Homeಮುಖಪುಟಗಾಝಾಕ್ಕೆ ವೈದ್ಯಕೀಯ ನೆರವು ರವಾನಿಸಿದ ಜೋರ್ಡಾನ್‌

ಗಾಝಾಕ್ಕೆ ವೈದ್ಯಕೀಯ ನೆರವು ರವಾನಿಸಿದ ಜೋರ್ಡಾನ್‌

- Advertisement -
- Advertisement -

ಗಾಝಾದಲ್ಲಿರುವ ಆಸ್ಪತ್ರೆಗೆ ತುರ್ತು ವೈದ್ಯಕೀಯ ಸಹಾಯವನ್ನು ಜೋರ್ಡಾನ್‌ನ ಕಿಂಗ್ ಅಬ್ದುಲ್ಲಾ II ಘೋಷಿಸಿದ್ದು, ವಾಯುಪಡೆಯು ಮೂಲಕ ವೈದ್ಯಕೀಯ ನೆರವನ್ನು ಕಳುಹಿಸಿಕೊಟ್ಟಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿದ ಜೋರ್ಡಾನ್‌ನ ಕಿಂಗ್ ಅಬ್ದುಲ್ಲಾ II, ವಾಯುಪಡೆಯ ಸಿಬ್ಬಂದಿಗಳು ಮಧ್ಯರಾತ್ರಿಯಲ್ಲಿ ಗಾಝಾದ ಆಸ್ಪತ್ರೆಗೆ ತುರ್ತು ವೈದ್ಯಕೀಯ ನೆರವು ರವಾನಿಸಿದ್ದಾರೆ. ಗಾಝಾದಲ್ಲಿನ ಯುದ್ಧದಲ್ಲಿ ಗಾಯಗೊಂಡ ನಮ್ಮ ಸಹೋದರ ಸಹೋದರಿಯರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯವಾಗಿದೆ. ನಾವು ನಮ್ಮ ಪ್ಯಾಲೆಸ್ತೀನ್ ಸಹೋದರರಿಗೆ ಸಹಾಯ ಮಾಡಲು ಸದಾ ಸಿದ್ದರಾಗಿದ್ದೇವೆ ಎಂದು ಹೇಳಿದ್ದಾರೆ.

ನ.1ರಂದು ಜೋರ್ಡಾನ್ ದೇಶವು ಗಾಝಾದ ಮೇಲೆ ನಡೆಯುತ್ತಿರುವ ದಾಳಿಯನ್ನು ಪ್ರತಿಭಟಿಸಿ ಇಸ್ರೇಲ್‌ನಿಂದ ತನ್ನ ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಅಯ್ಮನ್ ಸಫಾದಿ, ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿರುವುದು ಗಾಝಾದ ಮೇಲಿನ ಯುದ್ಧ ನಿಲುಗಡೆಗೆ ಸಂಬಂಧಿಸಿದೆ. ಪ್ಯಾಲೆಸ್ತೀನಿಯಾದ ಜನರ ಆಹಾರ, ನೀರು, ಔಷಧಿಗಳ ಹಕ್ಕನ್ನು ಕಸಿದುಕೊಂಡ ಕ್ರಮಗಳಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ಗಾಝಾದಲ್ಲಿನ ಸಂಘರ್ಷವನ್ನು ಕೊನೆಗೊಳಿಸಲು ಜೋರ್ಡಾನ್ ಕೆಲಸ ಮಾಡುವುದನ್ನು ಮುಂದುವರಿಸಲಿದೆ.  ಮಾನವೀಯ ನೆರವು ನೀಡಲು, ನಾಗರಿಕರನ್ನು ರಕ್ಷಿಸಲು ಜೋರ್ಡಾನ್ ಸದಾ ಬದ್ಧವಾಗಿದೆ ಎಂದು ಸಫಾದಿ  ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧವು  30ನೇ ದಿನಕ್ಕೆ ಕಾಲಿಟ್ಟಿದೆ. ಗಾಝಾ ಪಟ್ಟಿಯಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 9,770ಕ್ಕೂ ಅಧಿಕವಾಗಿದೆ. ಬಲಿಯಾದವರಲ್ಲಿ 4,008 ಮಕ್ಕಳು ಮತ್ತು 2,550 ಮಹಿಳೆಯರು ಸೇರಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ಇತ್ತೀಚಿನ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿ ತಿಳಿಸಿದೆ.

ಇಸ್ರೇಲ್‌ ಅಧಿಕಾರಿಗಳ ಪ್ರಕಾರ, ಇಸ್ರೇಲ್‌ನಲ್ಲಿ ಈವರೆಗೆ 1400ಜನರು ಮೃತಪಟ್ಟಿದ್ದಾರೆ. ಮತ್ತು ವಿದೇಶಿ ಪ್ರಜೆಗಳು ಸೇರಿದಂತೆ 242 ಜನರು ಗಾಝಾದಲ್ಲಿ ಬಂಧಿತರಾಗಿದ್ದಾರೆ. ಇಲ್ಲಿಯವರೆಗೆ ನಾಲ್ಕು ನಾಗರಿಕ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ ಮತ್ತು ಒಬ್ಬ ಮಹಿಳಾ ಸೈನಿಕರನ್ನು ಇಸ್ರೇಲ್‌ ಪಡೆಗಳು ರಕ್ಷಿಸಿವೆ. ಒತ್ತೆಯಾಳುಗಳಲ್ಲಿ 57 ಮಂದಿ ಇಸ್ರೇಲ್‌ ವೈಮಾನಿಕ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿಕೊಂಡಿದೆ. ಭಾನುವಾರ ಗಾಝಾದಲ್ಲಿ ಒಬ್ಬ ಇಸ್ರೇಲ್‌ ಸೈನಿಕನನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಕೊಲ್ಲಲ್ಪಟ್ಟ ಒಟ್ಟು ಸೈನಿಕರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಇದನ್ನು ಓದಿ: 29ನೇ ದಿನಕ್ಕೆ ಕಾಲಿಟ್ಟ ಯುದ್ಧ; ಇಸ್ರೇಲ್‌ನಿಂದ ಗಾಝಾದಲ್ಲಿ 9,770 ನಾಗರಿಕರ ಹತ್ಯೆ; ಮೃತರಲ್ಲಿ ಹೆಚ್ಚಿನವರು ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...