Homeಕರ್ನಾಟಕಡಿ ಕೆ ಶಿವಕುಮಾರ್ ಹೆಸರಿನಲ್ಲಿ ಫಾಕ್ಸ್ ಕಾನ್‌‌ ಸಂಸ್ಥೆಗೆ ನಕಲಿ ಪತ್ರ: ಪ್ರಕರಣ ದಾಖಲು

ಡಿ ಕೆ ಶಿವಕುಮಾರ್ ಹೆಸರಿನಲ್ಲಿ ಫಾಕ್ಸ್ ಕಾನ್‌‌ ಸಂಸ್ಥೆಗೆ ನಕಲಿ ಪತ್ರ: ಪ್ರಕರಣ ದಾಖಲು

- Advertisement -
- Advertisement -

ಆಪಲ್ ಏರ್‌ಪಾಡ್ಸ್ ಉತ್ಪಾದನಾ ಪಾಲುದಾರರಲ್ಲಿ ಒಂದಾದ ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್‌ನ ಅಧ್ಯಕ್ಷರಿಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬರೆದಿದ್ದಾರೆ ಎನ್ನಲಾದ ನಕಲಿ ಪತ್ರವೊಂದು ವೈರಲ್‌ ಆಗಿದ್ದು, ಪತ್ರದಲ್ಲಿ ಆಪಲ್ ಏರ್‌ಪಾಡ್ಸ್ ಉತ್ಪಾದನಾ ಘಟಕವನ್ನು ಹೈದ್ರಾಬಾದ್‌ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಆಗ್ರಹಿಸಲಾಗಿದೆ.

ಪತ್ರ ವೈರಲ್ ಆದ ಕೂಡಲೇ ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಪಕ್ಷವು ಎಕ್ಸ್‌ನಲ್ಲಿ ಕರ್ನಾಟಕ ಸರ್ಕಾರ ಹೈದರಾಬಾದ್ ವಿರುದ್ಧ ದೊಡ್ಡ ಪಿತೂರಿ ಮಾಡಿದೆ ಎಂದು ಆರೋಪಿಸಿದೆ. ಆದರೆ ಈ ಆರೋಪವನ್ನು ಡಿಕೆ ಶಿವಕುಮಾರ್ ಅವರು ನಿರಾಕರಿಸಿದ್ದರು.

ಈ ಬಗ್ಗೆ ಡಿಸಿಎಂ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಎಂಎನ್ ಅವರು ಶನಿವಾರ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ. ಪತ್ರದ ಮೇಲಿನ ಸಹಿ ನಕಲಿಯಾಗಿದ್ದು, ಬರೆದಿರುವ ಲೆಟರ್ ಹೆಡ್ ಕೂಡ ನಕಲಿ ಎಂದು ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.

ಆಪಲ್ ಏರ್‌ಪಾಡ್ಸ್ ಉತ್ಪಾದನಾ ಘಟಕವನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಸೆ.25ರಂದು ನಕಲಿ ಪತ್ರವು ಫಾಕ್ಸ್‌ಕಾನ್ ಅಧ್ಯಕ್ಷರಿಗೆ ಡಿಕೆ ಶಿವಕುಮಾರ್‌ ಹೆಸರಿನಲ್ಲಿ ಬರೆಯಲಾಗಿತ್ತು.

ಪತ್ರದಲ್ಲಿ ನೀವು ಹೈದರಾಬಾದ್‌ನಲ್ಲಿ ಸ್ಥಾಪಿಸಲು ಯೋಜಿಸಿರುವ ಆಪಲ್ ಏರ್‌ಪಾಡ್ಸ್ ಉದ್ಯಮವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಮ್ಮ ಸರ್ಕಾರದ ಪರವಾಗಿ ಆಗ್ರಹಿಸುತ್ತೇನೆ. ಈ ಕ್ರಮದಿಂದ ಹಲವಾರು ಪರಸ್ಪರ ಪ್ರಯೋಜನಗಳು ಇರಲಿದೆ. ಬೆಂಗಳೂರಿನಲ್ಲಿ ಇರುವುದರಿಂದ ನಿಮ್ಮ ಅಂತರಾಷ್ಟ್ರೀಯ ಮನ್ನಣೆಯೂ ಹೆಚ್ಚಳವಾಗಲಿದೆ ಎಂದು ಉಲ್ಲೇಖಿಸಲಾಗಿತ್ತು.

