Homeಕರ್ನಾಟಕಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

- Advertisement -
- Advertisement -

ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ.

87ರ ಹರೆಯದ ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಚಂದ್ರೇಗೌಡ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.

1936ರಲ್ಲಿ ಜನಿಸಿದ ದಾರದಹಳ್ಳಿ ಬೈರೇಗೌಡ ಚಂದ್ರೇಗೌಡ ಅವರು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಬಿಎಸ್ಸಿ ಶಿಕ್ಷಣವನ್ನು ಮತ್ತು ಬೆಳಗಾವಿಯ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಎಲ್.ಎಲ್.ಬಿ. ಪದವಿ ಪಡೆದಿದ್ದರು. ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್‌, ಮೂರು ಅವಧಿಗೆ ಶಾಸಕ, ಒಂದು ಅವಧಿಗೆ ವಿಧಾನಪರಿಷತ್‌ ಸದಸ್ಯರಾಗಿ ಮತ್ತು 3 ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಡಿ.ಬಿ. ಚಂದ್ರೇಗೌಡ ಅವರು 1967ರವರೆಗೆ ಪ್ರಜಾ ಸೋಷಿಯಲಿಸ್ಟ್ ಪಕ್ಷದಲ್ಲಿದ್ದರು. 1971 ರಲ್ಲಿ ಅವರು  ಕಾಂಗ್ರೆಸ್ ಪಕ್ಷದಿಂದ ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಅವರು ಚಿಕ್ಕಮಗಳೂರಿನಿಂದ 6ನೇ ಲೋಕಸಭೆಗೆ ಮರು ಆಯ್ಕೆಯಾಗಿದ್ದರು. ಆದರೆ ಇಂದಿರಾ ಗಾಂಧಿಯವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಳಿಕ ವಿಧಾನ ಪರಿಷತ್ತಿನ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. 1980-81ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು.

1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಇವರು ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ 2ನೇ ಬಾರಿಗೆ ವಿಧಾನಸಭೆಗೆ ಪ್ರವೇಶ ಪಡೆದಿದ್ದರು.

1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ಆಯ್ಕೆಯಾಗಿ 1999ರಿಂದ 2004ರವರೆಗೆ ಎಸ್.ಎಂ. ಕೃಷ್ಣಾ ಅವರ ಸಂಪುಟದಲ್ಲಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. 2008ರಲ್ಲಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. 2009ರಲ್ಲಿ ಬಿಜೆಪಿಯಿಂದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...