Homeಮುಖಪುಟಭೂಪೇಶ್ ಬಘೇಲ್ ನನಗೆ ದುಬೈಗೆ ತೆರಳುವಂತೆ ಹೇಳಿದ್ದರು: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ಆರೋಪಿ ಹೇಳಿಕೆ

ಭೂಪೇಶ್ ಬಘೇಲ್ ನನಗೆ ದುಬೈಗೆ ತೆರಳುವಂತೆ ಹೇಳಿದ್ದರು: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ಆರೋಪಿ ಹೇಳಿಕೆ

- Advertisement -
- Advertisement -

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ಪ್ರಮುಖ ಆರೋಪಿ ಶುಭಂ ಸೋನಿ ತನ್ನ ವಿಡಿಯೋ ಹೇಳಿಕೆಯಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ದುಬೈಗೆ ಹೋಗುವಂತೆ ಸಲಹೆ ನೀಡಿದ್ದಾರೆ ಎಂದು  ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಎನ್‌ಡಿಟಿವಿ ವರದಿಯ ಪ್ರಕಾರ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಬೇಕಾಗಿರುವ ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣದ ಆರೋಪಿ ಶುಭಂ ಸೋನಿ ದುಬೈನಿಂದ ವಿಡಿಯೋ ವೈರಲ್‌ ಮಾಡಿದ್ದಾರೆ.

ವೀಡಿಯೊ ಸಂದೇಶದಲ್ಲಿ ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣದ ಪ್ರಮುಖ ಆರೋಪಿ ಹೇಳಿಕೆಯನ್ನು ನೀಡಿದ್ದು, ಬಂಧನಕ್ಕೆ ಸಂಬಂಧಿಸಿದಂತೆ ಸಹಾಯಕ್ಕಾಗಿ ಕಾಂಗ್ರೆಸ್ ನಾಯಕನನ್ನು ಸಂಪರ್ಕಿಸಿದಾಗ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ದುಬೈಗೆ ತೆರಳುವಂತೆ ಹೇಳಿದ್ದಾರೆ ಮತ್ತು ಅಲ್ಲಿ ಜೂಜಾಟವನ್ನು ಸ್ಥಾಪಿಸಲು ಪ್ರೋತ್ಸಾಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಯುಎಇ ಮೂಲದ ಮಹಾದೇವ್ ಆಪ್ ಪ್ರವರ್ತಕರಿಂದ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ 508 ಕೋಟಿ ರೂಪಾಯಿ ನಗದು ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಈ ಹಿಂದೆ ಹೇಳಿಕೊಂಡಿತ್ತು.

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೊಂದಿಗೆ ಸಭೆ ನಾನು ನಡೆಸಿದ್ದು, ಛತ್ತೀಸ್‌ಗಢ ಮುಖ್ಯಮಂತ್ರಿಯ ರಾಜಕೀಯ ಸಲಹೆಗಾರ ವಿನೋದ್ ವರ್ಮಾ ಅವರು ಸಭೆಯನ್ನು ಏರ್ಪಡಿಸಿದ್ದರು ಎಂದು ಶುಭಂ ಸೋನಿ ವಿಡಿಯೋ ಸಂದೇಶದಲ್ಲಿ ಆರೋಪಿಸಿದ್ದಾರೆ.

ಸೋನಿ ಮಾತು ಮುಂದುವರಿಸುತ್ತಾ, ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನ ಮಾಲೀಕ ನಾನೇ ಆಗಿದ್ದು, ಅದನ್ನು 2021ರಲ್ಲಿ ಸ್ಥಾಪಿಸಲಾಗಿದೆ. ಅದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿದ್ದಾರೆ.

