Homeಮುಖಪುಟಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

ಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

- Advertisement -
- Advertisement -

ವಿಧಾನಸಭೆ ಚುನಾವಣೆಯ ಹಿನ್ನೆಲೆ ಕೇಂದ್ರೀಯ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯವು ಹಂಚಿಕೆಗಾಗಿ ಹಣವನ್ನು ಸಾಗಿಸುತ್ತಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ದೇಶದಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಗಳು ಮತ್ತು ಇಡಿ ದಾಳಿಗಳು ಏಕಕಾಲದಲ್ಲಿ ನಡೆಯುತ್ತಿವೆ. ಈ ಚುನಾವಣೆಯಲ್ಲಿ ಹಣವನ್ನು ಹಂಚಲು ಇಡಿ ಹಣವನ್ನು ಸಾಗಿಸುತ್ತಿದೆ ಮತ್ತು ಈ ವಿಷಯದಲ್ಲಿ ಭಾರತದ ಚುನಾವಣಾ ಆಯೋಗ ಮಧ್ಯಪ್ರವೇಶಿಸಬೇಕು ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರು ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ಗೆ ಸುಮಾರು 508 ಕೋಟಿ ರೂ.ಗಳನ್ನು ಪಾವತಿಸಿದ್ದಾರೆ ಎಂದು ಕ್ಯಾಶ್‌ ಕೊರಿಯರ್‌’ನ ಹೇಳಿಕೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವಿಶ್ಲೇಷಣೆ ಆಧರಿಸಿ ಆರೋಪ ಮಾಡಲಾಗಿದೆ ಎಂದು ಇಡಿ ಹೇಳಿದೆ.

ಬಾಘೇಲ್ ಅವರು ವಿರುದ್ಧ ಆರೋಪಗಳನ್ನು ನಿರಾಕರಿಸಿದ  ಗೆಹ್ಲೂಟ್‌,  EDಯ ಪತ್ರಿಕಾ ಹೇಳಿಕೆಯು ಬಿಜೆಪಿಯ ಎರಡನೇ ಚುನಾವಣಾ ಪ್ರಣಾಳಿಕೆ ಎಂದು ಆರೋಪಿಸಿದ್ದಾರೆ. ಗೆಹ್ಲೋಟ್ ಅವರು ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಸರ್ದಾರ್‌ಪುರ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಇಡಿ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಕುತೂಹಲಕಾರಿಯಾಗಿದೆ. ಇಡಿ ಮತ್ತು ಐಟಿಯಂತಹ ಏಜೆನ್ಸಿಗಳ ಆದೇಶವು ಆರ್ಥಿಕ ಅಪರಾಧಿಗಳನ್ನು ಬಂಧಿಸುವುದಾಗಿದೆ. ಆದರೆ ಅವರು ಇಡೀ ದೇಶದ ರಾಜಕಾರಣಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ಪಕ್ಷದೊಳಗಿನ ಟಿಕೆಟ್‌ ವಿಚಾರದ ಭಿನ್ನಾಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಿದ ಅಶೋಕ್‌ ಗೆಹ್ಲೋಟ್, ಅಭ್ಯರ್ಥಿಗಳ ಘೋಷಣೆ ವೇಳೆ ಇದು ಸಾಮಾನ್ಯ ಮತ್ತು ಸ್ವಾಭಾವಿಕ ಪ್ರತಿಕ್ರಿಯೆ. ಈ ಎಲ್ಲಾ ಅಸಮಾಧಾನಗಳನ್ನು ಸರಿಪಡಿಸಲಾಗುವುದು ಮತ್ತು ಕಾಂಗ್ರೆಸ್‌ನ್ನು ಮರಳಿ ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಂಡ್ಲುಪೇಟೆ: ಬಂಡೀಪುರ ಅರಣ್ಯದಲ್ಲಿ ಗುಂಡಿನ ಚಕಮಕಿ: ಯುವಕ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...