Homeಮುಖಪುಟಬೆಟ್ಟಿಂಗ್ ಆ್ಯಪ್ ನಿಷೇಧಿಸುವಂತೆ ಆಗಸ್ಟ್‌ನಲ್ಲಿಯೇ ಬಾಘೇಲ್ ಒತ್ತಾಯಿಸಿದ್ದರು: ಕಾಂಗ್ರೆಸ್

ಬೆಟ್ಟಿಂಗ್ ಆ್ಯಪ್ ನಿಷೇಧಿಸುವಂತೆ ಆಗಸ್ಟ್‌ನಲ್ಲಿಯೇ ಬಾಘೇಲ್ ಒತ್ತಾಯಿಸಿದ್ದರು: ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ ವಿರುದ್ಧ ಕ್ರಮಕೈಗೊಳ್ಳಲು ತಿಂಗಳುಗಳ ಹಿಂದೆಯೇ ಮನವಿ ಮಾಡಿದ್ದರು. ಆದರೆ ಮಹದೇವ್ ಆ್ಯಪ್ ಮೇಲೆ ನಿಷೇಧ ಹೇರಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಬಘೆಲ್ ಅವರು ಆ್ಯಪ್‌ನ ಮೇಲಿನ ನಿಷೇಧಕ್ಕೆ ಬೇಡಿಕೆಯಿಟ್ಟಿರುವುದನ್ನು ಸರ್ಕಾರ ಹೊಗಳಬೇಕಿತ್ತು ಆದರೆ ಅವರ ವಿರುದ್ಧವೇ ಆರೋಪ ಮಾಡುತ್ತಿದೆ. ಬಿಜೆಪಿಯ ಈ ಆರೋಪಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ X ನಲ್ಲಿನ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಮಹಾದೇವ್ ಅಪ್ಲಿಕೇಶನ್ ಪ್ರಕರಣವನ್ನು ಇಡಿ ಹಲವಾರು ತಿಂಗಳುಗಳಿಂದ ತನಿಖೆ ನಡೆಸುತ್ತಿದೆ ಆದರೆ ಅದನ್ನು ನಿಷೇಧಿಸಲು ಇಷ್ಟು ಸಮಯ ತೆಗೆದುಕೊಂಡಿರುವುದು ಆಶ್ಚರ್ಯಕರ” ಎಂದು ಹೇಳಿದರು.

”ಆಗಸ್ಟ್ 24ರಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಮಹದೇವ್ ಆ್ಯಪ್‌ನ್ನು ನಿಷೇಧಿಸುವ ಬೇಡಿಕೆಯನ್ನು ಮೊದಲು ಎತ್ತಿದ್ದರು. ಪ್ರಧಾನಿ ಮೋದಿಯವರು ಅವರನ್ನು ಹೊಗಳುವ ಬದಲು, ಅವರ ವಿರುದ್ಧ ಇಡಿಯನ್ನು ನಿಯೋಜಿಸಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.

ಛತ್ತೀಸ್‌ಗಢ ಸರ್ಕಾರವು ಮಹದೇವ್ ಆ್ಯಪ್‌ನ್ನು ನಿಷೇಧಿಸುವಂತೆ ಒತ್ತಾಯಿಸಿಲ್ಲ ಎಂದು ಕೇಂದ್ರ ಸಚಿವರು ಹೇಳುತ್ತಿರುವುದು ದೊಡ್ಡ ಸುಳ್ಳು” ಎಂದು ಕಾಂಗ್ರೆಸ್ ಆರೋಪಿಸಿದೆ.

ಆಗಸ್ಟ್ 24, 2023 ರಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಘೇಲ್ ಅವರು ಆರೋಪಿಗಳನ್ನು ಬಂಧಿಸುವಂತೆ ಕರೆ ನೀಡಿದ್ದರು ಮತ್ತು ಕೇಂದ್ರ ಸರ್ಕಾರವು 28 ರಷ್ಟು ತೆರಿಗೆ ವಿಧಿಸುವ ಮೂಲಕ ಆನ್‌ಲೈನ್ ಬೆಟ್ಟಿಂಗ್‌ಗೆ ಕಾನೂನು ಸ್ಥಾನಮಾನ ನೀಡುವ ವಿಷಯವನ್ನು ಪ್ರಸ್ತಾಪಿಸಿದರು ಎಂದು ರಮೇಶ್ ಗಮನಸೆಳೆದರು.

”ಕೇಂದ್ರ ಸರ್ಕಾರವು ಈ ಬೆಟ್ಟಿಂಗ್ ಆ್ಯಪ್‌ನ್ನು ಏಕೆ ನಿಷೇಧಿಸುತ್ತಿಲ್ಲ ಎಂದು ಮುಖ್ಯಮಂತ್ರಿಗಳು ಹಲವಾರು ತಿಂಗಳುಗಳಿಂದ ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಬಹುಶಃ 28% ಜಿಎಸ್‌ಟಿಯ ದುರಾಸೆಯಿಂದ ನಿಷೇಧವನ್ನು ಹೇರಲಾಗುತ್ತಿಲ್ಲ ಎಂದು ಅವರು (ಬಘೆಲ್) ಹೇಳಿದ್ದರು. ಆ್ಯಪ್ ಆಪರೇಟರ್‌ಗಳೊಂದಿಗೆ ಬಿಜೆಪಿಯ ನಂಟು ಇದೆಯೇ? ಎಂದು ತಮ್ಮ ಪೋಸ್ಟ್‌ನಲ್ಲಿ ರಮೇಶ್ ಅವರು ಪ್ರಶ್ನೆ ಮಾಡಿದ್ದಾರೆ.

”ಬಿಜೆಪಿ ಸರ್ಕಾರ ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದಿರುವುದು ಮಾತ್ರವಲ್ಲದೆ, ತೆರಿಗೆ ವಸೂಲಿ ಮಾಡುವ ಮೂಲಕ ಆ್ಯಪ್ ಆಪರೇಟರ್‌ಗಳ ಅಕ್ರಮಗಳಿಗೆ ಕಾನೂನು ಮಾನ್ಯತೆ ನೀಡಲು ಮುಂದಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ಛತ್ತೀಸ್‌ಗಢದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿಯ ಈ ಕ್ರಮಗಳಿಗೆ ರಾಜ್ಯದ ಜನತೆ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪರವಾಗಿ ತಮ್ಮ ಜನಾದೇಶ ನೀಡುವ ಮೂಲಕ ತಕ್ಕ ಉತ್ತರ ನೀಡುತ್ತಾರೆ” ಎಂದು ರಮೇಶ್ ಪ್ರತಿಪಾದಿಸಿದರು.

ಇದನ್ನೂ ಓದಿ: “ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನೊಂದಿಗೆ ಕೇಂದ್ರದ ರಹಸ್ಯ ಒಪ್ಪಂದ”: ಭೂಪೇಶ್ ಬಾಘೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...