Homeಮುಖಪುಟರಶ್ಮಿಕಾ ಮಂದಣ್ಣರ ಡೀಪ್‌ಫೇಕ್ ವಿಡಿಯೋ: ಅಸಲಿ ಯುವತಿಯ ಪ್ರತಿಕ್ರಿಯೆ ಇಲ್ಲಿದೆ..

ರಶ್ಮಿಕಾ ಮಂದಣ್ಣರ ಡೀಪ್‌ಫೇಕ್ ವಿಡಿಯೋ: ಅಸಲಿ ಯುವತಿಯ ಪ್ರತಿಕ್ರಿಯೆ ಇಲ್ಲಿದೆ..

- Advertisement -
- Advertisement -

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸೋಮವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋಗೆ ಸಂಬಂಧಪಟ್ಟಂತೆ ವಿಡಿಯೊದಲ್ಲಿರುವ ನಿಜವಾದ ಯುವತಿ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.

ಝಾರಾ ಪಟೇಲ್ ಎಂಬ ಯುವತಿ ಲಿಫ್ಟ್‌ನಲ್ಲಿ ಪ್ರವೇಶ ಮಾಡುತ್ತಿರುವ ವಿಡಿಯೊ ಇಟ್ಟುಕೊಂಡು ಯಾರೊ ಕಿಡಿಗೇಡಿಗಳು, ರಶ್ಮಿಕಾ ಮಂದಣ್ಣ ಮುಖ ಜೋಡಿಸಿ ವಿಡಿಯೊ ಮಾಡಿ ಹರಿಬಿಟ್ಟಿದ್ದರು. ಈ ವಿಡಿಯೋ ನೋಡಿದ ಎಷ್ಟೋ ಜನರು ಇದು ನಿಜವಾಗಿಯೂ ರಶ್ಮಿಕಾ ಮಂದಣ್ಣ ಅವರದ್ದೇ ವಿಡಿಯೋ ಎಂದು ನಂಬಿಕೊಂಡಿದ್ದರು. ಆದರೆ ಈ ಫೇಕ್​ ವಿಡಿಯೋ ವಿರುದ್ಧ ಅನೇಕರು ಕಿಡಿಕಾರಿದ್ದಾರೆ.

ತಂತ್ರಜ್ಞಾನದ ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮತ್ತು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಇಬ್ಬರೂ ಅಪರಾಧಿಗಳ ವಿರುದ್ಧ ಕಾನೂನು ಕ್ರಮಕ್ಕೆ ಕರೆ ನೀಡಿದ್ದರು.

ಇದೊಂದು ಡೀಪ್‌ಫೇಕ್ ವಿಡಿಯೊ ಆಗಿದ್ದು ಹೊರದೇಶದಲ್ಲಿರುವ ಭಾರತೀಯ ಮೂಲದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೇನ್ಸರ್‌ ಝಾರಾ ಪಟೇಲ್ ಎನ್ನುವ ಯುವತಿಗೆ ಸಂಬಂಧಿಸಿದ್ದು ಎಂದು ಬಹಿರಂಗವಾಗಿದೆ.

ಝಾರಾ ಪಟೇಲ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೊ ಬಗ್ಗೆ ಆಘಾತ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡಿದ್ದು, ”ವಿಡಿಯೊ ನೋಡಿ ನನ್ನ ಮನಸ್ಸು ತೀವ್ರ ಆಘಾತಗೊಂಡಿದೆ” ಎಂದು ಹೇಳಿದ್ದಾರೆ.

”ಸಾಮಾಜಿಕ ಮಾಧ್ಯಮಗಳಲ್ಲಿ ಮಹಿಳೆಯರು ಮತ್ತು ಯುವತಿಯರ ಭವಿಷ್ಯದ ಬಗೆಗಿನ ಚಿಂತೆಯನ್ನು ಈ ವಿಡಿಯೊ ಹುಟ್ಟುಹಾಕಿದೆ. ಭವಿಷ್ಯ ನೋಡಿದರೆ ತುಂಬಾ ಭಯವಾಗುತ್ತಿದೆ” ಎಂದಿದ್ದಾರೆ.

”ನನ್ನ ವಿಡಿಯೋಗೆ ಭಾರತದ ಜನಪ್ರಿಯ ನಟಿಯೊಬ್ಬರ ಮುಖವನ್ನು ಡೀಪ್‌ಫೇಕ್ ಮಾಡಿ ವಿಡಿಯೊ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಡೀಪ್‌ಫೇಕ್‌ ಮಾಡಿರುವುದರಲ್ಲಿ ನನ್ನ ಪಾತ್ರವಿಲ್ಲ. ಇಂಟರ್‌ನೆಟ್‌ನಲ್ಲಿರುವುದೆಲ್ಲ ನಿಜವಲ್ಲ. ಅನುಮಾನ ಬರುವ ವಿಷಯಗಳನ್ನು ದಯವಿಟ್ಟು ಫ್ಯಾಕ್ಟ್ ಚೆಕ್‌ಗೆ ಒಳಪಡಿಸಿ” ಎಂದು ಮನವಿ ಮಾಡಿದ್ದಾರೆ.

ಝಾರಾ ಪಟೇಲ್ ಅವರು ಲಂಡನ್‌ನಲ್ಲಿ ಇರುವ ಒಬ್ಬ ಬ್ರಿಟಿಷ್ ಇಂಡಿಯನ್ ಇನ್‌ಫ್ಲುಯೆನ್ಸರ್ ಆಗಿದ್ದು ಇವರಿಗೆ ಇನ್‌ಸ್ಟಾಗ್ರಾಂನಲ್ಲಿ 4.5 ಲಕ್ಷಕ್ಕೂ ಅಧಿಕ ಫಾಲೋವರ್‌ಗಳು ಇದ್ದಾರೆ.

ಇದನ್ನೂ ಓದಿ: ‘ರಶ್ಮಿಕಾ ಮಂದಣ್ಣ’ರ ಡೀಪ್‌ಫೇಕ್‌ ವಿಡಿಯೋ ಡಿಲೀಟ್ ಮಾಡಲು ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರದ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...