌ಎಫ್‌ಎಸ್‌ಎ ಸುಮಾರು 81.35 ಕೋಟಿ ಜನರನ್ನು ಒಳಗೊಂಡಿದೆ ಮತ್ತು ಅವರಿಗೆ ಆಹಾರ ಭದ್ರತೆ ಒದಗಿಸಲು 2 ಲಕ್ಷ ಕೋಟಿ ರೂಪಾಯಿಗಳ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೇಂದ್ರ ಹೇಳಿತ್ತು.

ಪ್ರಧಾನಮಂತ್ರಿಯವರ ಘೋಷಣೆಯು ಉನ್ನತ ಮಟ್ಟದ ಆರ್ಥಿಕ ಸಂಕಷ್ಟ ಮತ್ತು ಬೆಳೆಯುತ್ತಿರುವ ಅಸಮಾನತೆಗಳ ಸೂಚನೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಅಗತ್ಯ ವಸ್ತುಗಳ ಗಗನಕ್ಕೇರಿರುವ ಬೆಲೆಗಳಿಗೆ ಅನುಗುಣವಾಗಿ ಬಹುಪಾಲು ಭಾರತೀಯರ ಆದಾಯವು ಹೆಚ್ಚಾಗಿಲ್ಲ ಎಂದು ಜೈರಾಮ್ ರಮೇಶ್ ಟೀಕಿಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 2013ರಲ್ಲಿ ಸಂಸತ್ತು ಅಂಗೀಕರಿಸಿದ ರಾಷ್ಟ್ರೀಯ ಆಹಾರ ಭದ್ರತೆಯನ್ನು ಸತತವಾಗಿ ವಿರೋಧಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ: 6 ಮಂದಿ ದುಷ್ಕರ್ಮಿಗಳ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...