Homeಕರ್ನಾಟಕಸಿದ್ದರಾಮಯ್ಯರ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ: ಹೆಚ್‌ಡಿ ಕುಮಾರಸ್ವಾಮಿ

ಸಿದ್ದರಾಮಯ್ಯರ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ: ಹೆಚ್‌ಡಿ ಕುಮಾರಸ್ವಾಮಿ

- Advertisement -
- Advertisement -

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡಿ ಹೆಚ್‌ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜೆಡಿಎಸ್‌ ಪಕ್ಷದ ರೈತ ಸಾಂತ್ವನ ಯಾತ್ರೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ” ಎಂದು ಹೇಳಿದ್ದರು.

ಮುಖ್ಯ ಮಂತ್ರಿಗಳ ಪೋಸ್ಟ್ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರು ಪೋಸ್ಟ್ ಮಾಡಿದ್ದು, ”ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ” ಎಂದು ಹೇಳಿದ್ದಾರೆ.

”ಜೆಡಿಎಸ್‌ ಪಕ್ಷ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ. ‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು?” ಎಂದು ಪ್ರಶ್ನೆ ಮಾಡಿದ್ದಾರೆ.

”ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ! ಅಲ್ಲವೇ?” ಎಂದು ಕೇಳಿದ್ದಾರೆ.

”ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಎನ್ನುವುದು ನನ್ನ ವಿನಮ್ರ ಪ್ರಶ್ನೆ” ಎಂದಿದ್ದಾರೆ.

”236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ; 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದಾರೆ.

”ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿ ʼವಿಶ್ವವಿಖ್ಯಾತ ವಿತ್ತತಜ್ಞʼರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ ಜೋಪಾನ ‘ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ?” ಎಂದು ಕೇಳಿದ್ದಾರೆ.

”ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ… ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್‌ ಹಸ್ತ, ಡಿನ್ನರ್‌-ಬ್ರೇಕ್‌ ಫಾಸ್ಟ್‌ ಮೀಟಿಂಗುಗಳಲ್ಲಿಯೇ ʼಭಾರೀʼ ಬ್ಯುಸಿ‌ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

”ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು,‌ ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...