Homeಕರ್ನಾಟಕಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

ಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

- Advertisement -
- Advertisement -

ಬೀದಿ ವ್ಯಾಪಾರಿಗಳಿಗೆ ಜಯನಗರ 4ನೇ ಬ್ಲಾಕ್‌ನಲ್ಲಿ ವ್ಯಾಪಾರ ಮಾಡದಂತೆ ಬಿ.ಬಿ.ಎಂ.ಪಿ ಮಾರ್ಷಲ್ ಗಳು ಹಾಗೂ ಅಧಿಕಾರಿಗಳು ಸೂಚಿಸಿ ಇಂದು ತೆರವು ಕಾರ್ಯಾಚರಣೆ ನಡೆಸಿದ್ದು, ಇದಕ್ಕೆ ಬೀದಿ ಬದಿ ವ್ಯಾಪಾರಿಗಳ ಸಂಘ ವಿರೋಧಿಸಿದೆ.

ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿ ವ್ಯಾಪಾರಿಗಳು ಸುಮಾರು 30-40 ವರ್ಷಗಳಿಂದ ಅಲ್ಲಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಅಲ್ಲಿ ಸುಮಾರು 400-500 ಬೀದಿ ವ್ಯಾಪಾರಿಗಳಿದ್ದಾರೆ. ಅವರಿಗೆ 2018ರಲ್ಲಿ ಬಿಬಿಎಂಪಿ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರವನ್ನು ನೀಡಿದೆ. ಆದರೆ ನ.4ರಂದು  ಬಿಬಿಎಂಪಿ ಮಾರ್ಷಲ್‌ಗಳು ಹಾಗೂ ಅಧಿಕಾರಿಗಳು ಬಂದು ನ.7ರ ಮಂಗಳವಾರದಿಂದ ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿಯಲ್ಲಿ ವ್ಯಾಪಾರ ಮಾಡಬಾರದು ಎಂದು ಸೂಚಿಸಿದ್ದಾರೆ.

ಈ ಬಗ್ಗೆ ಬೀದಿ ಬದಿ ವ್ಯಾಪಾರಿಗಳ ಸಂಘ ಪ್ರಕಟಣೆ ಹೊರಡಿಸಿದ್ದು, ನಮಗೆ ಬಹಳ ಆತಂಕವಾಗಿದೆ. ನಾವು ಯಾವುದೇ ಅಪರಾಧ ಮಾಡಿಲ್ಲ. ನಾವು ಬೀದಿ ವ್ಯಾಪಾರಿಗಳ ಕಾನೂನಿನ ಪ್ರಕಾರ ವ್ಯಾಪಾರ ಮಾಡುತ್ತಿದ್ದೇವೆ  ನಮ್ಮಿಂದ ತಪ್ಪಿದ್ದರೆ ದಯವಿಟ್ಟು ಸಭೆ ಕೆರೆದು ತಿಳಿಸಿ, ನಾವು ತಿದ್ದಿಕೊಳ್ಳುತ್ತೇವೆ. ಆದರೆ ಈ ರೀತಿ ದಿಡೀರ್‌ ಎತ್ತಂಗಡಿ ಮಾಡಿದರೆ ಹೇಗೆ? ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಕಲಾಂ 3(3)ರ ಪ್ರಕಾರ ಕಾನೂನಿನಡಿಯಲ್ಲಿ ಸಮೀಕ್ಷೆ ಮುಗಿದು ವ್ಯಾಪಾರ ಮಾಡುತ್ತಿರುವ ಎಲ್ಲಾ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡುವ ತನಕ ಯಾರಿಗೂ ಎತ್ತಂಗಡಿ ಮಾಡುವಂತಿಲ್ಲ. ಹಾಗೆಯೇ ಕಲಾಂ 18ರ ಪ್ರಕಾರ ಲಿಖಿತ ನೋಟಿಸ್ ನೀಡದೆ ಯಾರನ್ನು ಎತ್ತಂಗಡಿ ಮಾಡುವಂತಿಲ್ಲ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ವಿನಯ್‌, ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಎತ್ತಂಗಡಿಗೆ ಬಿಬಿಎಂಪಿ ಸೂಚಿಸಿದೆ. ನಾವು ಇದಕ್ಕೆ ವಿರೋಧವನ್ನು ಬಿಬಿಎಂಪಿಗೆ ಕಳುಹಿಸಿದ್ದೇವೆ. ಬೆಳಿಗ್ಗಿನಿಂದ ತೆರವು ಮಾಡುತ್ತಿದ್ದಾರೆ. ಯಾವುದೇ ಆದೇಶವಿಲ್ಲ. ಮೌಖಿಕವಾಗಿ ಮಾತ್ರವಾಗಿ ಹೇಳಲಾಗಿದೆ. ತುಂಬಾ ಜನ ಇಲ್ಲಿ ಒತ್ತುವರಿ ಮಾಡಿದ್ದಾರೆ ಎಂದು ಬಿಬಿಎಂಪಿ ಹೇಳುತ್ತಿದೆ. ಯಾಕೆ ಈ ಆದೇಶ ಮಾಡಿದ್ದಾರೆ ಎನ್ನವುದು ಸ್ಪಷ್ಟವಾಗಿ ಹೇಳುತ್ತಿಲ್ಲ. ಅಲ್ಲಿ ವ್ಯಾಪಾರ ಮಾಡುತಿದ್ದ ಎಲ್ಲಾ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮುಂದುವರಿಸಲು ಅವಕಾಶ ನೀಡಬೇಕು. ಬೀದಿ ವ್ಯಾಪಾರಕ್ಕೆ ತೊಂದರೆ ಆಗದ ರೀತಿ ಸೂಕ್ತ ಆದೇಶ ನೀಡಬೇಕು. ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಬಗ್ಗೆ ಬಿಬಿಎಂಪಿ
ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಕಾರ್ಯಾಗಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸುಬ್ರಮಣ್ಯ, ನಾವು 35-40ವರ್ಷಗಳಿಂದ ಇದೇ ಬೀದಿಯಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಇದೀಗ ದಿಡೀರ್‌ ನಮಗೆ ತೆರವಿಗೆ ಆದೇಶ ಬಂದಿದೆ. ಇಂದು ಬೆಳಿಗ್ಗಿನಿಂದಲೇ ತೆರವಿಗೆ ಬಂದಿದ್ದಾರೆ. 150ಕ್ಕೂ ಅಧಿಕ ವ್ಯಾಪಾರಿಗಳ ಜೀವನೋಪಾಯದ ಮೇಲೆ ಇದು ಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ನಾವು ಈ ಬಗ್ಗೆ ಸ್ಥಳೀಯ ಶಾಸಕರ ಬಳಿ ತೆರಳಿ ಸಮಸ್ಯೆ ಹೇಳಿದ್ದೇವೆ. ಅವರು ಸಮಸ್ಯೆ ಬಗೆಹರಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸೋಮನಾಥನ್, ನಾವು 40 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಹೂ, ಹಣ್ಣುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದೆವು. ಎಲ್ಲವನ್ನೂ ತೆಗೆದು ಎಸೆಯುತ್ತಿದ್ದಾರೆ. ನಾವು ಮತ ಹಾಕುವುದಿಲ್ಲ. ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೋರ್ಟ್‌ ಆದೇಶ ಎಂದು ಹೇಳುತ್ತಿದ್ದಾರೆ. ನಮ್ಮ ಸಮಸ್ಯೆ ಕೇಳುವವರು ಯಾರು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...