Homeಕರ್ನಾಟಕಸಿದ್ದರಾಮಯ್ಯರ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ: ಹೆಚ್‌ಡಿ ಕುಮಾರಸ್ವಾಮಿ

ಸಿದ್ದರಾಮಯ್ಯರ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ: ಹೆಚ್‌ಡಿ ಕುಮಾರಸ್ವಾಮಿ

- Advertisement -
- Advertisement -

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡಿ ಹೆಚ್‌ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜೆಡಿಎಸ್‌ ಪಕ್ಷದ ರೈತ ಸಾಂತ್ವನ ಯಾತ್ರೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ” ಎಂದು ಹೇಳಿದ್ದರು.

ಮುಖ್ಯ ಮಂತ್ರಿಗಳ ಪೋಸ್ಟ್ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರು ಪೋಸ್ಟ್ ಮಾಡಿದ್ದು, ”ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ” ಎಂದು ಹೇಳಿದ್ದಾರೆ.

”ಜೆಡಿಎಸ್‌ ಪಕ್ಷ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ. ‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು?” ಎಂದು ಪ್ರಶ್ನೆ ಮಾಡಿದ್ದಾರೆ.

”ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ! ಅಲ್ಲವೇ?” ಎಂದು ಕೇಳಿದ್ದಾರೆ.

”ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಎನ್ನುವುದು ನನ್ನ ವಿನಮ್ರ ಪ್ರಶ್ನೆ” ಎಂದಿದ್ದಾರೆ.

”236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ; 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದಾರೆ.

”ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿ ʼವಿಶ್ವವಿಖ್ಯಾತ ವಿತ್ತತಜ್ಞʼರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ ಜೋಪಾನ ‘ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ?” ಎಂದು ಕೇಳಿದ್ದಾರೆ.

”ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ… ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್‌ ಹಸ್ತ, ಡಿನ್ನರ್‌-ಬ್ರೇಕ್‌ ಫಾಸ್ಟ್‌ ಮೀಟಿಂಗುಗಳಲ್ಲಿಯೇ ʼಭಾರೀʼ ಬ್ಯುಸಿ‌ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

”ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು,‌ ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...