ನಾನು 2021ರಲ್ಲಿ ಅಪ್ಲಿಕೇಶನನ್ನು ಪ್ರಾರಂಭಿಸಿದೆ ಮತ್ತು ಭಿಲಾಯ್‌ನಲ್ಲಿ ನನ್ನ ಜೂಜಿನ ವ್ಯವಹಾರವು ಉತ್ತಮವಾಗಿ ನಡೆಯುತ್ತಿತ್ತು. ಅದು ಚಿಕ್ಕದಾಗಿ ಪ್ರಾರಂಭವಾಯಿತು ಆದರೆ ದೊಡ್ಡದಾಗಿ ಬೆಳೆಯಿತು. ನಮ್ಮ ಬಳಿ ಹೆಚ್ಚು ಹಣ ಬಂದಿದೆ. ಕೆಲವು ಸಮಯ ವ್ಯವಹಾರ ಸುಗಮವಾಗಿ ನಡೆಯಿತು. ಆದರೆ ನಂತರ ನನ್ನ ಸ್ನೇಹಿತರು ತೊಂದರೆಗೆ ಸಿಲುಕಿದರು. ನಾನು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಮತ್ತು ವಿನೋದ್ ವರ್ಮಾ ಅವರನ್ನು ಭೇಟಿ ಮಾಡಿದ್ದೇನೆ ಮತ್ತು ನನ್ನ ವ್ಯವಹಾರವನ್ನು ದುಬೈಗೆ ವಿಸ್ತರಿಸಲು ಅವರು ನನಗೆ ಹೇಳಿದರು ಎಂದು ಅವರು ಹೇಳಿದ್ದಾರೆ.

ದುಬೈಗೆ ತೆರಳಿದ ನಂತರ ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಭಿಲಾಯ್‌ನ ಇಬ್ಬರು ವ್ಯಕ್ತಿಗಳೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದೇನೆ. ದುಬೈನಲ್ಲಿ ನನ್ನ ಜೂಜಾಟದ ವ್ಯವಹಾರವು ಉತ್ತಮವಾಗಿ ನಡೆಯುತ್ತಿರುವಾಗ, ಸಹಚರರು ಭಿಲಾಯ್‌ನಲ್ಲಿ ಬಂಧಿಸಲ್ಪಟ್ಟಿದ್ದರು. ಆದ್ದರಿಂದ ಮತ್ತೆ ಛತ್ತೀಸ್‌ಗಢಕ್ಕೆ ಬಂದು ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರವಾಲ್ ಅವರನ್ನು ಭೇಟಿಯಾದೆ. ಅವರು ಭಾಗೇಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡುಂತೆ ಹೇಳಿದ್ದರು ಮತ್ತು 508 ಕೋಟಿ ರೂ.ಕೊಡುವಂತೆ ಕೇಳಿದ್ದರು ಎಂದು ಹೇಳಿದ್ದಾರೆ.

508 ಕೋಟಿ ನೀಡುವುದರ ಜೊತೆಗೆ ಪ್ರಶಾಂತ್ ಜೀ ನನಗೆ ಹೇಳಿದ್ದನ್ನು ನಾನು ಮಾಡಿದ್ದೇನೆ ಆದರೂ ನಾನು ಇನ್ನೂ ಸಮಸ್ಯೆಗಳನ್ನು ಎದುರಿಸುತ್ತಿದ್ದೇನೆ. ನಾನು ನನ್ನ ಲಿಖಿತ ಹೇಳಿಕೆಯಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದೇನೆ. ರಾಜಕೀಯ ವ್ಯವಸ್ಥೆಯಲ್ಲಿನ ಈ ಪರಿಸ್ಥಿತಿಯಿಂದ ಭಾರತಕ್ಕೆ ಹಿಂತಿರುಗಿ ಬರಲು ನನಗೆ ಸಹಾಯ ಬೇಕು ಎಂದು ಅವರು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇದನ್ನು ಓದಿ: ರಾಜ್ಯಪಾಲರು ಬಿಲ್‌ಗೆ ಅಂಕಿತ ಹಾಕಲು ವಿಳಂಬದ ಬಗ್ಗೆ ಸುಪ್ರೀಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...