Homeಮುಖಪುಟಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

ಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

- Advertisement -
- Advertisement -

ಬಿಹಾರದಲ್ಲಿ ಮೂರನೇ ಒಂದು ಭಾಗಕ್ಕಿಂತಲೂ ಹೆಚ್ಚು ಕುಟುಂಬಗಳು ಬಡತನದಲ್ಲಿ ವಾಸಿಸುತ್ತಿದ್ದು, ಮಾಸಿಕ 6,000 ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದಿದೆ ಎಂದು ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಜಾತಿಗಣತಿಯ ವಿವರವಾದ ವರದಿಯಲ್ಲಿ ತಿಳಿಸಲಾಗಿದೆ.

ವರದಿಯು ಮೇಲ್ಜಾತಿಗಳಲ್ಲಿ ಬಡತನ ಇರುವುದು ಒಪ್ಪಿಕೊಂಡಿದೆ. ಆದರೆ ಶೇಕಡಾವಾರು ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರಲ್ಲಿ ಬಡತನ ಹೆಚ್ಚಾಗಿದೆ ಎನ್ನುವುದು ಬಯಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಅವರು ಮಂಡಿಸಿದ ವರದಿಯ ಪ್ರಕಾರ, ರಾಜ್ಯದಲ್ಲಿ ಸುಮಾರು 2.97 ಕೋಟಿ ಕುಟುಂಬಗಳು ನೆಲೆಸಿದೆ. ಅದರಲ್ಲಿ 94 ಲಕ್ಷಕ್ಕೂ ಹೆಚ್ಚು ಕುಟುಂಬ (ಶೇ 34.13) ಬಡತನದಲ್ಲಿದೆ.

ಜಾತಿಗಣತಿಯಲ್ಲಿ ಪತ್ತೆಯಾದ ಮತ್ತೊಂದು ಪ್ರಮುಖ ಸಂಶೋಧನೆಯೆಂದರೆ 50 ಲಕ್ಷಕ್ಕೂ ಹೆಚ್ಚು ಬಿಹಾರದ ಜನರು ಜೀವನೋಪಾಯಕ್ಕಾಗಿ ಅಥವಾ ಉತ್ತಮ ಶಿಕ್ಷಣಕ್ಕಾಗಿ ರಾಜ್ಯದ ಹೊರಗೆ ವಾಸಿಸುತ್ತಿದ್ದಾರೆ. ಇತರ ರಾಜ್ಯಗಳಲ್ಲಿ ಜೀವನ ಸಾಗಿಸುತ್ತಿರುವವರು ಸುಮಾರು 46 ಲಕ್ಷದಷ್ಟಿದ್ದರೆ. 2.17 ಲಕ್ಷ ಜನರು ವಿದೇಶದಲ್ಲಿ ಇದ್ದಾರೆ.

ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಸುಮಾರು 5.52 ಲಕ್ಷದಷ್ಟಿದ್ದರೆ, ಸುಮಾರು 27,000 ಮಂದಿ ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಮಂಡಿಸಲಾದ ವಿವರಗಳಲ್ಲಿ ಮೇಲ್ಜಾತಿಗಳಲ್ಲಿ ಬಡತನದ ಪ್ರಮಾಣವು ಶೇ.25ಕ್ಕಿಂತ ಹೆಚ್ಚು ಎಂದು ಹೇಳಲಾಗಿದೆ.

ಅ.2ರಂದು ಜಾತಿಗಣತಿಯ ಪ್ರಾಥಮಿಕ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಜಾತಿಗಣತಿ ನಡೆಸಲು ಕೇಂದ್ರವು ಹಿಂದೇಟು ಹಾಕಿರುವ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಸರ್ಕಾರವು ಈ ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯಲ್ಲಿ ಒಬಿಸಿಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿಗಳು) ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 60ಕ್ಕಿಂತ ಹೆಚ್ಚು ಇದ್ದಾರೆ ಎಂದು ತಿಳಿಸಿತ್ತು.

ಬಿಹಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯವಾಗಿದೆ. ವರದಿಯಲ್ಲಿ ಒಟ್ಟು ಜನಸಂಖ್ಯೆಯಲ್ಲಿ 6,41,31,992 ಪುರುಷರು, 6,11,38,460 ಮಹಿಳೆಯರು, 2,836 ತೃತಿಯ ಲಿಂಗಿಗಳಿದ್ದಾರೆ. ಇದರಲ್ಲಿ 19ರಷ್ಟು ಜನರನ್ನು ಪರಿಶಿಷ್ಟ ಜಾತಿ, 1.68% ಪರಿಶಿಷ್ಟ ಪಂಗಂಡ, 27.12% ಒಬಿಸಿ, 36.01% ಇಬಿಸಿ ಜನರಿದ್ದಾರೆ.

ಭೂಮಿಹಾರ್ ಜನಸಂಖ್ಯೆ ಶೇಕಡಾ 2.86ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3ರಷ್ಟಿದ್ದಾರೆ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಮುದಾಯಕ್ಕೆ ಸೇರಿದ ಯಾದವರು ಜನಸಂಖ್ಯೆಯ ಶೇಕಡಾ 14ರಷ್ಟಿದ್ದಾರೆ ಎಂದು ವರದಿ ತಿಳಿಸಿತ್ತು.

ಇದನ್ನು ಓದಿ: ಪುತ್ತೂರು: ಪ್ರಖ್ಯಾತ ಹುಲಿ ವೇಷ ಕುಣಿತ ತಂಡದ ಸದಸ್ಯನ ಬರ್ಬರ ಕೊಲೆ: ಆರೋಪಿಗಳು ಪೊಲೀಸ್‌ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...