Homeಮುಖಪುಟಛತ್ತೀಸ್‌ಗಢದಲ್ಲಿ ಮತದಾನ: 2 ಕಡೆಗಳಲ್ಲಿ ಐಇಡಿ ಸ್ಪೋಟ; ಚುನಾವಣಾ ಸಿಬ್ಬಂದಿಗಳಿಗೆ ಗಾಯ

ಛತ್ತೀಸ್‌ಗಢದಲ್ಲಿ ಮತದಾನ: 2 ಕಡೆಗಳಲ್ಲಿ ಐಇಡಿ ಸ್ಪೋಟ; ಚುನಾವಣಾ ಸಿಬ್ಬಂದಿಗಳಿಗೆ ಗಾಯ

- Advertisement -
- Advertisement -

ಛತ್ತೀಸ್‌ಗಢದಲ್ಲಿ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, 2 ದಿನಗಳಲ್ಲಿ ಎರಡು ಕಡೆಗಳಲ್ಲಿ ಸ್ಪೋಟ ಸಂಭವಿಸಿದೆ. ಸುಕ್ಮಾ ಜಿಲ್ಲೆಯಲ್ಲಿ ಇಂದು ಮತದಾನ ಆರಂಭವಾದ ಬೆನ್ನಲ್ಲೇ ಸುಧಾರಿತ ಸ್ಫೋಟಕ ಸಾಧನ ಐಇಡಿ ಸ್ಫೋಟ ಸಂಭವಿಸಿದ್ದು ಚುನಾವಣಾ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಯೋಧ ಗಾಯಗೊಂಡಿದ್ದಾರೆ.

ಸುಕ್ಮಾದ ಹಿರಿಯ ಪೊಲೀಸ್ ಅಧಿಕಾರಿ ಕಿರಣ್ ಚವಾಣ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಸ್ಪೋಟದಲ್ಲಿ ಗಾಯಗೊಂಡ ಯೋಧನನ್ನು ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಅವರು ಪ್ರಥಮ ಚಿಕಿತ್ಸೆ ಪಡೆದು ಸುರಕ್ಷಿತವಾಗಿದ್ದಾರೆ. ಜವಾನ ಕೋಬ್ರಾ ಬೆಟಾಲಿಯನ್‌ನವರಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ಹೇಳಿದ್ದಾರೆ.

ಕೋಬ್ರಾ 206 ಮತ್ತು ಸಿಆರ್‌ಪಿಎಫ್ ಸಿಬ್ಬಂದಿ  ತೊಂಡಮಾರ್ಕಾದಿಂದ ಎಲ್ಮಗುಂದ ಗ್ರಾಮಕ್ಕೆ ಗಸ್ತು ತಿರುಗುತ್ತಿದ್ದಾಗ ನಕ್ಸಲರು ಅಳವಡಿಸಿದ್ದ ಐಇಡಿಯನ್ನು ತುಳಿದು ಕಾಲಿಗೆ ಗಾಯವಾಗಿದೆ. ಎರಡು ದಿನಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಎರಡನೇ ಐಇಡಿ ಸ್ಫೋಟ ಇದಾಗಿದೆ.

ನಿನ್ನೆ ಕಂಕೇರ್‌ನಲ್ಲಿ ಐಇಡಿ ಸ್ಫೋಟದಲ್ಲಿ ಬಿಎಸ್‌ಎಫ್ ಪೇದೆ ಮತ್ತು ಚುನಾವಣಾ ಕರ್ತವ್ಯ ನಿರತ ತಂಡದ ಸದಸ್ಯರು ಗಾಯಗೊಂಡಿದ್ದರು. ಗಾಯಗೊಂಡ ಪೇದೆಯನ್ನು ಪ್ರಕಾಶ್ ಚಂದ್ ಎಂದು ಗುರುತಿಸಲಾಗಿದ್ದು, ಅವರ ಕಾಲುಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಛೋಟೆಪೇಥಿಯಾಗೆ ರವಾನಿಸಲಾಗಿದೆ.

ಛತ್ತೀಸ್‌ಗಢದಲ್ಲಿ ಅತಿ ಸೂಕ್ಷ್ಮವೆಂದು ಪರಿಗಣಿತ ಬಸ್ತಾರ್ ಕ್ಷೇತ್ರ ಸೇರಿದಂತೆ 20 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಸುಗಮ ಮತದಾನಕ್ಕೆ 20 ಕ್ಷೇತ್ರಗಳ ಸೂಕ್ಷ್ಮ ಪ್ರದೇಶಗಳಲ್ಲಿನ 600ಕ್ಕೂ ಹೆಚ್ಚು ಮತಗಟ್ಟೆಗಳಿಗೆ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ ನ. 17 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಡಿ. 3 ರಂದು ಇತರ ನಾಲ್ಕು ರಾಜ್ಯಗಳೊಂದಿಗೆ ಮತ ಎಣಿಕೆ ನಡೆಯಲಿದೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...