Homeಕರ್ನಾಟಕಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

ಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

- Advertisement -
- Advertisement -

ಬೀದಿ ವ್ಯಾಪಾರಿಗಳಿಗೆ ಜಯನಗರ 4ನೇ ಬ್ಲಾಕ್‌ನಲ್ಲಿ ವ್ಯಾಪಾರ ಮಾಡದಂತೆ ಬಿ.ಬಿ.ಎಂ.ಪಿ ಮಾರ್ಷಲ್ ಗಳು ಹಾಗೂ ಅಧಿಕಾರಿಗಳು ಸೂಚಿಸಿ ಇಂದು ತೆರವು ಕಾರ್ಯಾಚರಣೆ ನಡೆಸಿದ್ದು, ಇದಕ್ಕೆ ಬೀದಿ ಬದಿ ವ್ಯಾಪಾರಿಗಳ ಸಂಘ ವಿರೋಧಿಸಿದೆ.

ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿ ವ್ಯಾಪಾರಿಗಳು ಸುಮಾರು 30-40 ವರ್ಷಗಳಿಂದ ಅಲ್ಲಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಅಲ್ಲಿ ಸುಮಾರು 400-500 ಬೀದಿ ವ್ಯಾಪಾರಿಗಳಿದ್ದಾರೆ. ಅವರಿಗೆ 2018ರಲ್ಲಿ ಬಿಬಿಎಂಪಿ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರವನ್ನು ನೀಡಿದೆ. ಆದರೆ ನ.4ರಂದು  ಬಿಬಿಎಂಪಿ ಮಾರ್ಷಲ್‌ಗಳು ಹಾಗೂ ಅಧಿಕಾರಿಗಳು ಬಂದು ನ.7ರ ಮಂಗಳವಾರದಿಂದ ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿಯಲ್ಲಿ ವ್ಯಾಪಾರ ಮಾಡಬಾರದು ಎಂದು ಸೂಚಿಸಿದ್ದಾರೆ.

ಈ ಬಗ್ಗೆ ಬೀದಿ ಬದಿ ವ್ಯಾಪಾರಿಗಳ ಸಂಘ ಪ್ರಕಟಣೆ ಹೊರಡಿಸಿದ್ದು, ನಮಗೆ ಬಹಳ ಆತಂಕವಾಗಿದೆ. ನಾವು ಯಾವುದೇ ಅಪರಾಧ ಮಾಡಿಲ್ಲ. ನಾವು ಬೀದಿ ವ್ಯಾಪಾರಿಗಳ ಕಾನೂನಿನ ಪ್ರಕಾರ ವ್ಯಾಪಾರ ಮಾಡುತ್ತಿದ್ದೇವೆ  ನಮ್ಮಿಂದ ತಪ್ಪಿದ್ದರೆ ದಯವಿಟ್ಟು ಸಭೆ ಕೆರೆದು ತಿಳಿಸಿ, ನಾವು ತಿದ್ದಿಕೊಳ್ಳುತ್ತೇವೆ. ಆದರೆ ಈ ರೀತಿ ದಿಡೀರ್‌ ಎತ್ತಂಗಡಿ ಮಾಡಿದರೆ ಹೇಗೆ? ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಕಲಾಂ 3(3)ರ ಪ್ರಕಾರ ಕಾನೂನಿನಡಿಯಲ್ಲಿ ಸಮೀಕ್ಷೆ ಮುಗಿದು ವ್ಯಾಪಾರ ಮಾಡುತ್ತಿರುವ ಎಲ್ಲಾ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡುವ ತನಕ ಯಾರಿಗೂ ಎತ್ತಂಗಡಿ ಮಾಡುವಂತಿಲ್ಲ. ಹಾಗೆಯೇ ಕಲಾಂ 18ರ ಪ್ರಕಾರ ಲಿಖಿತ ನೋಟಿಸ್ ನೀಡದೆ ಯಾರನ್ನು ಎತ್ತಂಗಡಿ ಮಾಡುವಂತಿಲ್ಲ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ವಿನಯ್‌, ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಎತ್ತಂಗಡಿಗೆ ಬಿಬಿಎಂಪಿ ಸೂಚಿಸಿದೆ. ನಾವು ಇದಕ್ಕೆ ವಿರೋಧವನ್ನು ಬಿಬಿಎಂಪಿಗೆ ಕಳುಹಿಸಿದ್ದೇವೆ. ಬೆಳಿಗ್ಗಿನಿಂದ ತೆರವು ಮಾಡುತ್ತಿದ್ದಾರೆ. ಯಾವುದೇ ಆದೇಶವಿಲ್ಲ. ಮೌಖಿಕವಾಗಿ ಮಾತ್ರವಾಗಿ ಹೇಳಲಾಗಿದೆ. ತುಂಬಾ ಜನ ಇಲ್ಲಿ ಒತ್ತುವರಿ ಮಾಡಿದ್ದಾರೆ ಎಂದು ಬಿಬಿಎಂಪಿ ಹೇಳುತ್ತಿದೆ. ಯಾಕೆ ಈ ಆದೇಶ ಮಾಡಿದ್ದಾರೆ ಎನ್ನವುದು ಸ್ಪಷ್ಟವಾಗಿ ಹೇಳುತ್ತಿಲ್ಲ. ಅಲ್ಲಿ ವ್ಯಾಪಾರ ಮಾಡುತಿದ್ದ ಎಲ್ಲಾ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮುಂದುವರಿಸಲು ಅವಕಾಶ ನೀಡಬೇಕು. ಬೀದಿ ವ್ಯಾಪಾರಕ್ಕೆ ತೊಂದರೆ ಆಗದ ರೀತಿ ಸೂಕ್ತ ಆದೇಶ ನೀಡಬೇಕು. ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಬಗ್ಗೆ ಬಿಬಿಎಂಪಿ
ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಕಾರ್ಯಾಗಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸುಬ್ರಮಣ್ಯ, ನಾವು 35-40ವರ್ಷಗಳಿಂದ ಇದೇ ಬೀದಿಯಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಇದೀಗ ದಿಡೀರ್‌ ನಮಗೆ ತೆರವಿಗೆ ಆದೇಶ ಬಂದಿದೆ. ಇಂದು ಬೆಳಿಗ್ಗಿನಿಂದಲೇ ತೆರವಿಗೆ ಬಂದಿದ್ದಾರೆ. 150ಕ್ಕೂ ಅಧಿಕ ವ್ಯಾಪಾರಿಗಳ ಜೀವನೋಪಾಯದ ಮೇಲೆ ಇದು ಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ನಾವು ಈ ಬಗ್ಗೆ ಸ್ಥಳೀಯ ಶಾಸಕರ ಬಳಿ ತೆರಳಿ ಸಮಸ್ಯೆ ಹೇಳಿದ್ದೇವೆ. ಅವರು ಸಮಸ್ಯೆ ಬಗೆಹರಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸೋಮನಾಥನ್, ನಾವು 40 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಹೂ, ಹಣ್ಣುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದೆವು. ಎಲ್ಲವನ್ನೂ ತೆಗೆದು ಎಸೆಯುತ್ತಿದ್ದಾರೆ. ನಾವು ಮತ ಹಾಕುವುದಿಲ್ಲ. ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೋರ್ಟ್‌ ಆದೇಶ ಎಂದು ಹೇಳುತ್ತಿದ್ದಾರೆ. ನಮ್ಮ ಸಮಸ್ಯೆ ಕೇಳುವವರು ಯಾರು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...