ಇದಲ್ಲದೆ ಹೈದರಾಬಾದ್‌ಗೆ ಹೋಲಿಸಿದರೆ ಬೆಂಗಳೂರು ತನ್ನ ಸುರಕ್ಷತೆಗೆ ಹೆಸರುವಾಸಿಯಾಗಿದೆ ಮತ್ತು 50 ವರ್ಷಗಳ ಇತಿಹಾಸವನ್ನು ಹೊಂದಿರುವ  ಐಟಿ ಉದ್ಯಮವನ್ನು ಹೊಂದಿದೆ. ನಗರವು ಉನ್ನತ ಲಾಜಿಸ್ಟಿಕ್ಸ್ ಸಾಮರ್ಥ್ಯಗಳನ್ನು ಹೊಂದಿದೆ. ವಿಶೇಷವಾಗಿ ಹೈದರಾಬಾದ್‌ನಲ್ಲಿನ ಹಿಂದಿನ ಕೋಮು ಗಲಭೆಗಳ ಘಟನೆಗಳನ್ನು ನೋಡಿದಾಗ ಇದು ನಿಮ್ಮ ವ್ಯವಹಾರಕ್ಕೆ ಅಪಾಯವನ್ನುಂಟುಮಾಡುತ್ತದೆ. ಇದಲ್ಲದೆ ಹೈದರಾಬಾದ್‌ನಲ್ಲಿರುವ ಹಲವಾರು ಅಂತರಾಷ್ಟ್ರೀಯ ಕೈಗಾರಿಕೆಗಳು ಬೆಂಗಳೂರಿಗೆ ಸ್ಥಳಾಂತರಗೊಳ್ಳಲು ಆಸಕ್ತಿಯನ್ನು ವ್ಯಕ್ತಪಡಿಸಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಬಿಆರ್‌ಎಸ್ ಪಕ್ಷವು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರವು ಹೈದರಾಬಾದ್ ವಿರುದ್ಧ ದೊಡ್ಡ ಸಂಚು ರೂಪಿಸಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಂಪನಿಗಳನ್ನು ಹೈದರಾಬಾದ್‌ನಿಂದ ಕರ್ನಾಟಕಕ್ಕೆ ಸ್ಥಳಾಂತರಿಸಲು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೊಡ್ಡ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದೆ.

ಈ ಕುರಿತು ಕುಮಾರಕೃಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ಪತ್ರ ನಕಲಿಯಾಗಿದೆ ಎಂದು ಹೇಳಿದ್ದಾರೆ. ನನ್ನ ಲೆಟರ್ ಹೆಡ್ ವಿನ್ಯಾಸ, ಬಣ್ಣ ಬೇರೆ ಇದೆ. ನನ್ನ ಲೆಟರ್ ಹೆಡ್ ಪ್ರತಿ ಪುಟಕ್ಕೆ ಸಂಖ್ಯೆಗಳಿರುತ್ತವೆ. ನನ್ನ ಲೆಟರ್ ಹೆಡ್ ಹಸಿರು ಬಣ್ಣದಲ್ಲಿ ಇಲ್ಲ. 15 ವರ್ಷಗಳ ಹಿಂದೆ ಶಾಸಕರುಗಳು ಹಸಿರು ಬಣ್ಣದ ಲೆಟರ್ ಹೆಡ್ ಬಳಸುತ್ತಿದ್ದರು. ಈಗ ಆ ಬಣ್ಣದ ಲೆಟರ್ ಹೆಡ್‌ನ್ನು ಯಾರೂ ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ: 6 ಮಂದಿ ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...