Homeಮುಖಪುಟಬೆಟ್ಟಿಂಗ್ ಆ್ಯಪ್ ನಿಷೇಧಿಸುವಂತೆ ಆಗಸ್ಟ್‌ನಲ್ಲಿಯೇ ಬಾಘೇಲ್ ಒತ್ತಾಯಿಸಿದ್ದರು: ಕಾಂಗ್ರೆಸ್

ಬೆಟ್ಟಿಂಗ್ ಆ್ಯಪ್ ನಿಷೇಧಿಸುವಂತೆ ಆಗಸ್ಟ್‌ನಲ್ಲಿಯೇ ಬಾಘೇಲ್ ಒತ್ತಾಯಿಸಿದ್ದರು: ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ ವಿರುದ್ಧ ಕ್ರಮಕೈಗೊಳ್ಳಲು ತಿಂಗಳುಗಳ ಹಿಂದೆಯೇ ಮನವಿ ಮಾಡಿದ್ದರು. ಆದರೆ ಮಹದೇವ್ ಆ್ಯಪ್ ಮೇಲೆ ನಿಷೇಧ ಹೇರಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಬಘೆಲ್ ಅವರು ಆ್ಯಪ್‌ನ ಮೇಲಿನ ನಿಷೇಧಕ್ಕೆ ಬೇಡಿಕೆಯಿಟ್ಟಿರುವುದನ್ನು ಸರ್ಕಾರ ಹೊಗಳಬೇಕಿತ್ತು ಆದರೆ ಅವರ ವಿರುದ್ಧವೇ ಆರೋಪ ಮಾಡುತ್ತಿದೆ. ಬಿಜೆಪಿಯ ಈ ಆರೋಪಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ X ನಲ್ಲಿನ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಮಹಾದೇವ್ ಅಪ್ಲಿಕೇಶನ್ ಪ್ರಕರಣವನ್ನು ಇಡಿ ಹಲವಾರು ತಿಂಗಳುಗಳಿಂದ ತನಿಖೆ ನಡೆಸುತ್ತಿದೆ ಆದರೆ ಅದನ್ನು ನಿಷೇಧಿಸಲು ಇಷ್ಟು ಸಮಯ ತೆಗೆದುಕೊಂಡಿರುವುದು ಆಶ್ಚರ್ಯಕರ” ಎಂದು ಹೇಳಿದರು.

”ಆಗಸ್ಟ್ 24ರಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಮಹದೇವ್ ಆ್ಯಪ್‌ನ್ನು ನಿಷೇಧಿಸುವ ಬೇಡಿಕೆಯನ್ನು ಮೊದಲು ಎತ್ತಿದ್ದರು. ಪ್ರಧಾನಿ ಮೋದಿಯವರು ಅವರನ್ನು ಹೊಗಳುವ ಬದಲು, ಅವರ ವಿರುದ್ಧ ಇಡಿಯನ್ನು ನಿಯೋಜಿಸಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.

ಛತ್ತೀಸ್‌ಗಢ ಸರ್ಕಾರವು ಮಹದೇವ್ ಆ್ಯಪ್‌ನ್ನು ನಿಷೇಧಿಸುವಂತೆ ಒತ್ತಾಯಿಸಿಲ್ಲ ಎಂದು ಕೇಂದ್ರ ಸಚಿವರು ಹೇಳುತ್ತಿರುವುದು ದೊಡ್ಡ ಸುಳ್ಳು” ಎಂದು ಕಾಂಗ್ರೆಸ್ ಆರೋಪಿಸಿದೆ.

ಆಗಸ್ಟ್ 24, 2023 ರಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಘೇಲ್ ಅವರು ಆರೋಪಿಗಳನ್ನು ಬಂಧಿಸುವಂತೆ ಕರೆ ನೀಡಿದ್ದರು ಮತ್ತು ಕೇಂದ್ರ ಸರ್ಕಾರವು 28 ರಷ್ಟು ತೆರಿಗೆ ವಿಧಿಸುವ ಮೂಲಕ ಆನ್‌ಲೈನ್ ಬೆಟ್ಟಿಂಗ್‌ಗೆ ಕಾನೂನು ಸ್ಥಾನಮಾನ ನೀಡುವ ವಿಷಯವನ್ನು ಪ್ರಸ್ತಾಪಿಸಿದರು ಎಂದು ರಮೇಶ್ ಗಮನಸೆಳೆದರು.

”ಕೇಂದ್ರ ಸರ್ಕಾರವು ಈ ಬೆಟ್ಟಿಂಗ್ ಆ್ಯಪ್‌ನ್ನು ಏಕೆ ನಿಷೇಧಿಸುತ್ತಿಲ್ಲ ಎಂದು ಮುಖ್ಯಮಂತ್ರಿಗಳು ಹಲವಾರು ತಿಂಗಳುಗಳಿಂದ ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಬಹುಶಃ 28% ಜಿಎಸ್‌ಟಿಯ ದುರಾಸೆಯಿಂದ ನಿಷೇಧವನ್ನು ಹೇರಲಾಗುತ್ತಿಲ್ಲ ಎಂದು ಅವರು (ಬಘೆಲ್) ಹೇಳಿದ್ದರು. ಆ್ಯಪ್ ಆಪರೇಟರ್‌ಗಳೊಂದಿಗೆ ಬಿಜೆಪಿಯ ನಂಟು ಇದೆಯೇ? ಎಂದು ತಮ್ಮ ಪೋಸ್ಟ್‌ನಲ್ಲಿ ರಮೇಶ್ ಅವರು ಪ್ರಶ್ನೆ ಮಾಡಿದ್ದಾರೆ.

”ಬಿಜೆಪಿ ಸರ್ಕಾರ ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದಿರುವುದು ಮಾತ್ರವಲ್ಲದೆ, ತೆರಿಗೆ ವಸೂಲಿ ಮಾಡುವ ಮೂಲಕ ಆ್ಯಪ್ ಆಪರೇಟರ್‌ಗಳ ಅಕ್ರಮಗಳಿಗೆ ಕಾನೂನು ಮಾನ್ಯತೆ ನೀಡಲು ಮುಂದಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ಛತ್ತೀಸ್‌ಗಢದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿಯ ಈ ಕ್ರಮಗಳಿಗೆ ರಾಜ್ಯದ ಜನತೆ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪರವಾಗಿ ತಮ್ಮ ಜನಾದೇಶ ನೀಡುವ ಮೂಲಕ ತಕ್ಕ ಉತ್ತರ ನೀಡುತ್ತಾರೆ” ಎಂದು ರಮೇಶ್ ಪ್ರತಿಪಾದಿಸಿದರು.

ಇದನ್ನೂ ಓದಿ: “ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನೊಂದಿಗೆ ಕೇಂದ್ರದ ರಹಸ್ಯ ಒಪ್ಪಂದ”: ಭೂಪೇಶ್ ಬಾಘೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...