Homeಮುಖಪುಟಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

- Advertisement -
- Advertisement -

ಅಲಹಾಬಾದ್ ಮತ್ತು ಫೈಜಾಬಾದ್‌ ಬಳಿಕ ಇದೀಗ ಉತ್ತರ ಪ್ರದೇಶದ ಮತ್ತೊಂದು ಪ್ರಮುಖ ನಗರದ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ. ಅಲಿಘರ್ ಮುನ್ಸಿಪಲ್ ಕಾರ್ಪೊರೇಷನ್ ನಗರದ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

ನಿನ್ನೆ ನಡೆದ ಸಭೆಯಲ್ಲಿ ಮೇಯರ್ ಪ್ರಶಾಂತ್ ಸಿಂಘಾಲ್ ಪ್ರಸ್ತಾವನೆ ಸಲ್ಲಿಸಿದ್ದು, ಎಲ್ಲಾ ಕೌನ್ಸಿಲರ್‌ಗಳು ಪ್ರಸ್ತಾವನೆಗೆ ಬೆಂಬಲಿಸಿದ್ದಾರೆ. ಈ ಪ್ರಸ್ತಾವನೆಗೆ ಉತ್ತರಪ್ರದೇಶ ಸರ್ಕಾರ ಅನುಮೋದನೆ ನೀಡಿದರೆ ಯೋಗಿ ಆಡಳಿತದಲ್ಲಿ ಹೆಸರು ಬದಲಾವಣೆಗೊಂಡ ಮೂರನೇ ನಗರ ಇದಾಗಲಿದೆ. ಜನವರಿ 2019ರಲ್ಲಿ ಅಲಹಾಬಾದ್‌ ಹೆಸರನ್ನು ಪ್ರಯಾಗರಾಜ್‌ ಎಂದು ಬದಲಿಸಲಾಗಿತ್ತು.

ಅಲಿಘರ್ ಮೇಯರ್ ಪ್ರಶಾಂತ್ ಸಿಂಘಾಲ್ ಈ ಬಗ್ಗೆ ಮಾತನಾಡುತ್ತಾ, ನಿನ್ನೆ ನಡೆದ ಸಭೆಯಲ್ಲಿ ಅಲಿಘರ್ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾವನೆಯನ್ನು ಮಂಡಿಸಲಾಯಿತು. ಎಲ್ಲಾ ಕೌನ್ಸಿಲರ್‌ಗಳು ಇದನ್ನು ಸರ್ವಾನುಮತದಿಂದ ಬೆಂಬಲಿಸಿದರು. ಈಗ ಈ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗುವುದು. ಸರಕಾರವು ಇದರ ಬಗ್ಗೆ ಗಮನಹರಿಸಿ ನಮ್ಮ ಬೇಡಿಕೆಯನ್ನು ಈಡೇರಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಅಲಿಗಢದ ಹೆಸರನ್ನು ಹರಿಗಢ ಎಂದು ಬದಲಾಯಿಸಲು ಬಹಳ ಸಮಯದಿಂದ ಬೇಡಿಕೆ ಬಂದಿತ್ತು ಎಂದು  ಹೇಳಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದೊಳಗಿನ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶದ ಹೆಸರನ್ನು ಬದಲಾಯಿಸಬಹುದು. ಹೆಸರು ಬದಲಾವಣೆಯ ನಿರ್ಣಯವನ್ನು ಸ್ಥಳೀಯ ಆಡಳಿತ ಸರ್ವಾನುಮತದಿಂದ ಅನುಮೋದಿಸಿದ ನಂತರ ಅದನ್ನು ರಾಜ್ಯ ಸರ್ಕಾರದ ಮುಂದಿಡಲಾಗುತ್ತದೆ. ನಂತರ ನಿರ್ಣಯವನ್ನು ರಾಜ್ಯ ಸರ್ಕಾರವು ಅನುಮೋದನೆಗಾಗಿ ಗೃಹ ಸಚಿವಾಲಯಕ್ಕೆ ಕಳುಹಿಸುತ್ತದೆ. ಸಚಿವಾಲಯ ಮತ್ತು ಇತರ ಸಂಬಂಧಿತ ಇಲಾಖೆಗಳು ನಿರ್ಣಯವನ್ನು ಅನುಮೋದಿಸಿದರೆ,  ರಾಜ್ಯ ಸರ್ಕಾರವು ಅಧಿಕೃತವಾಗಿ ಹೆಸರನ್ನು ಬದಲಾಯಿಸಬಹುದು.
ಈ ಹಿಂದೆ 2021ರಲ್ಲಿ ಆಗಿನ ಜಿಲ್ಲಾ ಪಂಚಾಯತ್‌ ಕೂಡ ಆಲಿಘರ್‌ ಹೆಸರನ್ನು ಹರಿಘರ್‌ ಎಂದು ಬದಲಾಯಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಿತ್ತು. 2017ರಲ್ಲಿ ಆದಿತ್ಯನಾಥ್‌ ಸರ್ಕಾರ ರಚನೆ ಬಳಿಕ ಪೂರ್ವಾಂಚಲ್‌ ಎಕ್ಸ್‌ಪ್ರೆಸ್‌ವೇ ಸಹಿತ ಹಲವು ಯೋಜನೆಗಳ ಹೆಸರು ಬದಲಾಯಿಸಿದೆ. ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರದ ಅವಧಿಯಲ್ಲಿದ್ದ ಸಮಾಜವಾದಿ ಅಂಬುಲೆನ್ಸ್‌ ಸ್ವಾಸ್ಥ್ಯ ಸೇವಾ ಅಂಬುಲೆನ್ಸ್‌ ಸೇವೆಯ ಹೆಸರಿನಲ್ಲಿನ ಸಮಾಜವಾದಿ ಪದವನ್ನು ಈಗಿನ ಸರ್ಕಾರ ತೆಗೆದು ಹಾಕಿದೆ.
ನಮಗೆ ಒಳ್ಳೆಯದೆಂದು ಅನಿಸಿದ್ದನ್ನು ಮಾಡಿದ್ದೇವೆ. ನಾವು ಮೊಘಲ್ ಸರಾಯ್‌ನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ನಗರ ಎಂದು ಮರುನಾಮಕರಣ ಮಾಡಿದ್ದೇವೆ. ಅಲಹಾಬಾದ್‌ನ್ನು ಪ್ರಯಾಗ್‌ರಾಜ್‌ ಎಂದು ಮತ್ತು ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಜಿಲ್ಲೆ ಎಂದು ಮರುನಾಮಕರಣ ಮಾಡಿದ್ದೇವೆ. ಅಗತ್ಯವಿರುವಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಯೋಗಿ ಆದಿತ್ಯನಾಥ್ ಈ ಮೊದಲು ಹೇಳಿದ್ದರು.
ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...