Homeಮುಖಪುಟಹಳಸಿದ ಭಾರತ-ಕೆನಡಾ ಸಂಬಂಧ ಸರಿಪಡಿಸುವುದು ಒಂದು ದೀರ್ಘ ಪ್ರಕ್ರಿಯೆ: ವರದಿ

ಹಳಸಿದ ಭಾರತ-ಕೆನಡಾ ಸಂಬಂಧ ಸರಿಪಡಿಸುವುದು ಒಂದು ದೀರ್ಘ ಪ್ರಕ್ರಿಯೆ: ವರದಿ

- Advertisement -
- Advertisement -

ಕೆನಡಿಯನ್ನರ ಮೇಲಿನ ಕೆಲವು ವೀಸಾ ನಿರ್ಬಂಧಗಳನ್ನು ಭಾರತವು ಇತ್ತೀಚೆಗೆ ಸಡಿಲಗೊಳಿಸಿದೆ. ಈ ನಿರ್ಧಾರ ಅಚ್ಚರಿಯ ಬೆಳವಣಿಗೆಯಾಗಿದ್ದರೂ ಭಾರತ ಮತ್ತು ಕೆನಡಾ ನಡುವಿನ ಹಳಸಿದ ರಾಜತಾಂತ್ರಿಕ ಸಂಬಂಧಗಳನ್ನು ಸರಿಪಡಿಸುವುದು ದೀರ್ಘ ಪ್ರಕ್ರಿಯೆಯಾಗಬಹುದು ಎಂದು ಅಧಿಕಾರಿಗಳು ಮತ್ತು ತಜ್ಞರು ಹೇಳುತ್ತಾರೆ.

ಸಿಖ್ ಪ್ರತ್ಯೇಕವಾದಿ ನಾಯಕ ಹರ್‌ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಆರೋಪಿಸಿದ್ದರು. ತದನಂತರ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಾಂಧವ್ಯವು ಹದಗೆಟ್ಟಿತ್ತು.

ಕೆನಡಾ ಪ್ರಧಾನಿಯವರ ಆರೋಪದ ಬೆನ್ನಲ್ಲೇ ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಮತ್ತು ಪ್ರಚೋದಿತ ಎಂದು ತಿರಸ್ಕರಿಸಿತ್ತು. ಈ ಮಧ್ಯೆ ಭಾರತದ ಅಧಿಕಾರಿಯನ್ನು ಕೆನಡಾ ಉಚ್ಚಾಟಿಸಿತ್ತು. ಇದರ ಬೆನ್ನಲ್ಲೇ ಭಾರತ ಕೂಡ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟಿಸಿದೆ. ಅಲ್ಲದೆ ದೇಶದಲ್ಲಿರುವ ತನ್ನ ರಾಜತಾಂತ್ರಿಕ ಸಿಬ್ಬಂದಿಯ ಗಾತ್ರವನ್ನು ಕಡಿತಗೊಳಿಸಲು ಸೂಚಿಸಿತ್ತು. ಅದರನುಸಾರ ಕೆನಡಾ ಈಗಾಗಲೇ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸು ಕರೆಸಿಕೊಂಡಿದೆ.

ಈ ಎಲ್ಲಾ ಬೆಳವಣಿಗೆಗೆಳ ತಿಂಗಳುಗಳ ಬಳಿಕ ವೀಸಾ ಸೇವೆಗಳನ್ನು ಭಾಗಶಃ ಮರುಸ್ಥಾಪಿಸಲು ಭಾರತವು ಇತ್ತೀಚೆಗೆ ನಿರ್ಧರಿಸಿದೆ. ವೀಸಾಗಳ ಮೇಲಿನ ಭಾರತದ ಸಡಿಲಿಕೆಯು ಸುಧಾರಿತ ಸಂಬಂಧಗಳ ಕೆಲವು ನಿರೀಕ್ಷೆಗಳನ್ನು ಹೆಚ್ಚಿಸಿದ್ದರೂ, ಇದು ಪ್ರಗತಿಯಾಗಿಲ್ಲ. ಏಕೆಂದರೆ ಎರಡೂ ದೇಶಗಳು ಸಂಬಂಧ ಉತ್ತಮಗೊಳಿಸಲು ಹೆಚ್ಚಿನ ಆಸಕ್ತಿ ತೋರಿಸಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಒಂದು ಕಡೆ ಹರ್‌ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಕುರಿತು ಕೆನಡಾದ ತನಿಖೆ ಮುಂದುವರಿಯುತ್ತಿದೆ. ಇನ್ನೊಂದು ಕಡೆ ಭಾರತ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ ಭಾರತ ಅಥವಾ ಕೆನಡಾ ಶೀಘ್ರದಲ್ಲೇ ರಾಜಿ ಮಾಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿಲ್ಲ ಎನ್ನುವುದು ತಜ್ಞರ ಅಭಿಪ್ರಾಯ.

