Homeಕರ್ನಾಟಕಕೆಇಎ ಪರೀಕ್ಷಾ ಅವ್ಯವಹಾರ: ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಪರಾರಿ

ಕೆಇಎ ಪರೀಕ್ಷಾ ಅವ್ಯವಹಾರ: ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಪರಾರಿ

- Advertisement -
- Advertisement -

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪರೀಕ್ಷಾ ಅವ್ಯವಹಾರದ ಪ್ರಮುಖ ಆರೋಪಿ, ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಸೋಮವಾರ ಕಲಬುರಗಿ ನಗರದ ವಸತಿ ಸಮಚ್ಚಯವೊಂದರಿಂದ ಪರಾರಿಯಾಗಿದ್ದಾನೆ.

ಅಭ್ಯರ್ಥಿಗಳಿಗೆ ಬ್ಲೂಟೂತ್ ಸಾಧನವನ್ನು ಬಳಸಿಕೊಂಡು ಉತ್ತರಗಳನ್ನು ಬರೆಯಲು ಸಹಾಯ ಮಾಡಿದ ಆರೋಪ ಈತನ ಮೇಲಿದೆ. ಪಾಟೀಲ್ ಮನೆಯೊಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಸುಳಿವು ಸಿಕ್ಕ ನಂತರ ಪೊಲೀಸ್ ಅಧಿಕಾರಿಗಳು ಜೇವರ್ಗಿ ರಸ್ತೆಯಲ್ಲಿರುವ ವಸತಿ ಬಡಾವಣೆಗೆ ತೆರಳಿದ್ದರು. ಪೊಲೀಸರು ಬರುತ್ತಿರುವುದನ್ನು ಗಮನಿಸಿದ ಆರ್.ಡಿ. ಪಾಟೀಲ್ ವಸತಿ ಸಮುಚ್ಚಯದ ಕಾಂಪೌಂಡ್ ಮೇಲಿಂದ ತಪ್ಪಿಸಿಕೊಂಡು ಹೋಗಿದ್ದಾನೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಅ.28ರಂದು ಕೆಇಎ ನೇಮಕಾತಿ ಪರೀಕ್ಷೆ ನಡೆಯಿತು. ಅಫಜಲಪುರ, ಕಲಬುರಗಿ ನಗರದ ಕೆಲವು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಅಕ್ರಮವಾಗಿ ಬ್ಲೂಟೂತ್ ಡಿವೈಸ್ ಬಳಸಲು ಯತ್ನಿಸಿ ಬಂಧಿತರಾಗಿದ್ದಾರೆ. ಈ ಅಭ್ಯರ್ಥಿಗಳಿಗೆ ಬ್ಲೂಟೂತ್ ಪೂರೈಸಲು ಆರ್.ಡಿ. ಪಾಟೀಲ್‌ ಹಣ ಪಡೆದು ಡೀಲ್ ಮಾಡಿಕೊಂಡಿದ್ದ ಎಂಬ ಆರೋಪ ಇದೆ. ಬ್ಲೂಟೂತ್ ಪ್ರಕರಣ ಹೊರಬರುತ್ತಿದ್ದಂತೆ ಆರ್‌.ಡಿ. ಪಾಟೀಲ್‌ ತಲೆಮರೆಸಿಕೊಂಡಿದ್ದ.

ನ.19ರಂದು ನಡೆಯುವ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆಗೂ ಅಭ್ಯರ್ಥಿಗಳೊಂದಿಗೆ ಆರ್.ಡಿ.ಪಾಟೀಲ್‌ ಒಪ್ಪಂದ ಮಾಡಿಕೊಂಡಿದ್ದ ಎನ್ನಲಾಗಿದೆ. ಅಭ್ಯರ್ಥಿಗಳಿಗೆ ಬ್ಲೂಟೂತ್ ವ್ಯವಸ್ಥೆ ಮಾಡಿಕೊಡಲು ಕಲಬುರಗಿ ನಗರಕ್ಕೆ ಬಂದು ವಸತಿ ಸಮುಚ್ಚಯ ಒಂದರಲ್ಲಿ ತಂಗಿದ್ದ. ಖಚಿತ ಮಾಹಿತಿ ತಿಳಿದು ಪೊಲೀಸರು ವಸತಿ ಸಮುಚ್ಚಯಕ್ಕೆ ಬರುತ್ತಿದ್ದಂತೆ ಆರ್.ಡಿ. ಪಾಟೀಲ್‌ ಅಲ್ಲಿಂದ ಪರಾರಿ‌ಯಾಗಿದ್ದಾನೆ.

ವಸತಿ ಸಮುಚ್ಚಯ ಹಿಂಭಾಗದ ಕಾಂಪೌಂಡ್ ಗೇಟ್ ಹತ್ತಿ ಇಳಿಯುವಾಗ ಕಾಲಿನಿಂದ ಈತನ ಬೂಟ್ ಕಳಚಿ ಬಿದ್ದಿದೆ. ಬೂಟ್ ಎತ್ತಿಕೊಡುವಂತೆ ಅಲ್ಲಿಯೇ ಇದ್ದ ಮಹಿಳೆಯೊಬ್ಬರಿಗೆ ಕೇಳಿದ್ದಾನೆ. ಮಹಿಳೆ ಇದಕ್ಕೆ ಸ್ಪಂದಿಸಿಲ್ಲ. ಬಳಿಕ ಮತ್ತೊಬ್ಬ ಮಹಿಳೆ ಬರುತ್ತಿದ್ದಂತೆ ಆರ್.ಡಿ. ಪಾಟೀಲ್‌ ಸ್ಥಳದಿಂದ ಪರಾರಿಯಾಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕಳೆದ ಒಂದು ವಾರದಿಂದ ಆರ್.ಡಿ.ಪಾಟೀಲ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈಗಾಗಲೇ 20 ಆರೋಪಿಗಳ ಬಂಧನವಾಗಿದೆ. ಆರ್‌.ಡಿ. ಪಾಟೀಲ್‌ ಬಗ್ಗೆ ಖಚಿತ ಮಾಹಿತಿ ಇದ್ದರೂ ಅಧಿಕಾರಿಗಳು ಕರ್ತವ್ಯದಲ್ಲಿ ಲೋಪ ಎಸಗಿರವುದು ಕಂಡುಬಂದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...