Homeಮುಖಪುಟಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

- Advertisement -
- Advertisement -

ಅಲಹಾಬಾದ್ ಮತ್ತು ಫೈಜಾಬಾದ್‌ ಬಳಿಕ ಇದೀಗ ಉತ್ತರ ಪ್ರದೇಶದ ಮತ್ತೊಂದು ಪ್ರಮುಖ ನಗರದ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ. ಅಲಿಘರ್ ಮುನ್ಸಿಪಲ್ ಕಾರ್ಪೊರೇಷನ್ ನಗರದ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

ನಿನ್ನೆ ನಡೆದ ಸಭೆಯಲ್ಲಿ ಮೇಯರ್ ಪ್ರಶಾಂತ್ ಸಿಂಘಾಲ್ ಪ್ರಸ್ತಾವನೆ ಸಲ್ಲಿಸಿದ್ದು, ಎಲ್ಲಾ ಕೌನ್ಸಿಲರ್‌ಗಳು ಪ್ರಸ್ತಾವನೆಗೆ ಬೆಂಬಲಿಸಿದ್ದಾರೆ. ಈ ಪ್ರಸ್ತಾವನೆಗೆ ಉತ್ತರಪ್ರದೇಶ ಸರ್ಕಾರ ಅನುಮೋದನೆ ನೀಡಿದರೆ ಯೋಗಿ ಆಡಳಿತದಲ್ಲಿ ಹೆಸರು ಬದಲಾವಣೆಗೊಂಡ ಮೂರನೇ ನಗರ ಇದಾಗಲಿದೆ. ಜನವರಿ 2019ರಲ್ಲಿ ಅಲಹಾಬಾದ್‌ ಹೆಸರನ್ನು ಪ್ರಯಾಗರಾಜ್‌ ಎಂದು ಬದಲಿಸಲಾಗಿತ್ತು.

ಅಲಿಘರ್ ಮೇಯರ್ ಪ್ರಶಾಂತ್ ಸಿಂಘಾಲ್ ಈ ಬಗ್ಗೆ ಮಾತನಾಡುತ್ತಾ, ನಿನ್ನೆ ನಡೆದ ಸಭೆಯಲ್ಲಿ ಅಲಿಘರ್ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾವನೆಯನ್ನು ಮಂಡಿಸಲಾಯಿತು. ಎಲ್ಲಾ ಕೌನ್ಸಿಲರ್‌ಗಳು ಇದನ್ನು ಸರ್ವಾನುಮತದಿಂದ ಬೆಂಬಲಿಸಿದರು. ಈಗ ಈ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗುವುದು. ಸರಕಾರವು ಇದರ ಬಗ್ಗೆ ಗಮನಹರಿಸಿ ನಮ್ಮ ಬೇಡಿಕೆಯನ್ನು ಈಡೇರಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಅಲಿಗಢದ ಹೆಸರನ್ನು ಹರಿಗಢ ಎಂದು ಬದಲಾಯಿಸಲು ಬಹಳ ಸಮಯದಿಂದ ಬೇಡಿಕೆ ಬಂದಿತ್ತು ಎಂದು  ಹೇಳಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದೊಳಗಿನ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶದ ಹೆಸರನ್ನು ಬದಲಾಯಿಸಬಹುದು. ಹೆಸರು ಬದಲಾವಣೆಯ ನಿರ್ಣಯವನ್ನು ಸ್ಥಳೀಯ ಆಡಳಿತ ಸರ್ವಾನುಮತದಿಂದ ಅನುಮೋದಿಸಿದ ನಂತರ ಅದನ್ನು ರಾಜ್ಯ ಸರ್ಕಾರದ ಮುಂದಿಡಲಾಗುತ್ತದೆ. ನಂತರ ನಿರ್ಣಯವನ್ನು ರಾಜ್ಯ ಸರ್ಕಾರವು ಅನುಮೋದನೆಗಾಗಿ ಗೃಹ ಸಚಿವಾಲಯಕ್ಕೆ ಕಳುಹಿಸುತ್ತದೆ. ಸಚಿವಾಲಯ ಮತ್ತು ಇತರ ಸಂಬಂಧಿತ ಇಲಾಖೆಗಳು ನಿರ್ಣಯವನ್ನು ಅನುಮೋದಿಸಿದರೆ,  ರಾಜ್ಯ ಸರ್ಕಾರವು ಅಧಿಕೃತವಾಗಿ ಹೆಸರನ್ನು ಬದಲಾಯಿಸಬಹುದು.
ಈ ಹಿಂದೆ 2021ರಲ್ಲಿ ಆಗಿನ ಜಿಲ್ಲಾ ಪಂಚಾಯತ್‌ ಕೂಡ ಆಲಿಘರ್‌ ಹೆಸರನ್ನು ಹರಿಘರ್‌ ಎಂದು ಬದಲಾಯಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಿತ್ತು. 2017ರಲ್ಲಿ ಆದಿತ್ಯನಾಥ್‌ ಸರ್ಕಾರ ರಚನೆ ಬಳಿಕ ಪೂರ್ವಾಂಚಲ್‌ ಎಕ್ಸ್‌ಪ್ರೆಸ್‌ವೇ ಸಹಿತ ಹಲವು ಯೋಜನೆಗಳ ಹೆಸರು ಬದಲಾಯಿಸಿದೆ. ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರದ ಅವಧಿಯಲ್ಲಿದ್ದ ಸಮಾಜವಾದಿ ಅಂಬುಲೆನ್ಸ್‌ ಸ್ವಾಸ್ಥ್ಯ ಸೇವಾ ಅಂಬುಲೆನ್ಸ್‌ ಸೇವೆಯ ಹೆಸರಿನಲ್ಲಿನ ಸಮಾಜವಾದಿ ಪದವನ್ನು ಈಗಿನ ಸರ್ಕಾರ ತೆಗೆದು ಹಾಕಿದೆ.
ನಮಗೆ ಒಳ್ಳೆಯದೆಂದು ಅನಿಸಿದ್ದನ್ನು ಮಾಡಿದ್ದೇವೆ. ನಾವು ಮೊಘಲ್ ಸರಾಯ್‌ನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ನಗರ ಎಂದು ಮರುನಾಮಕರಣ ಮಾಡಿದ್ದೇವೆ. ಅಲಹಾಬಾದ್‌ನ್ನು ಪ್ರಯಾಗ್‌ರಾಜ್‌ ಎಂದು ಮತ್ತು ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಜಿಲ್ಲೆ ಎಂದು ಮರುನಾಮಕರಣ ಮಾಡಿದ್ದೇವೆ. ಅಗತ್ಯವಿರುವಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಯೋಗಿ ಆದಿತ್ಯನಾಥ್ ಈ ಮೊದಲು ಹೇಳಿದ್ದರು.
ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...