Homeಮುಖಪುಟಭೂಪೇಶ್ ಬಘೇಲ್ ನನಗೆ ದುಬೈಗೆ ತೆರಳುವಂತೆ ಹೇಳಿದ್ದರು: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ಆರೋಪಿ ಹೇಳಿಕೆ

ಭೂಪೇಶ್ ಬಘೇಲ್ ನನಗೆ ದುಬೈಗೆ ತೆರಳುವಂತೆ ಹೇಳಿದ್ದರು: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ಆರೋಪಿ ಹೇಳಿಕೆ

- Advertisement -
- Advertisement -

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ಪ್ರಮುಖ ಆರೋಪಿ ಶುಭಂ ಸೋನಿ ತನ್ನ ವಿಡಿಯೋ ಹೇಳಿಕೆಯಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ದುಬೈಗೆ ಹೋಗುವಂತೆ ಸಲಹೆ ನೀಡಿದ್ದಾರೆ ಎಂದು  ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಎನ್‌ಡಿಟಿವಿ ವರದಿಯ ಪ್ರಕಾರ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಬೇಕಾಗಿರುವ ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣದ ಆರೋಪಿ ಶುಭಂ ಸೋನಿ ದುಬೈನಿಂದ ವಿಡಿಯೋ ವೈರಲ್‌ ಮಾಡಿದ್ದಾರೆ.

ವೀಡಿಯೊ ಸಂದೇಶದಲ್ಲಿ ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣದ ಪ್ರಮುಖ ಆರೋಪಿ ಹೇಳಿಕೆಯನ್ನು ನೀಡಿದ್ದು, ಬಂಧನಕ್ಕೆ ಸಂಬಂಧಿಸಿದಂತೆ ಸಹಾಯಕ್ಕಾಗಿ ಕಾಂಗ್ರೆಸ್ ನಾಯಕನನ್ನು ಸಂಪರ್ಕಿಸಿದಾಗ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ದುಬೈಗೆ ತೆರಳುವಂತೆ ಹೇಳಿದ್ದಾರೆ ಮತ್ತು ಅಲ್ಲಿ ಜೂಜಾಟವನ್ನು ಸ್ಥಾಪಿಸಲು ಪ್ರೋತ್ಸಾಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಯುಎಇ ಮೂಲದ ಮಹಾದೇವ್ ಆಪ್ ಪ್ರವರ್ತಕರಿಂದ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ 508 ಕೋಟಿ ರೂಪಾಯಿ ನಗದು ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಈ ಹಿಂದೆ ಹೇಳಿಕೊಂಡಿತ್ತು.

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೊಂದಿಗೆ ಸಭೆ ನಾನು ನಡೆಸಿದ್ದು, ಛತ್ತೀಸ್‌ಗಢ ಮುಖ್ಯಮಂತ್ರಿಯ ರಾಜಕೀಯ ಸಲಹೆಗಾರ ವಿನೋದ್ ವರ್ಮಾ ಅವರು ಸಭೆಯನ್ನು ಏರ್ಪಡಿಸಿದ್ದರು ಎಂದು ಶುಭಂ ಸೋನಿ ವಿಡಿಯೋ ಸಂದೇಶದಲ್ಲಿ ಆರೋಪಿಸಿದ್ದಾರೆ.

ಸೋನಿ ಮಾತು ಮುಂದುವರಿಸುತ್ತಾ, ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನ ಮಾಲೀಕ ನಾನೇ ಆಗಿದ್ದು, ಅದನ್ನು 2021ರಲ್ಲಿ ಸ್ಥಾಪಿಸಲಾಗಿದೆ. ಅದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿದ್ದಾರೆ.