ವಾಷಿಂಗ್ಟನ್‌ನ ವಿಲ್ಸನ್ ಸೆಂಟರ್‌ನಲ್ಲಿರುವ ದಕ್ಷಿಣ ಏಷ್ಯಾ ಸಂಸ್ಥೆಯ ನಿರ್ದೇಶಕ ಮೈಕೆಲ್ ಕುಗೆಲ್‌ಮನ್, ಭಾರತ ಕೆನಡಾ ಸಂಬಂಧವು ಆಳವಾದ ಬಿಕ್ಕಟ್ಟಿನಲ್ಲಿದೆ, ಬಹುಶಃ ಇದು ಹಿಂದೆಂದಿಗಿಂತಲೂ ಕೆಟ್ಟದಾಗಿದೆ. ಬಿಕ್ಕಟ್ಟು ಹೆಚ್ಚಾಗಬಾರದು ಎಂಬ ಬಗ್ಗೆ ಎರಡು ದೇಶಕ್ಕೂ ಕಾಳಜಿ ಇರಬಹುದು. ಇದು ಸಮಸ್ಯೆ ಬಗೆಹರಿಸಲು ಪ್ರತ್ಸಾಹಕವಾಗಿದೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ.

2020ರಿಂದ 2022ರವರೆಗೆ ಕೆನಡಾದಲ್ಲಿ ಭಾರತದ ರಾಯಭಾರಿಯಾಗಿರುವ ಅಜಯ್ ಬಿಸಾರಿಯಾ, ಎರಡೂ ದೇಶಗಳ ಸಂಬಂಧವೂ ಉತ್ಕರ್ಷದ ಹಂತದಲ್ಲಿದೆ ಎಂದು ಹೇಳಿದ್ದಾರೆ.

ವೀಸಾ ನಿರ್ಬಂಧಗಳು ಕೆನಡಾದಲ್ಲಿ ವಾಸಿಸುವ ಅಥವಾ ಅಲ್ಲಿ ಅಧ್ಯಯನ ಮಾಡಲು ಯೋಜಿಸಿರುವ ಹತ್ತಾರು ಭಾರತೀಯರು ಮತ್ತು ಭಾರತೀಯ ಮೂಲದ ಜನರಿಗೆ ಅಡ್ಡಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಎರಡೂ ಸರ್ಕಾರಗಳು ವ್ಯಾಪಾರ ಸಂಬಂಧಗಳನ್ನು ಉಳಿಸಿಕೊಂಡಿದ್ದರೂ, ಮುಕ್ತ-ವ್ಯಾಪಾರ ಒಪ್ಪಂದದ ಚರ್ಚೆಗಳನ್ನು ವಿಳಂಬಗೊಳಿಸಿದೆ ಎನ್ನಲಾಗಿದೆ.

ಒಟ್ಟಾವಾದಲ್ಲಿನ ಭಾರತದ ಗುಪ್ತಚರ ಮುಖ್ಯಸ್ಥರನ್ನು ಕೆನಡಾ ಹೊರಹಾಕಿತ್ತು. ಕೆನಡಿಯನ್ನರಿಗೆ ವೀಸಾಗಳನ್ನು ಭಾರತ ನಿಲ್ಲಿಸಿತು. ಈ ಕ್ರಮವು ವಿಯೆನ್ನಾ ಒಪ್ಪಂದಗಳನ್ನು ಉಲ್ಲಂಘಿಸಿದೆ ಎಂದು ಕೆನಡಾ ಹೇಳಿದೆ.

ಅ.25ರಂದು ನಾಲ್ಕು ವಿಭಾಗಗಳ ಅಡಿಯಲ್ಲಿ ವೀಸಾಗಳನ್ನು ನೀಡುವುದನ್ನು ಪುನರಾರಂಭಿಸುವುದಾಗಿ ಭಾರತ ಹೇಳಿದೆ. ಆದರೆ ಈ ಬೆಳವಣಿಗೆಯ ಮೂಲಕ ಹಳಸಿದ ಕೆನಡಾ ಮತ್ತು ಭಾರತದ ಸಂಬಂಧವನ್ನು ಸುಲಭವಾಗಿ ಸರಿಪಡಿಸುವುದು ಕಷ್ಟ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...