ನಾನು 2021ರಲ್ಲಿ ಅಪ್ಲಿಕೇಶನನ್ನು ಪ್ರಾರಂಭಿಸಿದೆ ಮತ್ತು ಭಿಲಾಯ್‌ನಲ್ಲಿ ನನ್ನ ಜೂಜಿನ ವ್ಯವಹಾರವು ಉತ್ತಮವಾಗಿ ನಡೆಯುತ್ತಿತ್ತು. ಅದು ಚಿಕ್ಕದಾಗಿ ಪ್ರಾರಂಭವಾಯಿತು ಆದರೆ ದೊಡ್ಡದಾಗಿ ಬೆಳೆಯಿತು. ನಮ್ಮ ಬಳಿ ಹೆಚ್ಚು ಹಣ ಬಂದಿದೆ. ಕೆಲವು ಸಮಯ ವ್ಯವಹಾರ ಸುಗಮವಾಗಿ ನಡೆಯಿತು. ಆದರೆ ನಂತರ ನನ್ನ ಸ್ನೇಹಿತರು ತೊಂದರೆಗೆ ಸಿಲುಕಿದರು. ನಾನು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಮತ್ತು ವಿನೋದ್ ವರ್ಮಾ ಅವರನ್ನು ಭೇಟಿ ಮಾಡಿದ್ದೇನೆ ಮತ್ತು ನನ್ನ ವ್ಯವಹಾರವನ್ನು ದುಬೈಗೆ ವಿಸ್ತರಿಸಲು ಅವರು ನನಗೆ ಹೇಳಿದರು ಎಂದು ಅವರು ಹೇಳಿದ್ದಾರೆ.

ದುಬೈಗೆ ತೆರಳಿದ ನಂತರ ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಭಿಲಾಯ್‌ನ ಇಬ್ಬರು ವ್ಯಕ್ತಿಗಳೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದೇನೆ. ದುಬೈನಲ್ಲಿ ನನ್ನ ಜೂಜಾಟದ ವ್ಯವಹಾರವು ಉತ್ತಮವಾಗಿ ನಡೆಯುತ್ತಿರುವಾಗ, ಸಹಚರರು ಭಿಲಾಯ್‌ನಲ್ಲಿ ಬಂಧಿಸಲ್ಪಟ್ಟಿದ್ದರು. ಆದ್ದರಿಂದ ಮತ್ತೆ ಛತ್ತೀಸ್‌ಗಢಕ್ಕೆ ಬಂದು ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರವಾಲ್ ಅವರನ್ನು ಭೇಟಿಯಾದೆ. ಅವರು ಭಾಗೇಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡುಂತೆ ಹೇಳಿದ್ದರು ಮತ್ತು 508 ಕೋಟಿ ರೂ.ಕೊಡುವಂತೆ ಕೇಳಿದ್ದರು ಎಂದು ಹೇಳಿದ್ದಾರೆ.

508 ಕೋಟಿ ನೀಡುವುದರ ಜೊತೆಗೆ ಪ್ರಶಾಂತ್ ಜೀ ನನಗೆ ಹೇಳಿದ್ದನ್ನು ನಾನು ಮಾಡಿದ್ದೇನೆ ಆದರೂ ನಾನು ಇನ್ನೂ ಸಮಸ್ಯೆಗಳನ್ನು ಎದುರಿಸುತ್ತಿದ್ದೇನೆ. ನಾನು ನನ್ನ ಲಿಖಿತ ಹೇಳಿಕೆಯಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದೇನೆ. ರಾಜಕೀಯ ವ್ಯವಸ್ಥೆಯಲ್ಲಿನ ಈ ಪರಿಸ್ಥಿತಿಯಿಂದ ಭಾರತಕ್ಕೆ ಹಿಂತಿರುಗಿ ಬರಲು ನನಗೆ ಸಹಾಯ ಬೇಕು ಎಂದು ಅವರು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇದನ್ನು ಓದಿ: ರಾಜ್ಯಪಾಲರು ಬಿಲ್‌ಗೆ ಅಂಕಿತ ಹಾಕಲು ವಿಳಂಬದ ಬಗ್ಗೆ ಸುಪ್ರೀಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...